‘ಈ ಮೂವರು ಸದನ ಮತ್ತು ಪೀಠದ ಆದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಫಲಕಗಳನ್ನು ಪ್ರದರ್ಶಿಸಿಸುವ ಮೂಲಕ ಸದನದ ಬಾವಿಗೆ ಇಳಿದು ದುರ್ವರ್ತನೆ ತೋರಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಮಾನತುಗೊಳಿಸಲಾಗಿದೆ' ಎಂದು ಜೋಶಿ ಹೇಳಿದರು.
ಸಂಸತ್ನಲ್ಲಿ ಭದ್ರತಾ ಲೋಪ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿ ಗದ್ದಲ ಸೃಷ್ಟಿಸಿ ಉಭಯ ಸದನಗಳಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇತ್ತೀಚೆಗೆ ಒಟ್ಟು 143 ಸಂಸದರು ಅಮಾನತುಗೊಂಡಿದ್ದರು. ಈಗ ಅವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಅವರಲ್ಲಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರು ಸೇರಿದ್ದಾರೆ.