ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ಹಿನ್ನೆಲೆಯಲ್ಲಿ ವಿವಿಧ ನಾಗರಿಕ ಸಂಘಟನೆಗಳು ಆಯೋಜಿಸಿದ್ದ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಕ್ಷಾಂತರ ಕಾರ್ಮಿಕರು, ತಮ್ಮ ಕಾರ್ಮಿಕ ಸಂಘಟನೆಗಳು ಮೂಲಕ ಈಗಾಗಲೇ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಈಗ ಸಮಾಜದಲ್ಲಿರುವ ಕೃಷಿಕರೇತರ ವರ್ಗದವರು ರೈತರನ್ನು ಬೆಂಬಲಿಸುವ ಸಮಯ ಬಂದಿದೆ‘ ಎಂದು ಹೇಳಿದರು.