<p><strong>ಶ್ರೀನಗರ</strong>: ಕೇಂದ್ರ ಕಾಶ್ಮೀರದ ಗಾಂದೆರ್ಬಲ್ ಜಿಲ್ಲೆಯ ಝೋಜಿಲಾ ಪಾಸ್ನಲ್ಲಿ ಸೋಮವಾರ ಪ್ರಪಾತಕ್ಕೆ ವಾಹನ ಉರುಳಿ ಬೆಂಗಳೂರಿನ ಮೂವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ತೀವ್ರವಾಗಿ ಗಾಯಗೊಂಡಿದೆ. </p>.<p>ಚಂಪಕ್ದಾಸ್ (67), ಟಂಡ್ರಾದಾಸ್ (44) ಮತ್ತು ಮೋನಾಲಿಸಾ ದಾಸ್ (41) ಮೃತಪಟ್ಟವರು. ಆದ್ರಿತಾ ಖಾನ್ (8) ಎಂಬ ಮಗು ತೀವ್ರವಾಗಿ ಗಾಯಗೊಂಡಿದೆ. ಇವರೆಲ್ಲರೂ ಬೆಂಗಳೂರಿನ ನಿವಾಸಿಗಳು. </p>.<p>ವಾಹನವು ಸೋನಾಮಾರ್ಗ್ನಿಂದ ಝೀರೋ ಪಾಯಿಂಟ್ಗೆ ತೆರಳುತ್ತಿದ್ದಾಗ ಪಾಣಿಮಠದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಐಟಿಬಿಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ತೀವ್ರವಾಗಿ ಗಾಯಗೊಂಡ ಮಗುವನ್ನು ಶ್ರೀನಗರದ ಸೂಪರ್ ಸ್ಪೆಷಾಲಿಟಿ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಕೇಂದ್ರ ಕಾಶ್ಮೀರದ ಗಾಂದೆರ್ಬಲ್ ಜಿಲ್ಲೆಯ ಝೋಜಿಲಾ ಪಾಸ್ನಲ್ಲಿ ಸೋಮವಾರ ಪ್ರಪಾತಕ್ಕೆ ವಾಹನ ಉರುಳಿ ಬೆಂಗಳೂರಿನ ಮೂವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ತೀವ್ರವಾಗಿ ಗಾಯಗೊಂಡಿದೆ. </p>.<p>ಚಂಪಕ್ದಾಸ್ (67), ಟಂಡ್ರಾದಾಸ್ (44) ಮತ್ತು ಮೋನಾಲಿಸಾ ದಾಸ್ (41) ಮೃತಪಟ್ಟವರು. ಆದ್ರಿತಾ ಖಾನ್ (8) ಎಂಬ ಮಗು ತೀವ್ರವಾಗಿ ಗಾಯಗೊಂಡಿದೆ. ಇವರೆಲ್ಲರೂ ಬೆಂಗಳೂರಿನ ನಿವಾಸಿಗಳು. </p>.<p>ವಾಹನವು ಸೋನಾಮಾರ್ಗ್ನಿಂದ ಝೀರೋ ಪಾಯಿಂಟ್ಗೆ ತೆರಳುತ್ತಿದ್ದಾಗ ಪಾಣಿಮಠದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಐಟಿಬಿಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ತೀವ್ರವಾಗಿ ಗಾಯಗೊಂಡ ಮಗುವನ್ನು ಶ್ರೀನಗರದ ಸೂಪರ್ ಸ್ಪೆಷಾಲಿಟಿ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>