<p><strong>ಪಿಲಿಭಿತ್/ ಚಂಡೀಗಢ:</strong> ಗುರುದಾಸಪುರದಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರು ಶಂಕಿತ ಖಾಲಿಸ್ತಾನಿ ಉಗ್ರರು ಪಿಲಿಭಿತ್ನಲ್ಲಿ ಪೊಲೀಸರೊಂದಿಗಿನ ಎನ್ಕೌಂಟರ್ನಲ್ಲಿ ಬಲಿಯಾಗಿದ್ದಾರೆ.</p><p>ಪಿಲಿಭಿತ್ನ ಪೂರನ್ಪುರ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡ ಹಾಗೂ ‘ಖಾಲಿಸ್ತಾನಿ ಜಿಂದಾಬಾದ್ ಫೋರ್ಸ್’ (ಕೆಝಡ್ಎಫ್) ಸಂಘಟನೆಗೆ ಸೇರಿದ ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.</p><p>ಹತ್ಯೆಯಾದ ಶಂಕಿತ ಉಗ್ರರನ್ನು ವರಿಂದರ್ ಸಿಂಗ್ ಅಲಿಯಾಸ್ ರವಿ (23), ಗುರ್ವಿಂದರ್ ಸಿಂಗ್ (25) ಮತ್ತು ಜಶನ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿರುವುದಾಗಿ ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.</p><p>‘ಈ ಕಾರ್ಯಾಚರಣೆಯು ಪಾಕಿಸ್ತಾನಿ ಪ್ರಾಯೋಜಿತ ಕೆಝಡ್ಎಫ್ ವಿರುದ್ಧದ ಹೋರಾಟದಲ್ಲಿ ದೊರೆತ ಬಲುದೊಡ್ಡ ಯಶಸ್ಸು’ ಎಂದು ಅವರು ಹೇಳಿದ್ದಾರೆ.</p><p>ಎನ್ಕೌಂಟರ್ನಲ್ಲಿ ಬಲಿಯಾದ ಮೂವರೂ ಪಂಜಾಬ್ನ ಗುರುದಾಸಪುರ ಜಿಲ್ಲೆಯ ಕಲಾನೌರ್ ಪ್ರದೇಶದ ನಿವಾಸಿಗಳು. ಕಲಾನೌರ್ನ ಬಕ್ಷೀವಾಲಾ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಇವರ ಮೇಲಿದೆ. ಈಚೆಗೆ ನಡೆದ ಗ್ರೆನೇಡ್ ದಾಳಿ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.</p><p>‘ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡ ಮೂವರನ್ನು ಪೂರನ್ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು’ ಎಂದು ಉತ್ತರ ಪ್ರದೇಶದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.</p><p>ತಲಾ ಎರಡು ಎಕೆ–47 ರೈಫಲ್ ಮತ್ತು ಪಿಸ್ತೂಲ್ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p><p>‘ಕೆಝಡ್ಎಫ್ ಸಂಘಟನೆಯ ಇಡೀ ಜಾಲವನ್ನು ಭೇದಿಸಲು ಮತ್ತು ಹತ್ಯೆಯಾದ ಉಗ್ರರ ಜತೆ ಸಂಪರ್ಕ ಹೊಂದಿರುವವರ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದ್ದಾರೆ.</p><p>ಪಂಜಾಬ್ನ ವಿವಿಧೆಡೆ ಈ ತಿಂಗಳು ಮೂರು ಕಡೆ ಬಾಂಬ್ ಸ್ಫೋಟ ಘಟನೆ ನಡೆದಿದ್ದು, ಅದರ ಹೊಣೆಯನ್ನು ಕೆಝಡ್ಎಫ್ ಸಂಘಟನೆ ಹೊತ್ತುಕೊಂಡಿದೆ.</p>.<blockquote>‘ಖಾಲಿಸ್ತಾನಿ ಜಿಂದಾಬಾದ್ ಫೋರ್ಸ್’ಗೆ ಸೇರಿದ ಉಗ್ರರು ಪಿಲಿಭಿತ್ನ ಪೂರನ್ಪುರ ಪ್ರದೇಶದಲ್ಲಿ ಎನ್ಕೌಂಟರ್ ಸೋಮವಾರ ಮುಂಜಾನೆ ನಡೆದ ಗುಂಡಿನ ಚಕಮಕಿ</blockquote>.ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್ಐಎ .ಅಮೆರಿಕದಲ್ಲಿ ರೈತ ಬೆಂಬಲಿತ ಹೋರಾಟದ ವೇಳೆ ಖಲಿಸ್ತಾನಿಗಳಿಂದ ಗಾಂಧಿ ಪ್ರತಿಮೆ ವಿರೂಪ.ಲಾವೋಸ್ನಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭೇಟಿಯಾದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿಲಿಭಿತ್/ ಚಂಡೀಗಢ:</strong> ಗುರುದಾಸಪುರದಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರು ಶಂಕಿತ ಖಾಲಿಸ್ತಾನಿ ಉಗ್ರರು ಪಿಲಿಭಿತ್ನಲ್ಲಿ ಪೊಲೀಸರೊಂದಿಗಿನ ಎನ್ಕೌಂಟರ್ನಲ್ಲಿ ಬಲಿಯಾಗಿದ್ದಾರೆ.</p><p>ಪಿಲಿಭಿತ್ನ ಪೂರನ್ಪುರ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡ ಹಾಗೂ ‘ಖಾಲಿಸ್ತಾನಿ ಜಿಂದಾಬಾದ್ ಫೋರ್ಸ್’ (ಕೆಝಡ್ಎಫ್) ಸಂಘಟನೆಗೆ ಸೇರಿದ ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.</p><p>ಹತ್ಯೆಯಾದ ಶಂಕಿತ ಉಗ್ರರನ್ನು ವರಿಂದರ್ ಸಿಂಗ್ ಅಲಿಯಾಸ್ ರವಿ (23), ಗುರ್ವಿಂದರ್ ಸಿಂಗ್ (25) ಮತ್ತು ಜಶನ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿರುವುದಾಗಿ ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.</p><p>‘ಈ ಕಾರ್ಯಾಚರಣೆಯು ಪಾಕಿಸ್ತಾನಿ ಪ್ರಾಯೋಜಿತ ಕೆಝಡ್ಎಫ್ ವಿರುದ್ಧದ ಹೋರಾಟದಲ್ಲಿ ದೊರೆತ ಬಲುದೊಡ್ಡ ಯಶಸ್ಸು’ ಎಂದು ಅವರು ಹೇಳಿದ್ದಾರೆ.</p><p>ಎನ್ಕೌಂಟರ್ನಲ್ಲಿ ಬಲಿಯಾದ ಮೂವರೂ ಪಂಜಾಬ್ನ ಗುರುದಾಸಪುರ ಜಿಲ್ಲೆಯ ಕಲಾನೌರ್ ಪ್ರದೇಶದ ನಿವಾಸಿಗಳು. ಕಲಾನೌರ್ನ ಬಕ್ಷೀವಾಲಾ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಇವರ ಮೇಲಿದೆ. ಈಚೆಗೆ ನಡೆದ ಗ್ರೆನೇಡ್ ದಾಳಿ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.</p><p>‘ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡ ಮೂವರನ್ನು ಪೂರನ್ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು’ ಎಂದು ಉತ್ತರ ಪ್ರದೇಶದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.</p><p>ತಲಾ ಎರಡು ಎಕೆ–47 ರೈಫಲ್ ಮತ್ತು ಪಿಸ್ತೂಲ್ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p><p>‘ಕೆಝಡ್ಎಫ್ ಸಂಘಟನೆಯ ಇಡೀ ಜಾಲವನ್ನು ಭೇದಿಸಲು ಮತ್ತು ಹತ್ಯೆಯಾದ ಉಗ್ರರ ಜತೆ ಸಂಪರ್ಕ ಹೊಂದಿರುವವರ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದ್ದಾರೆ.</p><p>ಪಂಜಾಬ್ನ ವಿವಿಧೆಡೆ ಈ ತಿಂಗಳು ಮೂರು ಕಡೆ ಬಾಂಬ್ ಸ್ಫೋಟ ಘಟನೆ ನಡೆದಿದ್ದು, ಅದರ ಹೊಣೆಯನ್ನು ಕೆಝಡ್ಎಫ್ ಸಂಘಟನೆ ಹೊತ್ತುಕೊಂಡಿದೆ.</p>.<blockquote>‘ಖಾಲಿಸ್ತಾನಿ ಜಿಂದಾಬಾದ್ ಫೋರ್ಸ್’ಗೆ ಸೇರಿದ ಉಗ್ರರು ಪಿಲಿಭಿತ್ನ ಪೂರನ್ಪುರ ಪ್ರದೇಶದಲ್ಲಿ ಎನ್ಕೌಂಟರ್ ಸೋಮವಾರ ಮುಂಜಾನೆ ನಡೆದ ಗುಂಡಿನ ಚಕಮಕಿ</blockquote>.ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್ಐಎ .ಅಮೆರಿಕದಲ್ಲಿ ರೈತ ಬೆಂಬಲಿತ ಹೋರಾಟದ ವೇಳೆ ಖಲಿಸ್ತಾನಿಗಳಿಂದ ಗಾಂಧಿ ಪ್ರತಿಮೆ ವಿರೂಪ.ಲಾವೋಸ್ನಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭೇಟಿಯಾದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>