<p><strong>ಅಮೇಥಿ</strong>: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಕಲ್ಲು ಹೊಡೆದು ಕೋತಿಯನ್ನು ಕೊಂದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂವರನ್ನು ಬಂಧಿಸಲಾಗಿದೆ.</p>.<p>ಸಂಗಮ್, ರಾಧೆ ಮತ್ತು ಸೂರಜ್ ಎಂಬ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪಿಪರ್ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧೀರೇಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.</p>.<p>ಈ ಮೂವರು ಯುವಕರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 147, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಕ್ಕಾಗಿ ಸೆಕ್ಷನ್ 223 ಮತ್ತು ಪ್ರಾಣಿಯನ್ನು ಕೊಂದ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ ಎಸಗಿದ್ದಕ್ಕಾಗಿ ಸೆಕ್ಷನ್ 429 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.</p>.<p>ಕೋತಿಯನ್ನು ರಕ್ಷಿಸಲು ಯತ್ನಿಸಿದ ದೇವೇಂದ್ರ ಸಿಂಗ್ ಎಂಬಾತನ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೊಲೀಸರ ಪ್ರಕಾರ, ಅಮೇಥಿ ಜಿಲ್ಲೆಯ ಪಿಪರ್ಪುರ ಪೊಲೀಸ್ ವೃತ್ತದ ವ್ಯಾಪ್ತಿಯ ದುರ್ಗಾಪುರ ಮಾರುಕಟ್ಟೆಯ ಬಿಯರ್ ಅಂಗಡಿಯ ಬಳಿ ಈ ಘಟನೆ ನಡೆದಿದೆ.</p>.<p>ಮದ್ಯದ ಅಮಲಿನಲ್ಲಿದ್ದ ಮೂವರು ಯುವಕರು ಬಿಯರ್ ಶಾಪ್ನಿಂದ ಹೊರಬಂದಾಗ ಕೋತಿ ಗಾಯಗೊಂಡು ಶಾಪ್ ಬಳಿ ರಸ್ತೆಬದಿಯಲ್ಲಿ ಕುಳಿತಿತ್ತು.</p>.<p>ಗಾಯಗೊಂಡಿದ್ದ ಕೋತಿ ಚಲನರಹಿತವಾಗುವವರೆಗೂ ದಾಳಿ ಮಾಡುತ್ತಿದ್ದರು ಎಂದು ವರದಿಯಾಗಿದೆ.</p>.<p>ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಶವವನ್ನು ವಿಲೇವಾರಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೇಥಿ</strong>: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಕಲ್ಲು ಹೊಡೆದು ಕೋತಿಯನ್ನು ಕೊಂದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂವರನ್ನು ಬಂಧಿಸಲಾಗಿದೆ.</p>.<p>ಸಂಗಮ್, ರಾಧೆ ಮತ್ತು ಸೂರಜ್ ಎಂಬ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪಿಪರ್ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧೀರೇಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.</p>.<p>ಈ ಮೂವರು ಯುವಕರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 147, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಕ್ಕಾಗಿ ಸೆಕ್ಷನ್ 223 ಮತ್ತು ಪ್ರಾಣಿಯನ್ನು ಕೊಂದ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ ಎಸಗಿದ್ದಕ್ಕಾಗಿ ಸೆಕ್ಷನ್ 429 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.</p>.<p>ಕೋತಿಯನ್ನು ರಕ್ಷಿಸಲು ಯತ್ನಿಸಿದ ದೇವೇಂದ್ರ ಸಿಂಗ್ ಎಂಬಾತನ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೊಲೀಸರ ಪ್ರಕಾರ, ಅಮೇಥಿ ಜಿಲ್ಲೆಯ ಪಿಪರ್ಪುರ ಪೊಲೀಸ್ ವೃತ್ತದ ವ್ಯಾಪ್ತಿಯ ದುರ್ಗಾಪುರ ಮಾರುಕಟ್ಟೆಯ ಬಿಯರ್ ಅಂಗಡಿಯ ಬಳಿ ಈ ಘಟನೆ ನಡೆದಿದೆ.</p>.<p>ಮದ್ಯದ ಅಮಲಿನಲ್ಲಿದ್ದ ಮೂವರು ಯುವಕರು ಬಿಯರ್ ಶಾಪ್ನಿಂದ ಹೊರಬಂದಾಗ ಕೋತಿ ಗಾಯಗೊಂಡು ಶಾಪ್ ಬಳಿ ರಸ್ತೆಬದಿಯಲ್ಲಿ ಕುಳಿತಿತ್ತು.</p>.<p>ಗಾಯಗೊಂಡಿದ್ದ ಕೋತಿ ಚಲನರಹಿತವಾಗುವವರೆಗೂ ದಾಳಿ ಮಾಡುತ್ತಿದ್ದರು ಎಂದು ವರದಿಯಾಗಿದೆ.</p>.<p>ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಶವವನ್ನು ವಿಲೇವಾರಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>