ಒಂದು ಕಾಲದಲ್ಲಿ ನಿತೀಶ್ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಅವರು, ನಿತೀಶ್ ವಿರುದ್ಧ ಹೇಳಿಕೆಗಳನ್ನು ನೀಡಲು ಆರಂಭಿಸಿದ ನಂತರ ಜೆಡಿಯುದಿಂದ ಉಚ್ಚಾಟನೆಗೊಂಡಿದ್ದರು. ವಿಧಾನಸಭಾ ಚುನಾವಣೆಗಳನ್ನು ಮುಂದೂಡುವಂತೆ ಆರ್ಜೆಡಿ, ಎಲ್ಜೆಪಿ ಮುಂತಾದ ಪಕ್ಷಗಳು ಈಗಾಗಲೇ ಒತ್ತಾಯಿಸಿದ್ದು, ಈ ಒತ್ತಾಯಕ್ಕೆ ಈಗ ಪ್ರಶಾಂತ್ ಕಿಶೋರ್ ಅವರೂ ಧ್ವನಿಗೂಡಿಸಿದ್ದಾರೆ. ಬರುವ ಅಕ್ಟೋಬರ್– ನವೆಂಬರ್ ವೇಳೆಗೆ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಬೇಕಾಗಿದ್ದು, ಆ ಬಗ್ಗೆ ಚುನಾವಣಾ ಆಯೋಗ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.