<p><strong>ಇಂಫಾಲ್:</strong> ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಿಷೇಧಿತ ಬಂಡುಕೋರರ ಸಂಘಟನೆ ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (ಪ್ರೆಪಕ್-ಪ್ರೊ)ನ ಮೂವರು ಸದಸ್ಯರನ್ನು ಬಂಧಿಸಲಾಗಿದೆ.</p>.<p>ಬಂಧಿತರು ನಿಷೇಧಿತ ಸಂಘಟನೆಯ ಸದಸ್ಯರಾಗಿದ್ದು, ಸುಲಿಗೆಯಲ್ಲಿ ತೊಡಗಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<p>‘ನಮಗೆ ಸಿಕ್ಕ ಮಾಹಿತಿಯ ಅನುಸಾರ ತೌಬಲ್ನ ಕಮಾಂಡೊ ಘಟಕ ಮತ್ತು 4 ಎ.ಆರ್ (ಅಸ್ಸಾಂ ರೈಫಲ್ಸ್) ನೇತೃತ್ವದ ಒಸಿ -ಸಿಡಿಒ ತಂಡಗಳು ತೌಬಲ್ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಎಚ್ಡಿಎಫ್ಸಿ ಬ್ಯಾಂಕ್ ಬಳಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದವು’ ಎಂದು ಪ್ರಕಟಣೆ ತಿಳಿಸಿದೆ.</p>.<p>ಬಂಧಿತರನ್ನು ನಂಬ್ರಮ್ ಇಂದ್ರಜಿತ್ ಸಿಂಗ್, ರಾಜ್ಕುಮಾರ್ ಮೋಹನ್ ಸನಾ ಮತ್ತು ವಾರೆಪಮ್ ಆಲ್ಬರ್ಟ್ ಮೈತೇಯಿ ಥೋಯಿ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಇವರು ಸುಲಿಗೆಯಲ್ಲಿ ತೊಡಗಿದ್ದನ್ನು ಒಪ್ಪಿಕೊಂಡಿದ್ದಾರೆ.</p>.<p>ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಚುರಾಚಂದ್ಪುರ ಮತ್ತು ಚಂದೇಲ್ ಜಿಲ್ಲೆಗಳಲ್ಲಿ 10 ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಮತ್ತೊಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಿಷೇಧಿತ ಬಂಡುಕೋರರ ಸಂಘಟನೆ ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (ಪ್ರೆಪಕ್-ಪ್ರೊ)ನ ಮೂವರು ಸದಸ್ಯರನ್ನು ಬಂಧಿಸಲಾಗಿದೆ.</p>.<p>ಬಂಧಿತರು ನಿಷೇಧಿತ ಸಂಘಟನೆಯ ಸದಸ್ಯರಾಗಿದ್ದು, ಸುಲಿಗೆಯಲ್ಲಿ ತೊಡಗಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<p>‘ನಮಗೆ ಸಿಕ್ಕ ಮಾಹಿತಿಯ ಅನುಸಾರ ತೌಬಲ್ನ ಕಮಾಂಡೊ ಘಟಕ ಮತ್ತು 4 ಎ.ಆರ್ (ಅಸ್ಸಾಂ ರೈಫಲ್ಸ್) ನೇತೃತ್ವದ ಒಸಿ -ಸಿಡಿಒ ತಂಡಗಳು ತೌಬಲ್ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಎಚ್ಡಿಎಫ್ಸಿ ಬ್ಯಾಂಕ್ ಬಳಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದವು’ ಎಂದು ಪ್ರಕಟಣೆ ತಿಳಿಸಿದೆ.</p>.<p>ಬಂಧಿತರನ್ನು ನಂಬ್ರಮ್ ಇಂದ್ರಜಿತ್ ಸಿಂಗ್, ರಾಜ್ಕುಮಾರ್ ಮೋಹನ್ ಸನಾ ಮತ್ತು ವಾರೆಪಮ್ ಆಲ್ಬರ್ಟ್ ಮೈತೇಯಿ ಥೋಯಿ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಇವರು ಸುಲಿಗೆಯಲ್ಲಿ ತೊಡಗಿದ್ದನ್ನು ಒಪ್ಪಿಕೊಂಡಿದ್ದಾರೆ.</p>.<p>ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಚುರಾಚಂದ್ಪುರ ಮತ್ತು ಚಂದೇಲ್ ಜಿಲ್ಲೆಗಳಲ್ಲಿ 10 ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಮತ್ತೊಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>