<p><strong>ನವದೆಹಲಿ:</strong> ‘ಜಗತ್ತಿನ ಹಲವು ರಾಷ್ಟ್ರಗಳು ಯುದ್ಧದ ಮನಸ್ಥಿತಿಗೆ ವಾಲುತ್ತಿರುವ ಈಗಿನ ಸಂದರ್ಭದಲ್ಲಿ ಭಾರತದ ತೀರ್ಥಂಕರರ ಬೋಧನೆಗಳು ಮತ್ತು ಅಹಿಂಸೆಯ ತತ್ವವು ಹೆಚ್ಚು ಪ್ರಸ್ತುತವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>ಭಾನುವಾರ ಇಲ್ಲಿ ಭಗವಾನ್ ಮಹಾವೀರರ 2,550ನೇ ನಿರ್ವಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತ್ಯೇಕತಾ ಭಾವನೆಯು ಬೇರೂರುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಭಾರತವು ವಿಶ್ವಬಂಧುವಿನ ಸ್ಥಾನದಲ್ಲಿದೆ’ ಎಂದು ಪ್ರತಿಪಾದಿಸಿದರು. </p>.<p>‘ಜಗತ್ತು ಇಂದು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಸತ್ಯ ಮತ್ತು ಅಹಿಂಸೆಯ ತತ್ವಗಳೇ ಪರಿಹಾರ ಎಂದು ಭಾರತವು ಈಗ ಜಾಗತಿಕ ವೇದಿಕೆಯಲ್ಲಿ ಬಿಂಬಿಸುತ್ತಿದೆ. ಭಾರತಕ್ಕಿರುವ ಸಾಂಸ್ಕೃತಿಕ ವರ್ಚಸ್ಸು ನಿರ್ಣಾಯಕ ಪಾತ್ರ ವಹಿಸುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಇದೇ ಸಂದರ್ಭದಲ್ಲಿ ಅವರು ನಿರ್ವಾಣ ಮಹೋತ್ಸವದ ನಿಮಿತ್ತ ತರಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು.</p>.<p>‘2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ದೇಶವು ಹತಾಶ ಭಾವನೆಯಲ್ಲಿ ಮುಳುಗಿತ್ತು’ ಎಂದು ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.</p>.<p>‘ನಾವು ದೇಶದಲ್ಲಿ ಸಂಸ್ಕೃತಿ, ಪರಂಪರೆಗೆ ಹೆಚ್ಚು ಉತ್ತೇಜನ ನೀಡುತ್ತಿದ್ದೇವೆ. ಯೋಗ ಮತ್ತು ಆಯುರ್ವೇದ ಚಿಕಿತ್ಸೆಗೆ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಲೋಕಸಭೆ ಚುನಾವಣೆಯನ್ನು ಉಲ್ಲೇಖಿಸಿ, ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ. ಈ ಚುನಾವಣೆಯೊಂದಿಗೆ ಭವಿಷ್ಯದತ್ತ ಹೊಸ ಪಯಣ ಆರಂಭವಾಗಲಿದೆ ಎಂದು ರಾಷ್ಟ್ರ ವಿಶ್ವಾಸವಿಟ್ಟಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಜಗತ್ತಿನ ಹಲವು ರಾಷ್ಟ್ರಗಳು ಯುದ್ಧದ ಮನಸ್ಥಿತಿಗೆ ವಾಲುತ್ತಿರುವ ಈಗಿನ ಸಂದರ್ಭದಲ್ಲಿ ಭಾರತದ ತೀರ್ಥಂಕರರ ಬೋಧನೆಗಳು ಮತ್ತು ಅಹಿಂಸೆಯ ತತ್ವವು ಹೆಚ್ಚು ಪ್ರಸ್ತುತವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>ಭಾನುವಾರ ಇಲ್ಲಿ ಭಗವಾನ್ ಮಹಾವೀರರ 2,550ನೇ ನಿರ್ವಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತ್ಯೇಕತಾ ಭಾವನೆಯು ಬೇರೂರುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಭಾರತವು ವಿಶ್ವಬಂಧುವಿನ ಸ್ಥಾನದಲ್ಲಿದೆ’ ಎಂದು ಪ್ರತಿಪಾದಿಸಿದರು. </p>.<p>‘ಜಗತ್ತು ಇಂದು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಸತ್ಯ ಮತ್ತು ಅಹಿಂಸೆಯ ತತ್ವಗಳೇ ಪರಿಹಾರ ಎಂದು ಭಾರತವು ಈಗ ಜಾಗತಿಕ ವೇದಿಕೆಯಲ್ಲಿ ಬಿಂಬಿಸುತ್ತಿದೆ. ಭಾರತಕ್ಕಿರುವ ಸಾಂಸ್ಕೃತಿಕ ವರ್ಚಸ್ಸು ನಿರ್ಣಾಯಕ ಪಾತ್ರ ವಹಿಸುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಇದೇ ಸಂದರ್ಭದಲ್ಲಿ ಅವರು ನಿರ್ವಾಣ ಮಹೋತ್ಸವದ ನಿಮಿತ್ತ ತರಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು.</p>.<p>‘2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ದೇಶವು ಹತಾಶ ಭಾವನೆಯಲ್ಲಿ ಮುಳುಗಿತ್ತು’ ಎಂದು ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.</p>.<p>‘ನಾವು ದೇಶದಲ್ಲಿ ಸಂಸ್ಕೃತಿ, ಪರಂಪರೆಗೆ ಹೆಚ್ಚು ಉತ್ತೇಜನ ನೀಡುತ್ತಿದ್ದೇವೆ. ಯೋಗ ಮತ್ತು ಆಯುರ್ವೇದ ಚಿಕಿತ್ಸೆಗೆ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಲೋಕಸಭೆ ಚುನಾವಣೆಯನ್ನು ಉಲ್ಲೇಖಿಸಿ, ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ. ಈ ಚುನಾವಣೆಯೊಂದಿಗೆ ಭವಿಷ್ಯದತ್ತ ಹೊಸ ಪಯಣ ಆರಂಭವಾಗಲಿದೆ ಎಂದು ರಾಷ್ಟ್ರ ವಿಶ್ವಾಸವಿಟ್ಟಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>