<p><strong>ಪಿಲಿಭಿತ್ (ಉತ್ತರ ಪ್ರದೇಶ):</strong> ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಮಲದಗುಂಡಿ ಸ್ವಚ್ಛಗೊಳಿಸುವಾಗ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಪ್ರಹ್ಲಾದ್ ಮಂಡಲ್(60), ಅವರ ಮಗಳು ತನು ವಿಶ್ವಾಸ್(32) ಮತ್ತು ಅವರ ಅಳಿಯ ಕಾರ್ತಿಕ್ ವಿಶ್ವಾಸ್(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇತ್ತೀಚೆಗೆ ಹಳೆಯ, ಸಣ್ಣದಾದ ಮಲದಗುಂಡಿಯಲ್ಲಿ ಕೆಲವು ಸಮಸ್ಯೆಗಳು ತಲೆದೋರಿದ ನಂತರ ಸುಮಾರು 8 ಅಡಿ ಆಳದ ಹೊಸ ಮಲದಗುಂಡಿಯನ್ನು ನಿರ್ಮಿಸಿದ್ದರು. ತಮ್ಮ ಮಗಳು ಮತ್ತು ಅಳಿಯನೊಂದಿಗೆ ಮಂಡಲ್ ಮಲದಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದರು ಎಂದು ಮಧೋತಾಂಡ ಠಾಣಾಧಿಕಾರಿ ಅಶೋಕ್ ಪಾಲ್ ತಿಳಿಸಿದ್ದಾರೆ.</p><p>ಈ ಸಂದರ್ಭ ಪಕ್ಕದ ಹಳೆಯ ಮಲದಗುಂಡಿಯಿಂದ ಅನಿಲ ಸೋರಿಕೆಯಾಗಲು ಪ್ರಾರಂಭಿಸಿದೆ ಎಂದು ತೋರುತ್ತದೆ. ಹೊಸ ಟ್ಯಾಂಕ್ ಆಳವಾಗಿದ್ದರಿಂದಾಗಿ, ಮೂವರು ಹೊರಬರಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ತನು ವಿಶ್ವಾಸ್ ತನ್ನ ಪತಿ ಕಾರ್ತಿಕ್ ಮತ್ತು ಅವರ ಮಕ್ಕಳೊಂದಿಗೆ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದಳು. ಕಾರ್ತಿಕ್ ಹತ್ತಿರದ ಮೈನಿಗುಲ್ರಿಯಾ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತದ ನಂತರ ಕಲಿನಗರ ತಹಶೀಲ್ದಾರ್ ವೀರೇಂದ್ರ ಕುಮಾರ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಅವರ ಆರ್ಥಿಕ ಪರಿಸ್ಥಿತಿಯ ಆಧಾರದ ಮೇಲೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿಲಿಭಿತ್ (ಉತ್ತರ ಪ್ರದೇಶ):</strong> ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಮಲದಗುಂಡಿ ಸ್ವಚ್ಛಗೊಳಿಸುವಾಗ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಪ್ರಹ್ಲಾದ್ ಮಂಡಲ್(60), ಅವರ ಮಗಳು ತನು ವಿಶ್ವಾಸ್(32) ಮತ್ತು ಅವರ ಅಳಿಯ ಕಾರ್ತಿಕ್ ವಿಶ್ವಾಸ್(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇತ್ತೀಚೆಗೆ ಹಳೆಯ, ಸಣ್ಣದಾದ ಮಲದಗುಂಡಿಯಲ್ಲಿ ಕೆಲವು ಸಮಸ್ಯೆಗಳು ತಲೆದೋರಿದ ನಂತರ ಸುಮಾರು 8 ಅಡಿ ಆಳದ ಹೊಸ ಮಲದಗುಂಡಿಯನ್ನು ನಿರ್ಮಿಸಿದ್ದರು. ತಮ್ಮ ಮಗಳು ಮತ್ತು ಅಳಿಯನೊಂದಿಗೆ ಮಂಡಲ್ ಮಲದಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದರು ಎಂದು ಮಧೋತಾಂಡ ಠಾಣಾಧಿಕಾರಿ ಅಶೋಕ್ ಪಾಲ್ ತಿಳಿಸಿದ್ದಾರೆ.</p><p>ಈ ಸಂದರ್ಭ ಪಕ್ಕದ ಹಳೆಯ ಮಲದಗುಂಡಿಯಿಂದ ಅನಿಲ ಸೋರಿಕೆಯಾಗಲು ಪ್ರಾರಂಭಿಸಿದೆ ಎಂದು ತೋರುತ್ತದೆ. ಹೊಸ ಟ್ಯಾಂಕ್ ಆಳವಾಗಿದ್ದರಿಂದಾಗಿ, ಮೂವರು ಹೊರಬರಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ತನು ವಿಶ್ವಾಸ್ ತನ್ನ ಪತಿ ಕಾರ್ತಿಕ್ ಮತ್ತು ಅವರ ಮಕ್ಕಳೊಂದಿಗೆ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದಳು. ಕಾರ್ತಿಕ್ ಹತ್ತಿರದ ಮೈನಿಗುಲ್ರಿಯಾ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತದ ನಂತರ ಕಲಿನಗರ ತಹಶೀಲ್ದಾರ್ ವೀರೇಂದ್ರ ಕುಮಾರ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಅವರ ಆರ್ಥಿಕ ಪರಿಸ್ಥಿತಿಯ ಆಧಾರದ ಮೇಲೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>