<p><strong>ನವದೆಹಲಿ:</strong> ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶದ ಆಹಾರ ಸಂಸ್ಕರಣ ಘಟಕವೊಂದರಲ್ಲಿ ಶನಿವಾರ ನಸುಕಿನಲ್ಲಿ ಬೆಂಕಿ ಅವಘಡ ನಡೆದಿದ್ದು, ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.ದೌಲತ್ಪುರ - ಸಾಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ.<p>ಆಹಾರ ಸಂಸ್ಕರಣಾ ಘಟಕ ‘ಶ್ಯಾಮ್ ಕೃಪಾ ಫುಡ್ಸ್ ಪ್ರೈವೆಟ್ ಲಿಮಿಟೆಡ್’ನಲ್ಲಿ ಬೆಂಕಿ ಅವಘಡ ಸಂಭವಿದ್ದರ ಬಗ್ಗೆ ನಸುಕು 3.35ಕ್ಕೆ ಪೊಲೀಸರಿಗೆ ಕರೆ ಬಂದಿದೆ. ಘಟಕವನ್ನು ಬೆಂಕಿ ಆವರಿಸಿಕೊಂಡಿದ್ದು, ಕೆಲ ಕಾರ್ಮಿಕರು ಸಿಲುಕಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಘಟನಾ ಸ್ಥಳದಲ್ಲಿ 14 ಅಗ್ನಿ ಶಾಮಕ ವಾಹನಗಳು ಕಾರ್ಯಚರಣೆ ನಡೆಸಿ, ಮಧ್ಯಾಹ್ನದ ವೇಳೆಗೆ ಬೆಂಕಿ ನಂದಿಸಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.BJP ಫಲಿತಾಂಶ ನೋಡಿ ಕೋಪಗೊಂಡು TVಗೆ ಬೆಂಕಿ ಹಚ್ಚಿದ ಹಿಂದೂ ಪರಿಷತ್ ಅಧ್ಯಕ್ಷ.<p>ಒಂಬತ್ತು ಮಂದಿಯನ್ನು ರಕ್ಷಿಸಿ ಅವರನ್ನು ನರೇಲಾದ ಸತ್ಯವಾದಿರಾಜ ಹರೀಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಶ್ಯಾಮ್ (24), ರಾಮ್ ಸಿಂಗ್ (30) ಹಾಗೂ ಬೀರ್ಪಾಲ್ (42) ಸಾವಿಗೀಡಾಗಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ ಎಂದ ಅವರು ಮಾಹಿತಿ ನೀಡಿದ್ದಾರೆ.</p><p>ಪುಷ್ಪೆಂದರ್ (26), ಆಕಾಶ್ (19), ಮೋಹಿತ್ ಕುಮಾರ್ (21), ರವಿ ಕುಮಾರ್ (19), ಮೋನು (25) ಹಾಗೂ ಲಾನು (32) ಎಂಬವರು ಗಾಯಯೊಂಡಿದ್ದು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.ರಾಜ್ಕೋಟ್ ಬೆಂಕಿ ದುರಂತ | ಇನ್ನೊಬ್ಬ ಪಾಲುದಾರನ ಬಂಧನ; 5ಕ್ಕೇರಿದ ಬಂಧಿತರ ಸಂಖ್ಯೆ. <p>ಗ್ಯಾಸ್ ಸೋರಿಕೆಯಾಗಿ ಘಟನೆ ನಡೆದಿದೆ. ಬೆಂಕಿ ಆವರಿಸುತ್ತಿದ್ದಂತೆಯೇ ಕಂಪ್ರೆಸರ್ ಬಿಸಿ ಹೆಚ್ಚಳವಾಗಿ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ.</p> .ಪಾಕ್: ಪ್ರಯಾಣಿಕರಿಗೆ ಚಿತ್ರಹಿಂಸೆ, ಬಸ್ಗೆ ಬೆಂಕಿ ಹಚ್ಚಿದ ಭಯೋತ್ಪಾದಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶದ ಆಹಾರ ಸಂಸ್ಕರಣ ಘಟಕವೊಂದರಲ್ಲಿ ಶನಿವಾರ ನಸುಕಿನಲ್ಲಿ ಬೆಂಕಿ ಅವಘಡ ನಡೆದಿದ್ದು, ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.ದೌಲತ್ಪುರ - ಸಾಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ.<p>ಆಹಾರ ಸಂಸ್ಕರಣಾ ಘಟಕ ‘ಶ್ಯಾಮ್ ಕೃಪಾ ಫುಡ್ಸ್ ಪ್ರೈವೆಟ್ ಲಿಮಿಟೆಡ್’ನಲ್ಲಿ ಬೆಂಕಿ ಅವಘಡ ಸಂಭವಿದ್ದರ ಬಗ್ಗೆ ನಸುಕು 3.35ಕ್ಕೆ ಪೊಲೀಸರಿಗೆ ಕರೆ ಬಂದಿದೆ. ಘಟಕವನ್ನು ಬೆಂಕಿ ಆವರಿಸಿಕೊಂಡಿದ್ದು, ಕೆಲ ಕಾರ್ಮಿಕರು ಸಿಲುಕಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಘಟನಾ ಸ್ಥಳದಲ್ಲಿ 14 ಅಗ್ನಿ ಶಾಮಕ ವಾಹನಗಳು ಕಾರ್ಯಚರಣೆ ನಡೆಸಿ, ಮಧ್ಯಾಹ್ನದ ವೇಳೆಗೆ ಬೆಂಕಿ ನಂದಿಸಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.BJP ಫಲಿತಾಂಶ ನೋಡಿ ಕೋಪಗೊಂಡು TVಗೆ ಬೆಂಕಿ ಹಚ್ಚಿದ ಹಿಂದೂ ಪರಿಷತ್ ಅಧ್ಯಕ್ಷ.<p>ಒಂಬತ್ತು ಮಂದಿಯನ್ನು ರಕ್ಷಿಸಿ ಅವರನ್ನು ನರೇಲಾದ ಸತ್ಯವಾದಿರಾಜ ಹರೀಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಶ್ಯಾಮ್ (24), ರಾಮ್ ಸಿಂಗ್ (30) ಹಾಗೂ ಬೀರ್ಪಾಲ್ (42) ಸಾವಿಗೀಡಾಗಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ ಎಂದ ಅವರು ಮಾಹಿತಿ ನೀಡಿದ್ದಾರೆ.</p><p>ಪುಷ್ಪೆಂದರ್ (26), ಆಕಾಶ್ (19), ಮೋಹಿತ್ ಕುಮಾರ್ (21), ರವಿ ಕುಮಾರ್ (19), ಮೋನು (25) ಹಾಗೂ ಲಾನು (32) ಎಂಬವರು ಗಾಯಯೊಂಡಿದ್ದು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.ರಾಜ್ಕೋಟ್ ಬೆಂಕಿ ದುರಂತ | ಇನ್ನೊಬ್ಬ ಪಾಲುದಾರನ ಬಂಧನ; 5ಕ್ಕೇರಿದ ಬಂಧಿತರ ಸಂಖ್ಯೆ. <p>ಗ್ಯಾಸ್ ಸೋರಿಕೆಯಾಗಿ ಘಟನೆ ನಡೆದಿದೆ. ಬೆಂಕಿ ಆವರಿಸುತ್ತಿದ್ದಂತೆಯೇ ಕಂಪ್ರೆಸರ್ ಬಿಸಿ ಹೆಚ್ಚಳವಾಗಿ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ.</p> .ಪಾಕ್: ಪ್ರಯಾಣಿಕರಿಗೆ ಚಿತ್ರಹಿಂಸೆ, ಬಸ್ಗೆ ಬೆಂಕಿ ಹಚ್ಚಿದ ಭಯೋತ್ಪಾದಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>