ಭಯೋತ್ಪಾದನೆ ನಿರ್ಮೂಲನೆಗಾಗಿಯೇ ಪ್ರತ್ಯೇಕವಾಗಿ ರಚಿಸಲಾಗಿರುವ ಸಂಸ್ಥೆ ಇದಾಗಿದೆ. ಭಾರತದಲ್ಲಿ ಭಯೋತ್ಪಾದನೆ ಹುಟ್ಟುಹಾಕಲು ಉಗ್ರರು ಹಣ ಸರಬರಾಜು ಮಾಡುವುದನ್ನು ಪತ್ತೆ ಹಚ್ಚಿ ಅದನ್ನು ತಡೆಯುವುದು ಈ ಏಜೆನ್ಸಿಯ ಪ್ರಮುಖ ಉದ್ದೇಶವಾಗಿದೆ. ಎಸ್ಪಿ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಈ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೂವರನ್ನು ಅವರಿಗೆ ನೀಡಿದ್ದ ಜವಾಬ್ದಾರಿಯಿಂದ ತೆಗೆದುಹಾಕಿ ಬೇರೆಡೆಗೆ ವರ್ಗಾಯಿಸಲಾಗಿದೆ. ಮುೂವರು ಆರೋಪಿಗಳ ವಿರುದ್ದ ವಿಚಾರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.