<p><strong>ತಿರುವನಂತಪುರಂ:</strong> ನೂತನ ಶಿಕ್ಷಣ ಕಾಯ್ದೆ(ಎನ್ಇಪಿ)ಯಲ್ಲಿರುವ ತ್ರಿಭಾಷಾ ಸೂತ್ರದಿಂದ ಇಡಿ ದೇಶಕ್ಕೆ ಒಳಿತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಮರ್ಥಿಸಿಕೊಂಡಿದ್ದಾರೆ.</p><p>ಎನ್ಇಪಿಯಲ್ಲಿರುವ ತ್ರಿಭಾಷಾ ಸೂತ್ರದ ಬಗ್ಗೆ ನಡೆಯುತ್ತಿರುವ ಗಂಭೀರ ಚರ್ಚೆ ಮತ್ತು ದಕ್ಷಿಣ ರಾಜ್ಯಗಳ ವಿರೋಧದ ಕುರಿತು ಗುರುವಾರ ಪ್ರತಿಕ್ರಿಯಿಸಿದ ಸಚಿವರು, ಇಲ್ಲಿ ಕೆಲ ತಪ್ಪು ತಿಳಿವಳಿಕೆ ಆಗಿವೆ ಮತ್ತು ಕೆಲವರು ಇದನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.</p><p>ಕೇರಳದ ತಿರುವನಂತಪುರಂನಲ್ಲಿ ಪ್ರಧಾನ ಮಂತ್ರಿ ಜನವಿಕಾಸ್ ಕಾರ್ಯಕ್ರಮ(ಪಿಎಂಜೆವಿಕೆ) ಕುರಿತ ದಕ್ಷಿಣ ಭಾಗದ ರಾಜ್ಯಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ರಿಜಿಜು ಆಗಮಿಸಿದ್ದರು.</p><p>‘ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ, ಶಿಕ್ಷಣ ಸಚಿವರ ಮಾತೃಭಾಷೆ ಒಡಿಯಾ, ನನ್ನ ಮಾತೃಭಾಷೆ ಅರುಣಾಚಲಿ. ನಾವು ದೇಶದ ಹಿತಕ್ಕಾಗಿ ಒಂದು ತಂಡದಂತೆ ಕೆಲಸ ಮಾಡುತ್ತಿದ್ದೇವೆ’. </p><p>ಧರ್ಮ, ಜಾತಿ, ಮತ, ಪ್ರದೇಶ ಅಥವಾ ಭಾಷೆಯ ಆಧಾರದ ಮೇಲೆ ದೇಶವನ್ನು ಯಾರೂ ವಿಭಜನೆ ಮಾಡಬಾರದು ಎಂದು ರಿಜಿಜು ಹೇಳಿದರು.</p><p>ನೂತನ ಶಿಕ್ಷಣ ನೀತಿಯು ಹಿಂದಿ ಹೇರಿಕೆಯ ಹುನ್ನಾರ. ₹10 ಸಾವಿರ ಕೋಟಿ ಅನುದಾನ ಕೊಟ್ಟರೂ ಎನ್ಇಪಿ ಜಾರಿ ಮಾಡಲ್ಲೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ನೂತನ ಶಿಕ್ಷಣ ಕಾಯ್ದೆ(ಎನ್ಇಪಿ)ಯಲ್ಲಿರುವ ತ್ರಿಭಾಷಾ ಸೂತ್ರದಿಂದ ಇಡಿ ದೇಶಕ್ಕೆ ಒಳಿತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಮರ್ಥಿಸಿಕೊಂಡಿದ್ದಾರೆ.</p><p>ಎನ್ಇಪಿಯಲ್ಲಿರುವ ತ್ರಿಭಾಷಾ ಸೂತ್ರದ ಬಗ್ಗೆ ನಡೆಯುತ್ತಿರುವ ಗಂಭೀರ ಚರ್ಚೆ ಮತ್ತು ದಕ್ಷಿಣ ರಾಜ್ಯಗಳ ವಿರೋಧದ ಕುರಿತು ಗುರುವಾರ ಪ್ರತಿಕ್ರಿಯಿಸಿದ ಸಚಿವರು, ಇಲ್ಲಿ ಕೆಲ ತಪ್ಪು ತಿಳಿವಳಿಕೆ ಆಗಿವೆ ಮತ್ತು ಕೆಲವರು ಇದನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.</p><p>ಕೇರಳದ ತಿರುವನಂತಪುರಂನಲ್ಲಿ ಪ್ರಧಾನ ಮಂತ್ರಿ ಜನವಿಕಾಸ್ ಕಾರ್ಯಕ್ರಮ(ಪಿಎಂಜೆವಿಕೆ) ಕುರಿತ ದಕ್ಷಿಣ ಭಾಗದ ರಾಜ್ಯಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ರಿಜಿಜು ಆಗಮಿಸಿದ್ದರು.</p><p>‘ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ, ಶಿಕ್ಷಣ ಸಚಿವರ ಮಾತೃಭಾಷೆ ಒಡಿಯಾ, ನನ್ನ ಮಾತೃಭಾಷೆ ಅರುಣಾಚಲಿ. ನಾವು ದೇಶದ ಹಿತಕ್ಕಾಗಿ ಒಂದು ತಂಡದಂತೆ ಕೆಲಸ ಮಾಡುತ್ತಿದ್ದೇವೆ’. </p><p>ಧರ್ಮ, ಜಾತಿ, ಮತ, ಪ್ರದೇಶ ಅಥವಾ ಭಾಷೆಯ ಆಧಾರದ ಮೇಲೆ ದೇಶವನ್ನು ಯಾರೂ ವಿಭಜನೆ ಮಾಡಬಾರದು ಎಂದು ರಿಜಿಜು ಹೇಳಿದರು.</p><p>ನೂತನ ಶಿಕ್ಷಣ ನೀತಿಯು ಹಿಂದಿ ಹೇರಿಕೆಯ ಹುನ್ನಾರ. ₹10 ಸಾವಿರ ಕೋಟಿ ಅನುದಾನ ಕೊಟ್ಟರೂ ಎನ್ಇಪಿ ಜಾರಿ ಮಾಡಲ್ಲೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>