‘ಬಿಜಾಪುರ ಜಿಲ್ಲೆಯ ಜನಪಾಡ್ ಗ್ರಾಮ ಪಂಚಾಯಿತಿ ಸದಸ್ಯ ತಿರುಪತಿ ಕಟ್ಲಾ ಎಂಬುವವರ ಕೊಲೆಯಲ್ಲಿ ಮೂವರ ಪಾತ್ರವಿದೆ ಎಂಬ ಆರೋಪವಿದೆ. ತಿರುಪತಿ ಅವರು ತೋಯ್ನಾರ್ ಗ್ರಾಮದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ, ಆರೋಪಿಗಳು ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದಿದ್ದರು ಎಂಬ ಆರೋಪ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.