<p><strong>ನವದೆಹಲಿ :</strong> ‘ಪ್ರತಿಭಟನೆನಿರತ ರೈತರು ಪ್ರಧಾನಿಯ ಘನತೆಯನ್ನು ಗೌರವಿಸುತ್ತಾರೆ. ಅದರೆ ತಮ್ಮ ಆತ್ಮಗೌರವವನ್ನು ರಕ್ಷಿಸಿಕೊಳ್ಳಲೂ ಬದ್ಧರಾಗಿದ್ದಾರೆ’ ಎಂದು ಭಾರತೀಯ ಕಿಸಾನ್ ಯೂನಿಯನ್ನ ನಾಯಕರಾದ ನರೇಶ್ ಟಿಕಾಯತ್ ಮತ್ತು ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>‘ರೈತರು ನಮ್ಮ ಸರ್ಕಾರದಿಂದ ಒಂದು ಕರೆಯಷ್ಟು ದೂರದಲ್ಲಷ್ಟೇ ಇದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದರು.ಇನ್ನೂ ಒಂದೂವರೆ ವರ್ಷ ಈ ಕಾಯ್ದೆಗಳನ್ನು ಜಾರಿಗೆ ತರುವುದಿಲ್ಲ ಎಂಬ ನಮ್ಮ ಮಾತಿಗೆ ಇನ್ನೂ ಬದ್ಧವಾಗಿದ್ದೇವೆ ಎಂದೂ ಪ್ರಧಾನಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಟಿಕಾಯತ್ ಸೋದರರು ಈ ಹೇಳಿಕೆ ನೀಡಿದ್ದಾರೆ.</p>.<p>‘ನಾವು ಇನ್ನೂ ಮಾತುಕತೆಗೆ ಸಿದ್ಧರಿದ್ದೇವೆ. ಸರ್ಕಾರ ಮತ್ತು ರೈತರ ಆಗ್ರಹಗಳನ್ನು ಚರ್ಚಿಸಲು ಸಿದ್ಧರಿದ್ದೇವೆ. ಆದರೆ ರೈತರು ತಮ್ಮ ಆತ್ಮಗೌರವವನ್ನು ರಕ್ಷಿಸಿಕೊಳ್ಳಲು ಬದ್ಧರಾಗಿದ್ದಾರೆ’ ಎಂದು ಟಿಕಾಯತ್ ಸೋದರರು ಹೇಳಿದ್ದಾರೆ.</p>.<p>‘ಈ ಬಿಕ್ಕಟ್ಟಿಗೆ ಗೌರವಯುತವಾದ ಪರಿಹಾರವನ್ನು ಕಂಡುಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ ಯಾವುದೇ ಒತ್ತಡಕ್ಕೆ ಮಣಿದು ಏನನ್ನೂ ಒಪ್ಪಿಕೊಳ್ಳುವುದಿಲ್ಲ. ಆದರೆ ಸಂಸತ್ತೂ ನಮ್ಮ ಮುಂದೆ ತಲೆಬಾಗುವುದು ಬೇಡ’ ಎಂದು ಟಿಕಾಯತ್ ಸೋದರರು ಹೇಳಿದ್ದಾರೆ.</p>.<p>ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರವನ್ನು ಖಂಡಿಸುತ್ತೇವೆ. ಆದರೆ ಆ ಹಿಂಸಾಚಾರವು ರೈತರ ವಿರುದ್ಧ ನಡೆಸಲಾದ ಸಂಚು ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ‘ಪ್ರತಿಭಟನೆನಿರತ ರೈತರು ಪ್ರಧಾನಿಯ ಘನತೆಯನ್ನು ಗೌರವಿಸುತ್ತಾರೆ. ಅದರೆ ತಮ್ಮ ಆತ್ಮಗೌರವವನ್ನು ರಕ್ಷಿಸಿಕೊಳ್ಳಲೂ ಬದ್ಧರಾಗಿದ್ದಾರೆ’ ಎಂದು ಭಾರತೀಯ ಕಿಸಾನ್ ಯೂನಿಯನ್ನ ನಾಯಕರಾದ ನರೇಶ್ ಟಿಕಾಯತ್ ಮತ್ತು ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>‘ರೈತರು ನಮ್ಮ ಸರ್ಕಾರದಿಂದ ಒಂದು ಕರೆಯಷ್ಟು ದೂರದಲ್ಲಷ್ಟೇ ಇದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದರು.ಇನ್ನೂ ಒಂದೂವರೆ ವರ್ಷ ಈ ಕಾಯ್ದೆಗಳನ್ನು ಜಾರಿಗೆ ತರುವುದಿಲ್ಲ ಎಂಬ ನಮ್ಮ ಮಾತಿಗೆ ಇನ್ನೂ ಬದ್ಧವಾಗಿದ್ದೇವೆ ಎಂದೂ ಪ್ರಧಾನಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಟಿಕಾಯತ್ ಸೋದರರು ಈ ಹೇಳಿಕೆ ನೀಡಿದ್ದಾರೆ.</p>.<p>‘ನಾವು ಇನ್ನೂ ಮಾತುಕತೆಗೆ ಸಿದ್ಧರಿದ್ದೇವೆ. ಸರ್ಕಾರ ಮತ್ತು ರೈತರ ಆಗ್ರಹಗಳನ್ನು ಚರ್ಚಿಸಲು ಸಿದ್ಧರಿದ್ದೇವೆ. ಆದರೆ ರೈತರು ತಮ್ಮ ಆತ್ಮಗೌರವವನ್ನು ರಕ್ಷಿಸಿಕೊಳ್ಳಲು ಬದ್ಧರಾಗಿದ್ದಾರೆ’ ಎಂದು ಟಿಕಾಯತ್ ಸೋದರರು ಹೇಳಿದ್ದಾರೆ.</p>.<p>‘ಈ ಬಿಕ್ಕಟ್ಟಿಗೆ ಗೌರವಯುತವಾದ ಪರಿಹಾರವನ್ನು ಕಂಡುಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ ಯಾವುದೇ ಒತ್ತಡಕ್ಕೆ ಮಣಿದು ಏನನ್ನೂ ಒಪ್ಪಿಕೊಳ್ಳುವುದಿಲ್ಲ. ಆದರೆ ಸಂಸತ್ತೂ ನಮ್ಮ ಮುಂದೆ ತಲೆಬಾಗುವುದು ಬೇಡ’ ಎಂದು ಟಿಕಾಯತ್ ಸೋದರರು ಹೇಳಿದ್ದಾರೆ.</p>.<p>ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರವನ್ನು ಖಂಡಿಸುತ್ತೇವೆ. ಆದರೆ ಆ ಹಿಂಸಾಚಾರವು ರೈತರ ವಿರುದ್ಧ ನಡೆಸಲಾದ ಸಂಚು ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>