<p><strong>ತ್ರಿಶೂರ್:</strong> ಕೇರಳದ ತ್ರಿಶೂರ್ನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ವನ್ಯಜೀವಿ ಉದ್ಯಾನದಲ್ಲಿ 10 ಜಿಂಕೆಗಳು ಮೃತಪಟ್ಟಿದ್ದು, ಬೀದಿ ನಾಯಿಗಳ ದಾಳಿಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. </p><p>ಸೋಮವಾರ ರಾತ್ರಿ ಉದ್ಯಾನಕ್ಕೆ ನಾಯಿಗಳು ನುಗ್ಗಿ ದಾಳಿ ಮಾಡಿವೆ ಎನ್ನಲಾಗಿದ್ದು, ಈ ಘಟನೆ ಉದ್ಯಾನದ ಭದ್ರತೆಯ ಬಗ್ಗೆ ಕಳವಳ ಮೂಡಿಸಿದೆ.</p><p>ವನ್ಯಜೀವಿ ತಜ್ಞ ಡಾ.ಅರುಣ್ ಜಚಾರಿಯಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ಜಿಂಕೆಗಳ ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಉದ್ಯಾನದ ನಿರ್ದೇಶಕ ನಾಗರಾಜ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.</p><p>336 ಎಕರೆಯಲ್ಲಿರುವ ‘ತ್ರಿಶೂರ್ ವನ್ಯಜೀವಿ ಉದ್ಯಾನ’ಕ್ಕೆ ಅ.28ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಾಲನೆ ನೀಡಿದ್ದರು. ಈ ಉದ್ಯಾನದ ಪ್ರವೇಶಕ್ಕೆ ಸದ್ಯ ಶಾಲಾ, ಕಾಲೇಜಿನ ಮಕ್ಕಳಿಗೆ ಮಾತ್ರ ಅನುಮತಿಸಲಾಗಿದೆ.</p><p>ಉದ್ಯಾನದ ನೈಸರ್ಗಿಕ ಆವರಣಗಳಲ್ಲಿ 80 ಜಾತಿಗಳ 534 ಪ್ರಾಣಿಗಳಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಅಸ್ತಿತ್ವದಲ್ಲಿರುವ ತ್ರಿಶೂರ್ ಮೃಗಾಲಯದಿಂದ ಪ್ರಾಣಿಗಳನ್ನು ಹಂತ ಹಂತವಾಗಿ ಹೊಸ ಕ್ಯಾಂಪಸ್ಗೆ ಸ್ಥಳಾಂತರಿಸಲಾಗುತ್ತಿದೆ. ಉದ್ಯಾನದ ಬಳಿ ಇರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.ಬೀದಿನಾಯಿ ಹಾವಳಿ ನಿಯಂತ್ರಣ: ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಪ್ರಮಾಣಪತ್ರ .ಬೀದಿ ನಾಯಿ ಹಾವಳಿ: ಪ್ರಮಾಣ ಪತ್ರ ಸಲ್ಲಿಸದ್ದಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್:</strong> ಕೇರಳದ ತ್ರಿಶೂರ್ನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ವನ್ಯಜೀವಿ ಉದ್ಯಾನದಲ್ಲಿ 10 ಜಿಂಕೆಗಳು ಮೃತಪಟ್ಟಿದ್ದು, ಬೀದಿ ನಾಯಿಗಳ ದಾಳಿಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. </p><p>ಸೋಮವಾರ ರಾತ್ರಿ ಉದ್ಯಾನಕ್ಕೆ ನಾಯಿಗಳು ನುಗ್ಗಿ ದಾಳಿ ಮಾಡಿವೆ ಎನ್ನಲಾಗಿದ್ದು, ಈ ಘಟನೆ ಉದ್ಯಾನದ ಭದ್ರತೆಯ ಬಗ್ಗೆ ಕಳವಳ ಮೂಡಿಸಿದೆ.</p><p>ವನ್ಯಜೀವಿ ತಜ್ಞ ಡಾ.ಅರುಣ್ ಜಚಾರಿಯಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ಜಿಂಕೆಗಳ ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಉದ್ಯಾನದ ನಿರ್ದೇಶಕ ನಾಗರಾಜ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.</p><p>336 ಎಕರೆಯಲ್ಲಿರುವ ‘ತ್ರಿಶೂರ್ ವನ್ಯಜೀವಿ ಉದ್ಯಾನ’ಕ್ಕೆ ಅ.28ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಾಲನೆ ನೀಡಿದ್ದರು. ಈ ಉದ್ಯಾನದ ಪ್ರವೇಶಕ್ಕೆ ಸದ್ಯ ಶಾಲಾ, ಕಾಲೇಜಿನ ಮಕ್ಕಳಿಗೆ ಮಾತ್ರ ಅನುಮತಿಸಲಾಗಿದೆ.</p><p>ಉದ್ಯಾನದ ನೈಸರ್ಗಿಕ ಆವರಣಗಳಲ್ಲಿ 80 ಜಾತಿಗಳ 534 ಪ್ರಾಣಿಗಳಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಅಸ್ತಿತ್ವದಲ್ಲಿರುವ ತ್ರಿಶೂರ್ ಮೃಗಾಲಯದಿಂದ ಪ್ರಾಣಿಗಳನ್ನು ಹಂತ ಹಂತವಾಗಿ ಹೊಸ ಕ್ಯಾಂಪಸ್ಗೆ ಸ್ಥಳಾಂತರಿಸಲಾಗುತ್ತಿದೆ. ಉದ್ಯಾನದ ಬಳಿ ಇರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.ಬೀದಿನಾಯಿ ಹಾವಳಿ ನಿಯಂತ್ರಣ: ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಪ್ರಮಾಣಪತ್ರ .ಬೀದಿ ನಾಯಿ ಹಾವಳಿ: ಪ್ರಮಾಣ ಪತ್ರ ಸಲ್ಲಿಸದ್ದಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>