ಮುಜಾಫ್ಫರ್ನಗರ: ಶುಕ್ರತಾಲ್ನಲ್ಲಿರುವ ಹನುಮಾನ್ ಧಾಮ್ ದೇವಸ್ಥಾನವನ್ನುಭೀಮ್ ಆರ್ಮಿ ಸಂಘಟನಾಕಾರರು ತಮ್ಮ ಸುಪರ್ದಿಗೆ ಪಡೆಯುವ ಸಾಧ್ಯತೆ ಇರುವ ಕಾರಣ ದೇವಸ್ಥಾನದ ಸುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
‘ದೇಶದ ಎಲ್ಲ ಹನುಮ ದೇವಸ್ಥಾನಗಳನ್ನು ದಲಿತರು ಸುಪರ್ದಿಗೆ ತೆಗೆದುಕೊಳ್ಳಬೇಕು ಮತ್ತು ಅಲ್ಲಿ ದಲಿತರನ್ನೇ ಪುರೋಹಿತರ ನ್ನಾಗಿ ನೇಮಿಸಿಕೊಳ್ಳಬೇಕು ಎಂದು ಭೀಮ್ ಆರ್ಮಿ ಸಂಘಟನೆ ಮುಖ್ಯಸ್ಥ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಹೀಗಾಗಿ ಸ್ಥಳದಲ್ಲಿಪೊಲೀಸ್ ಪಡೆ ನಿಯೋಜಿಸಲಾಗಿದೆ.
ರಾಜಸ್ಥಾನದ ಅಲ್ವರ್ನಲ್ಲಿ ನಡೆದ ರ್ಯಾಲಿ ಸಂದರ್ಭದಲ್ಲಿ ‘ಹನುಮಂತ ವಂಚಿತ, ದಲಿತ ಮತ್ತು ಅರಣ್ಯವಾಸಿ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಚಂದ್ರಶೇಖರ್ ಹೀಗೆ ಪ್ರತಿಕ್ರಿಯಿಸಿದ್ದರು.