<p><strong>ಹೋಶಿಯಾರಪುರ(ಪಂಜಾಬ್):</strong> ಪೊಲೀಸ್ ಸಿಬ್ಬಂದಿಯಿದ್ದ ಬಸ್ಸೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 13 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>30 ಪೊಲೀಸರನ್ನು ಹೊತ್ತ ಬಸ್ ಜಲಂಧರ್ನಲ್ಲಿರುವ ಪಂಜಾಬ್ ಸಶಸ್ತ್ರ ಪೊಲೀಸ್ ಸಂಸ್ಥೆ ಕಡೆಯಿಂದ ಗುರುದಾಸ್ಪುರಕ್ಕೆ ಹೋಗುತ್ತಿದ್ದ ವೇಳೆ ಮುಂಜಾನೆ 7 ಗಂಟೆಯ ಸುಮಾರಿಗೆ ಮುಕೇರಿಯದ ಬಳಿ ಅಘಘಾತ ಸಂಭವಿಸಿದೆ. ದಟ್ಟ ಮಂಜು ಕವಿದಿದ್ದ ಕಾರಣ ಟ್ರಕ್ ನಿಂತಿರುವುದು ಚಾಲಕನಿಗೆ ಗೋಚರಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೃತರನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ಹರ್ದೇವ್ ಸಿಂಗ್, ಹಿರಿಯ ಕಾನ್ಸ್ಟೆಬಲ್ ಗುರುಪ್ರೀತ್ ಸಿಂಗ್ ಮತ್ತು ಮಹಿಳಾ ಕಾನ್ಸ್ಟೆಬಲ್ ಶಾಲು ರಾಣಾ ಎಂದು ಗುರುತಿಸಲಾಗಿದೆ.</p><p>ಘಟನೆ ನಡೆದ ಸ್ಥಳಕ್ಕೆ ಹೋಶಿಯಾರಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಂಬಾ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಗಾಯಾಳುಗಳನ್ನು ದಾಸುಯಾ ಮತ್ತು ಮುಕೇರಿಯನ್ನ ಸಿವಿಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋಶಿಯಾರಪುರ(ಪಂಜಾಬ್):</strong> ಪೊಲೀಸ್ ಸಿಬ್ಬಂದಿಯಿದ್ದ ಬಸ್ಸೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 13 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>30 ಪೊಲೀಸರನ್ನು ಹೊತ್ತ ಬಸ್ ಜಲಂಧರ್ನಲ್ಲಿರುವ ಪಂಜಾಬ್ ಸಶಸ್ತ್ರ ಪೊಲೀಸ್ ಸಂಸ್ಥೆ ಕಡೆಯಿಂದ ಗುರುದಾಸ್ಪುರಕ್ಕೆ ಹೋಗುತ್ತಿದ್ದ ವೇಳೆ ಮುಂಜಾನೆ 7 ಗಂಟೆಯ ಸುಮಾರಿಗೆ ಮುಕೇರಿಯದ ಬಳಿ ಅಘಘಾತ ಸಂಭವಿಸಿದೆ. ದಟ್ಟ ಮಂಜು ಕವಿದಿದ್ದ ಕಾರಣ ಟ್ರಕ್ ನಿಂತಿರುವುದು ಚಾಲಕನಿಗೆ ಗೋಚರಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೃತರನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ಹರ್ದೇವ್ ಸಿಂಗ್, ಹಿರಿಯ ಕಾನ್ಸ್ಟೆಬಲ್ ಗುರುಪ್ರೀತ್ ಸಿಂಗ್ ಮತ್ತು ಮಹಿಳಾ ಕಾನ್ಸ್ಟೆಬಲ್ ಶಾಲು ರಾಣಾ ಎಂದು ಗುರುತಿಸಲಾಗಿದೆ.</p><p>ಘಟನೆ ನಡೆದ ಸ್ಥಳಕ್ಕೆ ಹೋಶಿಯಾರಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಂಬಾ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಗಾಯಾಳುಗಳನ್ನು ದಾಸುಯಾ ಮತ್ತು ಮುಕೇರಿಯನ್ನ ಸಿವಿಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>