<p><strong>ರಾಯಪುರ</strong>: ಇತ್ತೀಚಿನ ಅಮೆರಿಕ ಪ್ರವಾಸದ ವೇಳೆ ತಮ್ಮ ಹೇಳಿಕೆ ಮೂಲಕ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಛತ್ತೀಸಗಢದಲ್ಲಿ ಮೂರು ಎಫ್ಐಆರ್ ದಾಖಲಾಗಿದೆ.</p><p>ರಾಜಧಾನಿ ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್, ಬಿಲಾಸಪುರ ಜಿಲ್ಲೆಯ ಬಿಲಾಸಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೂರನೇ ಪ್ರಕರಣ ದುರ್ಗ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p><p>ಬಿಜೆಪಿ ನಾಯಕರು ನೀಡಿರುವ ದೂರುಗಳ ಅನ್ವಯ ಎಫ್ಐಆರ್ ದಾಖಲಾಗಿವೆ.</p><p>ಈ ಎಲ್ಲವುದರಲ್ಲೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299 (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ದುರುದ್ದೇಶಪೂರಿತ ಕೃತ್ಯ) ಮತ್ತು 302 (ಉದ್ದೇಶಪೂರ್ವಕವಾಗಿ ಪದಗಳು, ಶಬ್ದಗಳು, ಸನ್ನೆಗಳು ಅಥವಾ ವಸ್ತುಗಳಿಂದ ಬೇರೊಬ್ಬರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಭಾರತದಲ್ಲಿ ಗುರುದ್ವಾರಗಳಿಗೆ ತೆರಳುವಾಗ ಸಿಖ್ಖರು ಟರ್ಬನ್ ಧರಿಸಲು ಅವಕಾಶ ನೀಡಲಾಗುತ್ತದೆಯೇ ಎಂದು ರಾಹುಲ್ ಪ್ರಶ್ನಿಸಿದ್ದರು. ರಾಹುಲ್ ಹೇಳಿಕೆಯು ಭಾರತದ ಸಿಖ್ಖರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಎಂದು ರಾಯಪುರದಲ್ಲಿ ಬಿಜೆಪಿ ವಕ್ತಾರ ಅಮರಜಿತ್ ಸಿಂಗ್ ಛಾಬ್ರಾ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಇಡೀ ಜಗತ್ತಿನಲ್ಲಿ, ಭಾರತದಲ್ಲೂ ಸಿಖ್ಖರು ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸಿರುತ್ತಾರೆ. ಅವರಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಪ್ರಧಾನಿ ಸಹ ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸುತ್ತಾರೆ. ರಾಹುಲ್ ಗಾಂಧಿಯವರ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ದುರುದ್ದೇಶದಿಂದ ಕೂಡಿದೆ’ಎಂದೂ ಅವರು ದೂರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಇತ್ತೀಚಿನ ಅಮೆರಿಕ ಪ್ರವಾಸದ ವೇಳೆ ತಮ್ಮ ಹೇಳಿಕೆ ಮೂಲಕ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಛತ್ತೀಸಗಢದಲ್ಲಿ ಮೂರು ಎಫ್ಐಆರ್ ದಾಖಲಾಗಿದೆ.</p><p>ರಾಜಧಾನಿ ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್, ಬಿಲಾಸಪುರ ಜಿಲ್ಲೆಯ ಬಿಲಾಸಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೂರನೇ ಪ್ರಕರಣ ದುರ್ಗ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p><p>ಬಿಜೆಪಿ ನಾಯಕರು ನೀಡಿರುವ ದೂರುಗಳ ಅನ್ವಯ ಎಫ್ಐಆರ್ ದಾಖಲಾಗಿವೆ.</p><p>ಈ ಎಲ್ಲವುದರಲ್ಲೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299 (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ದುರುದ್ದೇಶಪೂರಿತ ಕೃತ್ಯ) ಮತ್ತು 302 (ಉದ್ದೇಶಪೂರ್ವಕವಾಗಿ ಪದಗಳು, ಶಬ್ದಗಳು, ಸನ್ನೆಗಳು ಅಥವಾ ವಸ್ತುಗಳಿಂದ ಬೇರೊಬ್ಬರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಭಾರತದಲ್ಲಿ ಗುರುದ್ವಾರಗಳಿಗೆ ತೆರಳುವಾಗ ಸಿಖ್ಖರು ಟರ್ಬನ್ ಧರಿಸಲು ಅವಕಾಶ ನೀಡಲಾಗುತ್ತದೆಯೇ ಎಂದು ರಾಹುಲ್ ಪ್ರಶ್ನಿಸಿದ್ದರು. ರಾಹುಲ್ ಹೇಳಿಕೆಯು ಭಾರತದ ಸಿಖ್ಖರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಎಂದು ರಾಯಪುರದಲ್ಲಿ ಬಿಜೆಪಿ ವಕ್ತಾರ ಅಮರಜಿತ್ ಸಿಂಗ್ ಛಾಬ್ರಾ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಇಡೀ ಜಗತ್ತಿನಲ್ಲಿ, ಭಾರತದಲ್ಲೂ ಸಿಖ್ಖರು ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸಿರುತ್ತಾರೆ. ಅವರಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಪ್ರಧಾನಿ ಸಹ ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸುತ್ತಾರೆ. ರಾಹುಲ್ ಗಾಂಧಿಯವರ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ದುರುದ್ದೇಶದಿಂದ ಕೂಡಿದೆ’ಎಂದೂ ಅವರು ದೂರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>