<p><strong>ಮುಂಬೈ:</strong> ರೈಲ್ವೆ ಸಿಗ್ನಲ್ ದುರಸ್ತಿ ಮಾಡುತ್ತಿದ್ದ ಕಾರ್ಮಿಕರಿಗೆ ಮತ್ತೊಂದು ಹಳಿಯಲ್ಲಿ ಸಾಗುತ್ತಿದ್ದ ರೈಲು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಳೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯ್ ರಸ್ತೆ ಮತ್ತು ನೈಗಾಂವ್ ನಿಲ್ದಾಣಗಳ ನಡುವೆ ಸೋಮವಾರ ತಡರಾತ್ರಿ ನಡೆದಿದೆ.</p><p>ಮೃತರನ್ನು ಮುಖ್ಯ ಸಿಗ್ನಲಿಂಗ್ ಇನ್ಸ್ಪೆಕ್ಟರ್ ವಾಸು ಮಿತ್ರ, ಎಲೆಕ್ಟ್ರಿಕಲ್ ಸಿಗ್ನಲಿಂಗ್ ನಿರ್ವಾಹಕ ಅಧಿಕಾರಿ ಸೋಮನಾಥ ಉತ್ತಮ್ ಲಂಬುಟ್ರೆ, ಸಹಾಯಕ ಸಚಿನ್ ವಾಂಖೆಡೆ ಎಂದು ಗುರುತಿಸಲಾಗಿದೆ. </p><p>ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನಾ ಸಂಬಂಧ ತನಿಖೆ ನಡೆಸಲು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಆದೇಶಿಸಿದೆ.</p><p>ವಸಾಯ್ ರಸ್ತೆ ಮತ್ತು ನೈಗಾಂವ್ ನಡುವಿನ ರೈಲು ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ವಾಸು ಮಿತ್ರ, ಸೋಮನಾಥ, ಸಚಿನ್ ಸ್ಥಳಕ್ಕೆ ಧಾವಿಸಿ ನಿರ್ವಹಣೆ ಕಾರ್ಯದಲ್ಲಿ ತೊಡಗಿದ್ದರು. ಆದರೆ, ಇದೇ ಮಾರ್ಗದಲ್ಲಿ ಬಂದ ಚರ್ಚ್ಗೇಟ್ - ವಿರಾರ್ ರೈಲು ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಮೃತರ ಕುಟುಂಬಸ್ಥರಿಗೆ ತಕ್ಷಣಕ್ಕೆ ತಲಾ ₹55 ಸಾವಿರ ಪರಿಹಾರ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಇತರೆ ಭತ್ಯೆಗಳು ಸೇರಿದಂತೆ ತಲಾ ₹40 ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರೈಲ್ವೆ ಸಿಗ್ನಲ್ ದುರಸ್ತಿ ಮಾಡುತ್ತಿದ್ದ ಕಾರ್ಮಿಕರಿಗೆ ಮತ್ತೊಂದು ಹಳಿಯಲ್ಲಿ ಸಾಗುತ್ತಿದ್ದ ರೈಲು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಳೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯ್ ರಸ್ತೆ ಮತ್ತು ನೈಗಾಂವ್ ನಿಲ್ದಾಣಗಳ ನಡುವೆ ಸೋಮವಾರ ತಡರಾತ್ರಿ ನಡೆದಿದೆ.</p><p>ಮೃತರನ್ನು ಮುಖ್ಯ ಸಿಗ್ನಲಿಂಗ್ ಇನ್ಸ್ಪೆಕ್ಟರ್ ವಾಸು ಮಿತ್ರ, ಎಲೆಕ್ಟ್ರಿಕಲ್ ಸಿಗ್ನಲಿಂಗ್ ನಿರ್ವಾಹಕ ಅಧಿಕಾರಿ ಸೋಮನಾಥ ಉತ್ತಮ್ ಲಂಬುಟ್ರೆ, ಸಹಾಯಕ ಸಚಿನ್ ವಾಂಖೆಡೆ ಎಂದು ಗುರುತಿಸಲಾಗಿದೆ. </p><p>ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನಾ ಸಂಬಂಧ ತನಿಖೆ ನಡೆಸಲು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಆದೇಶಿಸಿದೆ.</p><p>ವಸಾಯ್ ರಸ್ತೆ ಮತ್ತು ನೈಗಾಂವ್ ನಡುವಿನ ರೈಲು ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ವಾಸು ಮಿತ್ರ, ಸೋಮನಾಥ, ಸಚಿನ್ ಸ್ಥಳಕ್ಕೆ ಧಾವಿಸಿ ನಿರ್ವಹಣೆ ಕಾರ್ಯದಲ್ಲಿ ತೊಡಗಿದ್ದರು. ಆದರೆ, ಇದೇ ಮಾರ್ಗದಲ್ಲಿ ಬಂದ ಚರ್ಚ್ಗೇಟ್ - ವಿರಾರ್ ರೈಲು ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಮೃತರ ಕುಟುಂಬಸ್ಥರಿಗೆ ತಕ್ಷಣಕ್ಕೆ ತಲಾ ₹55 ಸಾವಿರ ಪರಿಹಾರ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಇತರೆ ಭತ್ಯೆಗಳು ಸೇರಿದಂತೆ ತಲಾ ₹40 ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>