ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಪಕ್ಕೆ ಅಡ್ಡಿ: ಡಿ.ಕೆ ಸುರೇಶ್‌ ಸೇರಿದಂತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

Published 21 ಡಿಸೆಂಬರ್ 2023, 12:55 IST
Last Updated 21 ಡಿಸೆಂಬರ್ 2023, 12:55 IST
ಅಕ್ಷರ ಗಾತ್ರ

ನವದೆಹಲಿ: ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ(ಇಂದು) ಸಂಸತ್‌ನಿಂದ ಅಮಾನತುಗೊಳಿಸಲಾಗಿದೆ.

‌ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಇದರಿಂದ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಒಟ್ಟು ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು.

‘ಈ ಮೂವರು ಸದನ ಮತ್ತು ಪೀಠದ ಆದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಫಲಕಗಳನ್ನು ಪ್ರದರ್ಶಿಸಿಸುವ ಮೂಲಕ ಸದನದ ಬಾವಿಗೆ ಇಳಿದು ದುರ್ವರ್ತನೆ ತೋರಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಮಾನತುಗೊಳಿಸಲಾಗಿದೆ' ಎಂದು ಜೋಶಿ ಹೇಳಿದರು.

ಸಂಸತ್‌ನಲ್ಲಿ ಭದ್ರತಾ ಲೋಪ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿ ಗದ್ದಲ ಸೃಷ್ಟಿಸಿ ಉಭಯ ಸದನಗಳಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇತ್ತೀಚೆಗೆ ಒಟ್ಟು 143 ಸಂಸದರು ಅಮಾನತುಗೊಂಡಿದ್ದರು. ಈಗ ಅವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಅವರಲ್ಲಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರು ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT