<p><strong>ನವದೆಹಲಿ:</strong> ಕಾನೂನು ಪದವೀಧರರು ನ್ಯಾಯಾಧೀಶರಾಗಬೇಕಾದರೆ ಕಡ್ಡಾಯವಾಗಿ ಮೂರು ವರ್ಷ ವಕೀಲರಾಗಿ ಕಾರ್ಯನಿರ್ವಹಿಸಿರಬೇಕು ಎಂಬ ನಿಯಮವು, ಈ ಕುರಿತ ತೀರ್ಪು ಹೊರಬೀಳುವ ಮೊದಲು ಹೊರಡಿಸಿದ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಜಮ್ಮು–ಕಾಶ್ಮೀರ ನಾಗರಿಕ ಸೇವಾ ಆಯೋಗವು ಮೇ 14ರಂದು ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ, ಮೂರು ವರ್ಷ ವಕೀಲಿಕೆ ಕಡ್ಡಾಯ ಎಂಬ ನಿಯಮವನ್ನು ಉಲ್ಲೇಖಿಸಿಲ್ಲ ಎಂದು ಆಕ್ಷೇಪಿಸಿ ವಕೀಲರಾದ ನವೀದ್ ಭುಕ್ತಿಯಾ ಮತ್ತು ಇತರ ಐವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ.</p>.<p>ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಮೂರು ವರ್ಷ ವಕೀಲಿಕೆ ಕಡ್ಡಾಯ ಕುರಿತು ಮೇ 20ರಂದು ತೀರ್ಪು ನೀಡಿತ್ತು.</p>.<p>‘ಮೇ 20ರ ತೀರ್ಪು ಮುಂದಿನ ನ್ಯಾಯಾಂಗ ನೇಮಕಾತಿಗೆ ಅನ್ವಯಿಸುತ್ತದೆ. ಈಗಾಗಲೇ ಆರಂಭಗೊಂಡಿರುವ ನೇಮಕಾತಿ ಪ್ರಕ್ರಿಯೆಗಳಿಗೆ ಅನ್ವಯಿಸದು’ ಎಂದು ಮುಖ್ಯ ನ್ಯಾಯಾಮೂರ್ತಿ ಗವಾಯಿ, ನ್ಯಾಯಾಮೂರ್ತಿಗಳಾದ ಕೆ. ವಿನೋದ್ಚಂದ್ರನ್ ಮತ್ತು ಎನ್.ವಿ ಅಂಜಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾನೂನು ಪದವೀಧರರು ನ್ಯಾಯಾಧೀಶರಾಗಬೇಕಾದರೆ ಕಡ್ಡಾಯವಾಗಿ ಮೂರು ವರ್ಷ ವಕೀಲರಾಗಿ ಕಾರ್ಯನಿರ್ವಹಿಸಿರಬೇಕು ಎಂಬ ನಿಯಮವು, ಈ ಕುರಿತ ತೀರ್ಪು ಹೊರಬೀಳುವ ಮೊದಲು ಹೊರಡಿಸಿದ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಜಮ್ಮು–ಕಾಶ್ಮೀರ ನಾಗರಿಕ ಸೇವಾ ಆಯೋಗವು ಮೇ 14ರಂದು ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ, ಮೂರು ವರ್ಷ ವಕೀಲಿಕೆ ಕಡ್ಡಾಯ ಎಂಬ ನಿಯಮವನ್ನು ಉಲ್ಲೇಖಿಸಿಲ್ಲ ಎಂದು ಆಕ್ಷೇಪಿಸಿ ವಕೀಲರಾದ ನವೀದ್ ಭುಕ್ತಿಯಾ ಮತ್ತು ಇತರ ಐವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ.</p>.<p>ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಮೂರು ವರ್ಷ ವಕೀಲಿಕೆ ಕಡ್ಡಾಯ ಕುರಿತು ಮೇ 20ರಂದು ತೀರ್ಪು ನೀಡಿತ್ತು.</p>.<p>‘ಮೇ 20ರ ತೀರ್ಪು ಮುಂದಿನ ನ್ಯಾಯಾಂಗ ನೇಮಕಾತಿಗೆ ಅನ್ವಯಿಸುತ್ತದೆ. ಈಗಾಗಲೇ ಆರಂಭಗೊಂಡಿರುವ ನೇಮಕಾತಿ ಪ್ರಕ್ರಿಯೆಗಳಿಗೆ ಅನ್ವಯಿಸದು’ ಎಂದು ಮುಖ್ಯ ನ್ಯಾಯಾಮೂರ್ತಿ ಗವಾಯಿ, ನ್ಯಾಯಾಮೂರ್ತಿಗಳಾದ ಕೆ. ವಿನೋದ್ಚಂದ್ರನ್ ಮತ್ತು ಎನ್.ವಿ ಅಂಜಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>