<p><strong>ಇಂಫಾಲ್:</strong> ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿರುದ್ಧ ಫೇಸ್ಬುಕ್ನಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರನ್ನು ಗುರಿಯಾಗಿಸಿಕೊಂಡು ನಿಂದನೀಯ ಮತ್ತು ಬೆದರಿಕೆ ಸಂದೇಶವನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿತ್ತು. </p><p>ಪ್ರಕರಣದ ಸಂಬಂಧ 'ಮಣಿಪುರ ನ್ಯೂಸ್ ಗ್ರೂಪ್ 2024' ಫೇಸ್ಬುಕ್ ಪುಟದ ಅಡ್ಮಿನ್ಗಳಾದ ನಿಂಗೋಂಬಮ್ ಡಿಂಕು (22), ಮಲೇನ್ಗಂಬ (21) ಮತ್ತು ತೊಂಗಮ್ ರೋಮೆನ್ (39) ಅವರನ್ನು ಬಂಧಿಸಲಾಗಿದೆ. </p><p>ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. </p><p>ಸಾಮಾಜಿಕ ಮಾಧ್ಯಮದಲ್ಲಿ ಹಿಂಸಾಚಾರಕ್ಕೆ ಕರೆ ಮತ್ತು ಸಿಎಂ ಹಾಗೂ ಸಂಪುಟ ಸಚಿವರನ್ನು ಮುಗಿಸಲು ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. </p>.ಮಣಿಪುರ | ವಲಸೆ ಕಾರ್ಮಿಕರ ಹತ್ಯೆ: ಉಗ್ರಗಾಮಿ ಸಂಘಟನೆಯ 8 ಸದಸ್ಯರ ಬಂಧನ.ಜನಾಂಗೀಯ ಹಿಂಸಾಚಾರ: ವಿವರ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿರುದ್ಧ ಫೇಸ್ಬುಕ್ನಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರನ್ನು ಗುರಿಯಾಗಿಸಿಕೊಂಡು ನಿಂದನೀಯ ಮತ್ತು ಬೆದರಿಕೆ ಸಂದೇಶವನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿತ್ತು. </p><p>ಪ್ರಕರಣದ ಸಂಬಂಧ 'ಮಣಿಪುರ ನ್ಯೂಸ್ ಗ್ರೂಪ್ 2024' ಫೇಸ್ಬುಕ್ ಪುಟದ ಅಡ್ಮಿನ್ಗಳಾದ ನಿಂಗೋಂಬಮ್ ಡಿಂಕು (22), ಮಲೇನ್ಗಂಬ (21) ಮತ್ತು ತೊಂಗಮ್ ರೋಮೆನ್ (39) ಅವರನ್ನು ಬಂಧಿಸಲಾಗಿದೆ. </p><p>ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. </p><p>ಸಾಮಾಜಿಕ ಮಾಧ್ಯಮದಲ್ಲಿ ಹಿಂಸಾಚಾರಕ್ಕೆ ಕರೆ ಮತ್ತು ಸಿಎಂ ಹಾಗೂ ಸಂಪುಟ ಸಚಿವರನ್ನು ಮುಗಿಸಲು ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. </p>.ಮಣಿಪುರ | ವಲಸೆ ಕಾರ್ಮಿಕರ ಹತ್ಯೆ: ಉಗ್ರಗಾಮಿ ಸಂಘಟನೆಯ 8 ಸದಸ್ಯರ ಬಂಧನ.ಜನಾಂಗೀಯ ಹಿಂಸಾಚಾರ: ವಿವರ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>