<p><strong>ನವದೆಹಲಿ</strong>: ‘ಪೊಲೀಸ್ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ವಿಶೇಷ ಅಧಿಕಾರ ಹೊಂದಿರುವವರು ಸಹ ಇದರಿಂದ ಹೊರತಾಗಿಲ್ಲ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ. ರಮಣ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (ಎನ್ಎಎಲ್ಎಸ್ಎ) ಆ್ಯಪ್ ಅನ್ನು ಭಾನುವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕಸ್ಟಡಿಯಲ್ಲಿದ್ದಾಗ ಹಿಂಸೆ ನೀಡುವುದು ಮತ್ತು ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಮುಂದುವರಿದಿವೆ’ ಎಂದು ಹೇಳಿದರು.</p>.<p>‘ವಿಶೇಷ ಅಧಿಕಾರ ಹೊಂದಿರುವವರಿಗೂ ಥರ್ಡ್ ಡಿಗ್ರಿಟ್ರೀಟ್ಮೆಂಟ್ ನೀಡಲಾಗುತ್ತಿದೆ. ಆದ್ದರಿಂದ, ದೌರ್ಜನ್ಯಗಳನ್ನು ತಡೆಯುವ ಕುರಿತು ದೇಶದಾದ್ಯಂತ ಪೊಲೀಸ್ ಅಧಿಕಾರಿಗಳಿಗೂ ಎನ್ಎಎಲ್ಎಸ್ಎ ತರಬೇತಿ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಪೊಲೀಸ್ ದೌರ್ಜನ್ಯಗಳನ್ನು ನಿಯಂತ್ರಿಸಲು ಕಾನೂನಿನ ನೆರವು ಪಡೆಯುವ ಸಾಂವಿಧಾನಿಕ ಹಕ್ಕು ಮತ್ತು ಉಚಿತ ಕಾನೂನು ಸೇವೆಗಳ ಲಭ್ಯತೆಯ ಬಗ್ಗೆ ಅಗತ್ಯ ಮಾಹಿತಿಯನ್ನು ಒದಗಿಸುವ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಾರಾಗೃಹದಲ್ಲಿ ಕಾನೂನು ನೆರವು ನೀಡುವ ಕುರಿತು ಫಲಕಗಳನ್ನು ಅಳವಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲ ವರ್ಗದವರಿಗೂ ಒಂದೇ ರೀತಿಯಲ್ಲಿ ನ್ಯಾಯ ದೊರೆಯಬೇಕು. ಆಗ ಮಾತ್ರ ಕಾನೂನಿನ ಅನ್ವಯ ಆಡಳಿತ ನಡೆಸಲು ಸಾಧ್ಯ. ಆದರೆ, ಗ್ರಾಮೀಣ ಮತ್ತು ದುರ್ಗಮ ಸ್ಥಳಗಳಲ್ಲಿರುವವರಿಗೆ ನ್ಯಾಯಾಂಗದ ವ್ಯವಸ್ಥೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಈಗಿರುವ ಕೊರತೆಗಳನ್ನು ನೀಗಿಸುವ ಕಾರ್ಯ ನಡೆಯಬೇಕಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪೊಲೀಸ್ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ವಿಶೇಷ ಅಧಿಕಾರ ಹೊಂದಿರುವವರು ಸಹ ಇದರಿಂದ ಹೊರತಾಗಿಲ್ಲ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ. ರಮಣ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (ಎನ್ಎಎಲ್ಎಸ್ಎ) ಆ್ಯಪ್ ಅನ್ನು ಭಾನುವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕಸ್ಟಡಿಯಲ್ಲಿದ್ದಾಗ ಹಿಂಸೆ ನೀಡುವುದು ಮತ್ತು ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಮುಂದುವರಿದಿವೆ’ ಎಂದು ಹೇಳಿದರು.</p>.<p>‘ವಿಶೇಷ ಅಧಿಕಾರ ಹೊಂದಿರುವವರಿಗೂ ಥರ್ಡ್ ಡಿಗ್ರಿಟ್ರೀಟ್ಮೆಂಟ್ ನೀಡಲಾಗುತ್ತಿದೆ. ಆದ್ದರಿಂದ, ದೌರ್ಜನ್ಯಗಳನ್ನು ತಡೆಯುವ ಕುರಿತು ದೇಶದಾದ್ಯಂತ ಪೊಲೀಸ್ ಅಧಿಕಾರಿಗಳಿಗೂ ಎನ್ಎಎಲ್ಎಸ್ಎ ತರಬೇತಿ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಪೊಲೀಸ್ ದೌರ್ಜನ್ಯಗಳನ್ನು ನಿಯಂತ್ರಿಸಲು ಕಾನೂನಿನ ನೆರವು ಪಡೆಯುವ ಸಾಂವಿಧಾನಿಕ ಹಕ್ಕು ಮತ್ತು ಉಚಿತ ಕಾನೂನು ಸೇವೆಗಳ ಲಭ್ಯತೆಯ ಬಗ್ಗೆ ಅಗತ್ಯ ಮಾಹಿತಿಯನ್ನು ಒದಗಿಸುವ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಾರಾಗೃಹದಲ್ಲಿ ಕಾನೂನು ನೆರವು ನೀಡುವ ಕುರಿತು ಫಲಕಗಳನ್ನು ಅಳವಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲ ವರ್ಗದವರಿಗೂ ಒಂದೇ ರೀತಿಯಲ್ಲಿ ನ್ಯಾಯ ದೊರೆಯಬೇಕು. ಆಗ ಮಾತ್ರ ಕಾನೂನಿನ ಅನ್ವಯ ಆಡಳಿತ ನಡೆಸಲು ಸಾಧ್ಯ. ಆದರೆ, ಗ್ರಾಮೀಣ ಮತ್ತು ದುರ್ಗಮ ಸ್ಥಳಗಳಲ್ಲಿರುವವರಿಗೆ ನ್ಯಾಯಾಂಗದ ವ್ಯವಸ್ಥೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಈಗಿರುವ ಕೊರತೆಗಳನ್ನು ನೀಗಿಸುವ ಕಾರ್ಯ ನಡೆಯಬೇಕಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>