<p><strong>ಜೈಪುರ</strong>: ರಾಜಸ್ಥಾನದ ಕೋಟಾದಲ್ಲಿ ಶನಿವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಜನರನ್ನು ಅವಶೇಷಗಳಡಿಯಿಂದ ಹೊರಗೆ ಕರೆತರಲಾಗಿದೆ. ಆ ಪೈಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಗಾಯಾಳುಗಳಲ್ಲಿ ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐದು ಮಂದಿಯನ್ನು ಪ್ರಾಥಮಿಕ ಆರೈಕೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಮೃತರನ್ನು ಆರ್ಯನ್ (20) ಮತ್ತು ಲಕ್ಷ್ಮಣ್ (15) ಎಂದು ಗುರುತಿಸಲಾಗಿದೆ.</p><p>‘ಒಟ್ಟು 15 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಇಬ್ಬರು ಸಾವಿಗೀಡಾಗಿದ್ದರೆ, ಕೆಲವು ಗಾಯಾಳುಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ. ಘಟನೆಗೆ ಕಾರಣ ಖಚಿತಪಡಿಸಿಕೊಳ್ಳಲು ತನಿಖೆಗೆ ಆದೇಶಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ಎಂದು ಸಚಿವ ಹೀರಾಲಾಲ್ ನಗರ್ ವರದಿಗಾರರಿಗೆ ತಿಳಿಸಿದರು.</p><p>ಕಟ್ಟಡ ಅಕ್ಕಪಕ್ಕದಲ್ಲಿ ಕೆಲವು ಹೊಸ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಕಟ್ಟಡ ಕುಸಿತಕ್ಕೆ ಇದೂ ಕಾರಣವಾಗಿರಬಹುದು ಎಂದು ವಿಭಾಗೀಯ ಆಯುಕ್ತ ಅನಿಲ್ ಅಗರ್ವಾಲ್ ಹೇಳಿದ್ದಾರೆ.</p><p>ತಲ್ವಾಂಡಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಟ್ಟಡದಲ್ಲಿ ರೆಸ್ಟೋರೆಂಟ್ ಇತ್ತು. ಅಧಿಕಾರಿಗಳ ಪ್ರಕಾರ, ಕುಸಿತದ ಸಮಯದಲ್ಲಿ ಕೆಲವು ಗ್ರಾಹಕರು ಮತ್ತು ಉದ್ಯೋಗಿಗಳು ಉಪಾಹಾರ ಗೃಹದಲ್ಲಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಕೋಟಾದಲ್ಲಿ ಶನಿವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಜನರನ್ನು ಅವಶೇಷಗಳಡಿಯಿಂದ ಹೊರಗೆ ಕರೆತರಲಾಗಿದೆ. ಆ ಪೈಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಗಾಯಾಳುಗಳಲ್ಲಿ ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐದು ಮಂದಿಯನ್ನು ಪ್ರಾಥಮಿಕ ಆರೈಕೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಮೃತರನ್ನು ಆರ್ಯನ್ (20) ಮತ್ತು ಲಕ್ಷ್ಮಣ್ (15) ಎಂದು ಗುರುತಿಸಲಾಗಿದೆ.</p><p>‘ಒಟ್ಟು 15 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಇಬ್ಬರು ಸಾವಿಗೀಡಾಗಿದ್ದರೆ, ಕೆಲವು ಗಾಯಾಳುಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ. ಘಟನೆಗೆ ಕಾರಣ ಖಚಿತಪಡಿಸಿಕೊಳ್ಳಲು ತನಿಖೆಗೆ ಆದೇಶಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ಎಂದು ಸಚಿವ ಹೀರಾಲಾಲ್ ನಗರ್ ವರದಿಗಾರರಿಗೆ ತಿಳಿಸಿದರು.</p><p>ಕಟ್ಟಡ ಅಕ್ಕಪಕ್ಕದಲ್ಲಿ ಕೆಲವು ಹೊಸ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಕಟ್ಟಡ ಕುಸಿತಕ್ಕೆ ಇದೂ ಕಾರಣವಾಗಿರಬಹುದು ಎಂದು ವಿಭಾಗೀಯ ಆಯುಕ್ತ ಅನಿಲ್ ಅಗರ್ವಾಲ್ ಹೇಳಿದ್ದಾರೆ.</p><p>ತಲ್ವಾಂಡಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಟ್ಟಡದಲ್ಲಿ ರೆಸ್ಟೋರೆಂಟ್ ಇತ್ತು. ಅಧಿಕಾರಿಗಳ ಪ್ರಕಾರ, ಕುಸಿತದ ಸಮಯದಲ್ಲಿ ಕೆಲವು ಗ್ರಾಹಕರು ಮತ್ತು ಉದ್ಯೋಗಿಗಳು ಉಪಾಹಾರ ಗೃಹದಲ್ಲಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>