<p><strong>ತ್ರಿಶ್ಶೂರ್</strong>: ಇಲ್ಲಿನ ರೈಲು ನಿಲ್ದಾಣದ ದ್ವಿಚಕ್ರ ವಾಹನ ನಿಲುಗಡೆ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಲ್ಲಿ ನಿಲ್ಲಿಸಲಾಗಿದ್ದ ಸುಮಾರು 500ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಇಲ್ಲಿ ಸುಮಾರು 600 ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗಿತ್ತು ಎನ್ನಲಾಗಿದೆ.</p>.<p>‘ಬೆಳಿಗ್ಗೆ 6.20ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. 6.40ಕ್ಕೆ ಅಗ್ನಿ ಶಾಮಕ ಕಚೇರಿಗೆ ಈ ಬಗ್ಗೆ ಕರೆ ಬಂದಿದೆ. 7.45ರ ಹೊತ್ತಿಗೆ ಬೆಂಕಿ ನಂದಿಸಲಾಯಿತು’ ಎಂದು ಅಧಿಕಾರಿಗಳು ಹೇಳಿದರು. ವಾಹನ ನಿಲುಗಡೆ ಗುತ್ತಿಗೆ ಪಡೆದಿದ್ದ ಕಂಪನಿಗೆ ಸೇರಿದ 2 ಮೊಬೈಲ್, ₹10 ಸಾವಿರ ನಗದು ಮತ್ತು ರಶೀದಿ ಮುದ್ರಿಸುವ ಯಂತ್ರವೂ ಸುಟ್ಟು ಹೋಗಿದೆ.</p>.<p>‘ವಿದ್ಯುತ್ ತಂತಿಯಲ್ಲಿ ಹೊತ್ತಿಕೊಂಡಿದ್ದ ಕಿಡಿ ಎರಡು ದ್ವಿಚಕ್ರ ವಾಹನಗಳ ಮೇಲೆ ಬಿದ್ದಿದ್ದರಿಂದ ವಾಹನ ನಿಲುಗಡೆ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತು ಎನ್ನಲಾಗುತ್ತಿದೆ. ಈ ಪ್ರದೇಶವನ್ನು ಟಿನ್ ಶೀಟ್ನಿಂದ ಮುಚ್ಚಲಾಗಿತ್ತು. ಬೆಂಕಿಯ ತಾಪಕ್ಕೆ ಇದು ಕೆಳಗೆ ಬಿದ್ದಿತು. ಇಲ್ಲಿಂದ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ಗಳಿಗೆ ಬೆಂಕಿ ತಗುಲದಂತೆ ಕ್ರಮ ವಹಿಸಲಾಯಿತು’ ಎಂದರು.</p>.<p>‘ವಾಹನ ನಿಲ್ದಾಣದ ಹತ್ತಿರವೇ ರೈಲು ಎಂಜಿನ್ ನಿಲ್ಲಿಸಲಾಗಿತ್ತು. ಇದಕ್ಕೆ ಏನಾದರೂ ಹಾನಿಯಾಗಿದೆಯೇ ಎಂಬುದರ ಕುರಿತು ರೈಲ್ವೆ ಇಲಾಖೆಯು ಯಾವುದೇ ಮಾಹಿತಿ ನೀಡಿಲ್ಲ. ಘಟನೆ ಕುರಿತು ರೈಲ್ವೆ ಇಲಾಖೆಯು ತನಿಖೆ ಆರಂಭಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶ್ಶೂರ್</strong>: ಇಲ್ಲಿನ ರೈಲು ನಿಲ್ದಾಣದ ದ್ವಿಚಕ್ರ ವಾಹನ ನಿಲುಗಡೆ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಲ್ಲಿ ನಿಲ್ಲಿಸಲಾಗಿದ್ದ ಸುಮಾರು 500ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಇಲ್ಲಿ ಸುಮಾರು 600 ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗಿತ್ತು ಎನ್ನಲಾಗಿದೆ.</p>.<p>‘ಬೆಳಿಗ್ಗೆ 6.20ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. 6.40ಕ್ಕೆ ಅಗ್ನಿ ಶಾಮಕ ಕಚೇರಿಗೆ ಈ ಬಗ್ಗೆ ಕರೆ ಬಂದಿದೆ. 7.45ರ ಹೊತ್ತಿಗೆ ಬೆಂಕಿ ನಂದಿಸಲಾಯಿತು’ ಎಂದು ಅಧಿಕಾರಿಗಳು ಹೇಳಿದರು. ವಾಹನ ನಿಲುಗಡೆ ಗುತ್ತಿಗೆ ಪಡೆದಿದ್ದ ಕಂಪನಿಗೆ ಸೇರಿದ 2 ಮೊಬೈಲ್, ₹10 ಸಾವಿರ ನಗದು ಮತ್ತು ರಶೀದಿ ಮುದ್ರಿಸುವ ಯಂತ್ರವೂ ಸುಟ್ಟು ಹೋಗಿದೆ.</p>.<p>‘ವಿದ್ಯುತ್ ತಂತಿಯಲ್ಲಿ ಹೊತ್ತಿಕೊಂಡಿದ್ದ ಕಿಡಿ ಎರಡು ದ್ವಿಚಕ್ರ ವಾಹನಗಳ ಮೇಲೆ ಬಿದ್ದಿದ್ದರಿಂದ ವಾಹನ ನಿಲುಗಡೆ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತು ಎನ್ನಲಾಗುತ್ತಿದೆ. ಈ ಪ್ರದೇಶವನ್ನು ಟಿನ್ ಶೀಟ್ನಿಂದ ಮುಚ್ಚಲಾಗಿತ್ತು. ಬೆಂಕಿಯ ತಾಪಕ್ಕೆ ಇದು ಕೆಳಗೆ ಬಿದ್ದಿತು. ಇಲ್ಲಿಂದ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ಗಳಿಗೆ ಬೆಂಕಿ ತಗುಲದಂತೆ ಕ್ರಮ ವಹಿಸಲಾಯಿತು’ ಎಂದರು.</p>.<p>‘ವಾಹನ ನಿಲ್ದಾಣದ ಹತ್ತಿರವೇ ರೈಲು ಎಂಜಿನ್ ನಿಲ್ಲಿಸಲಾಗಿತ್ತು. ಇದಕ್ಕೆ ಏನಾದರೂ ಹಾನಿಯಾಗಿದೆಯೇ ಎಂಬುದರ ಕುರಿತು ರೈಲ್ವೆ ಇಲಾಖೆಯು ಯಾವುದೇ ಮಾಹಿತಿ ನೀಡಿಲ್ಲ. ಘಟನೆ ಕುರಿತು ರೈಲ್ವೆ ಇಲಾಖೆಯು ತನಿಖೆ ಆರಂಭಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>