<p><strong>ತ್ರಿಶೂರ್(ಕೇರಳ):</strong> ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ನಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವಿಗೀಡಾಗಿದ್ದು, ಇದನ್ನು ರಾಜ್ಯ-ನಿರ್ದಿಷ್ಟ ವಿಪತ್ತು ಎಂದು ಘೋಷಿಸಿರುವುದಾಗಿ ಕಂದಾಯ ಸಚಿವ ಕೆ. ರಾಜನ್ ಬುಧವಾರ ಹೇಳಿದ್ದಾರೆ.</p><p>ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಫೋಟದ ನಂತರ ಬೆಳಿಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಆನ್ಲೈನ್ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹14 ಲಕ್ಷ ಆರ್ಥಿಕ ನೆರವು ನೀಡಲು ಸಹ ನಿರ್ಧರಿಸಲಾಗಿದೆ ಎಂದುಹೇಳಿದ್ಧಾರೆ.</p><p>ಸ್ಫೋಟವನ್ನು ರಾಜ್ಯ ನಿರ್ದಿಷ್ಟ ವಿಪತ್ತು ಎಂದು ಘೋಷಿಸಲು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(ಕೆಎಸ್ಡಿಎಂಎ) ರಾಜ್ಯ ಕಾರ್ಯಕಾರಿ ಸಮಿತಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ಇದರ ಜೊತೆಗೆ, ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೂ ಸರ್ಕಾರ ಆದೇಶಿಸಿದೆ. ಜಸ್ಟಿಸ್ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ಏಕ ಸದಸ್ಯ ಸಮಿತಿಯು ಈ ಬಗ್ಗೆ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.</p><p>₹14 ಲಕ್ಷ ಆರ್ಥಿಕ ನೆರವಿನ ಬಗ್ಗೆ ಮಾತನಾಡಿದ ಸಚಿವರು, ರಾಜ್ಯ ವಿಪತ್ತು ಸ್ಪಂದನಾ ನಿಧಿಯಿಂದ (ಎಸ್ಡಿಆರ್ಎಫ್) ₹4 ಲಕ್ಷ ಮತ್ತು ಉಳಿದ ₹10 ಲಕ್ಷವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ (ಸಿಎಂಡಿರ್ಎಫ್) ನೀಡಲಾಗುವುದು ಎಂದು ಹೇಳಿದ್ದಾರೆ.</p><p>ಗಾಯಾಳುಗಳಿಗೆ ಎಸ್ಡಿಆರ್ಎಫ್ ಅಡಿಯಲ್ಲಿ ಅನುಮತಿಸಲಾದ ಮೊತ್ತವನ್ನು ನೀಡಲಾಗುವುದು. ಹೆಚ್ಚುವರಿಯಾಗಿ ಸಿಎಂಡಿಆರ್ಎಫ್ನಿಂದ ತುರ್ತು ಆರ್ಥಿಕ ನೆರವಾಗಿ ₹2 ಲಕ್ಷ ನೀಡಲಾಗುವುದು. ಮುಂದಿನ 6 ತಿಂಗಳ ಕಾಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಅದಕ್ಕೆ ಅಗತ್ಯವಿರುವ ಮೊತ್ತವನ್ನು ಜಿಲ್ಲಾಧಿಕಾರಿ ಶಿಫಾರಸು ಆಧಾರದ ಮೇಲೆ ಸಿಎಂಡಿಆರ್ಎಫ್ನಿಂದ ಹಂಚಿಕೆ ಮಾಡಲಾಗುತ್ತದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್(ಕೇರಳ):</strong> ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ನಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವಿಗೀಡಾಗಿದ್ದು, ಇದನ್ನು ರಾಜ್ಯ-ನಿರ್ದಿಷ್ಟ ವಿಪತ್ತು ಎಂದು ಘೋಷಿಸಿರುವುದಾಗಿ ಕಂದಾಯ ಸಚಿವ ಕೆ. ರಾಜನ್ ಬುಧವಾರ ಹೇಳಿದ್ದಾರೆ.</p><p>ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಫೋಟದ ನಂತರ ಬೆಳಿಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಆನ್ಲೈನ್ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹14 ಲಕ್ಷ ಆರ್ಥಿಕ ನೆರವು ನೀಡಲು ಸಹ ನಿರ್ಧರಿಸಲಾಗಿದೆ ಎಂದುಹೇಳಿದ್ಧಾರೆ.</p><p>ಸ್ಫೋಟವನ್ನು ರಾಜ್ಯ ನಿರ್ದಿಷ್ಟ ವಿಪತ್ತು ಎಂದು ಘೋಷಿಸಲು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(ಕೆಎಸ್ಡಿಎಂಎ) ರಾಜ್ಯ ಕಾರ್ಯಕಾರಿ ಸಮಿತಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ಇದರ ಜೊತೆಗೆ, ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೂ ಸರ್ಕಾರ ಆದೇಶಿಸಿದೆ. ಜಸ್ಟಿಸ್ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ಏಕ ಸದಸ್ಯ ಸಮಿತಿಯು ಈ ಬಗ್ಗೆ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.</p><p>₹14 ಲಕ್ಷ ಆರ್ಥಿಕ ನೆರವಿನ ಬಗ್ಗೆ ಮಾತನಾಡಿದ ಸಚಿವರು, ರಾಜ್ಯ ವಿಪತ್ತು ಸ್ಪಂದನಾ ನಿಧಿಯಿಂದ (ಎಸ್ಡಿಆರ್ಎಫ್) ₹4 ಲಕ್ಷ ಮತ್ತು ಉಳಿದ ₹10 ಲಕ್ಷವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ (ಸಿಎಂಡಿರ್ಎಫ್) ನೀಡಲಾಗುವುದು ಎಂದು ಹೇಳಿದ್ದಾರೆ.</p><p>ಗಾಯಾಳುಗಳಿಗೆ ಎಸ್ಡಿಆರ್ಎಫ್ ಅಡಿಯಲ್ಲಿ ಅನುಮತಿಸಲಾದ ಮೊತ್ತವನ್ನು ನೀಡಲಾಗುವುದು. ಹೆಚ್ಚುವರಿಯಾಗಿ ಸಿಎಂಡಿಆರ್ಎಫ್ನಿಂದ ತುರ್ತು ಆರ್ಥಿಕ ನೆರವಾಗಿ ₹2 ಲಕ್ಷ ನೀಡಲಾಗುವುದು. ಮುಂದಿನ 6 ತಿಂಗಳ ಕಾಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಅದಕ್ಕೆ ಅಗತ್ಯವಿರುವ ಮೊತ್ತವನ್ನು ಜಿಲ್ಲಾಧಿಕಾರಿ ಶಿಫಾರಸು ಆಧಾರದ ಮೇಲೆ ಸಿಎಂಡಿಆರ್ಎಫ್ನಿಂದ ಹಂಚಿಕೆ ಮಾಡಲಾಗುತ್ತದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>