<p><strong>ತಿರುವನಂತಪುರ</strong>: ವಯನಾಡ್ನ ಮಾನಂದವಾಡಿಯಲ್ಲಿ ‘ನರಭಕ್ಷಕ’ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಒಬ್ಬರ ಮೇಲೆ ಹುಲಿ ಶುಕ್ರವಾರ ದಾಳಿ ನಡೆಸಿದೆ. ಇದರಿಂದಾಗಿ ಭೀತಿ ಇನ್ನಷ್ಟು ಹೆಚ್ಚಿದೆ.</p><p> ಇಲಾಖೆಯ ಕ್ಷಿಪ್ರ ಕಾರ್ಯಪಡೆಯ (ಆರ್ಆರ್ಟಿ) ಸದಸ್ಯ, 28 ವರ್ಷದ ಜಯಸೂರ್ಯ ಅವರ ಕೈಗೆ ಹುಲಿ ದಾಳಿಯಿಂದ ಗಾಯವಾಗಿದೆ. ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. </p><p> ಹಿಂಬದಿಯಿಂದ ಹುಲಿ ದಾಳಿ ನಡೆಸಿದ್ದು, ಜಾಗೃತರಾದ ಜಯಸೂರ್ಯ ತಮ್ಮಲ್ಲಿದ್ದ ರಕ್ಷಣಾ ಕವಚ ಅಡ್ಡಹಿಡಿದು ತಪ್ಪಿಸಿಕೊಂಡಿದ್ದಾರೆ. ಈ ಗೊಂದಲದಲ್ಲಿ ಕೈಗೆ ಗಾಯವಾಗಿದೆ. ಹುಲಿ ಅಷ್ಟೇ ವೇಗದಲ್ಲಿ ಸ್ಥಳದಿಂದ ಹೋಗಿದೆ.</p><p>ಸ್ಥಳೀಯರ ಪ್ರತಿಭಟನೆ: ಹುಲಿ ದಾಳಿಯಿಂದ ಮೃತಪಟ್ಟಿದ್ದ ಎಸ್ಟೇಟ್ನ ನೌಕರರಾದ ರಾಧಾ ಕುಟುಂಬ ಸದಸ್ಯರನ್ನು ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಭೇಟಿಯಾಗಿದ್ದರು. ಆಗ ಸ್ಥಳೀಯರು ಪ್ರತಿಭಟನೆ ನಡೆಸಿದರು.</p><p>ಸಚಿವರು ಶನಿವಾರದಂದು ಫ್ಯಾಷನ್ ಷೋ ವೀಕ್ಷಿಸಲು ತೆರಳಿದ್ದರು. ಅಲ್ಲದೆ, ಆ ಕಾರ್ಯಕ್ರಮದಲ್ಲಿ ಹಾಡೊಂದನ್ನು ಹಾಡಿದ್ದರು ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.</p><p>ಜನಾಕ್ರೋಶ ಗಮನಿಸಿದ ಪೊಲೀಸರು ಸಚಿವರನ್ನು ಬೇರೆಡೆ ಕರೆದೊಯ್ದರು. ಇದಕ್ಕೆ ಮುನ್ನ ಸಚಿವರು ಮೃತ ಕಾರ್ಮಿಕನ ಪುತ್ರನಿಗೆ ಹಂಗಾಮಿ ನೌಕರಿಯ ಕಾರ್ಯಾದೇಶ ಹಸ್ತಾಂತರಿಸಿದರು.</p><p>ಮುಖ್ಯಮಂತ್ರಿ ಅವರ ಸೂಚನೆಯಂತೆ ಹುಲಿ ಬೇಟೆಗೆ ಆದೇಶಿಸಲಾಗಿದೆ. ಹುಲಿ ವಿರುದ್ಧದ ಕಾರ್ಯಾಚರಣೆಯು ಪರಿಣಾಮಕಾರಿಯಾಗಿ ನಡೆದಿದೆ ಎಂದು ತಿಳಿಸಿದರು.</p><p>ಹುಲಿ ದಾಳಿ ನಡೆಸಿದ್ದ ಸ್ಥಳದ ಆಸುಪಾಸಿನಲ್ಲಿ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ. ಸುಮಾರು 10 ತಂಡಗಳು ಈ ಕಾರ್ಯದಲ್ಲಿ ತೊಡಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವಯನಾಡ್ನ ಮಾನಂದವಾಡಿಯಲ್ಲಿ ‘ನರಭಕ್ಷಕ’ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಒಬ್ಬರ ಮೇಲೆ ಹುಲಿ ಶುಕ್ರವಾರ ದಾಳಿ ನಡೆಸಿದೆ. ಇದರಿಂದಾಗಿ ಭೀತಿ ಇನ್ನಷ್ಟು ಹೆಚ್ಚಿದೆ.</p><p> ಇಲಾಖೆಯ ಕ್ಷಿಪ್ರ ಕಾರ್ಯಪಡೆಯ (ಆರ್ಆರ್ಟಿ) ಸದಸ್ಯ, 28 ವರ್ಷದ ಜಯಸೂರ್ಯ ಅವರ ಕೈಗೆ ಹುಲಿ ದಾಳಿಯಿಂದ ಗಾಯವಾಗಿದೆ. ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. </p><p> ಹಿಂಬದಿಯಿಂದ ಹುಲಿ ದಾಳಿ ನಡೆಸಿದ್ದು, ಜಾಗೃತರಾದ ಜಯಸೂರ್ಯ ತಮ್ಮಲ್ಲಿದ್ದ ರಕ್ಷಣಾ ಕವಚ ಅಡ್ಡಹಿಡಿದು ತಪ್ಪಿಸಿಕೊಂಡಿದ್ದಾರೆ. ಈ ಗೊಂದಲದಲ್ಲಿ ಕೈಗೆ ಗಾಯವಾಗಿದೆ. ಹುಲಿ ಅಷ್ಟೇ ವೇಗದಲ್ಲಿ ಸ್ಥಳದಿಂದ ಹೋಗಿದೆ.</p><p>ಸ್ಥಳೀಯರ ಪ್ರತಿಭಟನೆ: ಹುಲಿ ದಾಳಿಯಿಂದ ಮೃತಪಟ್ಟಿದ್ದ ಎಸ್ಟೇಟ್ನ ನೌಕರರಾದ ರಾಧಾ ಕುಟುಂಬ ಸದಸ್ಯರನ್ನು ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಭೇಟಿಯಾಗಿದ್ದರು. ಆಗ ಸ್ಥಳೀಯರು ಪ್ರತಿಭಟನೆ ನಡೆಸಿದರು.</p><p>ಸಚಿವರು ಶನಿವಾರದಂದು ಫ್ಯಾಷನ್ ಷೋ ವೀಕ್ಷಿಸಲು ತೆರಳಿದ್ದರು. ಅಲ್ಲದೆ, ಆ ಕಾರ್ಯಕ್ರಮದಲ್ಲಿ ಹಾಡೊಂದನ್ನು ಹಾಡಿದ್ದರು ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.</p><p>ಜನಾಕ್ರೋಶ ಗಮನಿಸಿದ ಪೊಲೀಸರು ಸಚಿವರನ್ನು ಬೇರೆಡೆ ಕರೆದೊಯ್ದರು. ಇದಕ್ಕೆ ಮುನ್ನ ಸಚಿವರು ಮೃತ ಕಾರ್ಮಿಕನ ಪುತ್ರನಿಗೆ ಹಂಗಾಮಿ ನೌಕರಿಯ ಕಾರ್ಯಾದೇಶ ಹಸ್ತಾಂತರಿಸಿದರು.</p><p>ಮುಖ್ಯಮಂತ್ರಿ ಅವರ ಸೂಚನೆಯಂತೆ ಹುಲಿ ಬೇಟೆಗೆ ಆದೇಶಿಸಲಾಗಿದೆ. ಹುಲಿ ವಿರುದ್ಧದ ಕಾರ್ಯಾಚರಣೆಯು ಪರಿಣಾಮಕಾರಿಯಾಗಿ ನಡೆದಿದೆ ಎಂದು ತಿಳಿಸಿದರು.</p><p>ಹುಲಿ ದಾಳಿ ನಡೆಸಿದ್ದ ಸ್ಥಳದ ಆಸುಪಾಸಿನಲ್ಲಿ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ. ಸುಮಾರು 10 ತಂಡಗಳು ಈ ಕಾರ್ಯದಲ್ಲಿ ತೊಡಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>