<p><strong>ಹೈದರಾಬಾದ್: </strong>ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ತುಪ್ಪ ಪ್ರಕರಣದ ಸಂಚುಕೋರರನ್ನು ಪತ್ತೆ ಹಚ್ಚಲು ತನಿಖಾ ಆಯೋಗ ರಚಿಸಲು ಆಂಧ್ರಪ್ರದೇಶ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. </p><p>ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p><p>ಸುಪ್ರೀಂ ಕೋರ್ಟ್ ನೇಮಿಸಿರುವ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಈ ಪ್ರಕರಣದ ತನಿಖೆ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು, ಪಾಮ್ ಆಯಿಲ್ ಕಲಬೆರಕೆ ಮಾಡಿರುವುದನ್ನು ದೃಢಪಡಿಸಲಾಗಿದೆ. </p><p>ಎಸ್ಐಟಿ ತುಪ್ಪದಲ್ಲಿ ಆಗಿರುವ ಕಲಬೆರಕೆ, ಪೂರೈಕೆ ಅಕ್ರಮ, ಟೆಂಡರ್ ನಿಯಮಗಳನ್ನು ಸಡಿಲಗೊಳಿಸಿರುವುದು, ಲಡ್ಡು ಪ್ರಸಾದದ ಗುಣಮಟ್ಟ ಪರೀಕ್ಷೆಯಲ್ಲಿ ಆಗಿರುವ ಲೋಪಗಳು, ನಕಲಿ ದಾಖಲೆ ಸೃಷ್ಟಿಯ ಬಗ್ಗೆಯೂ ಎಸ್ಐಟಿ ವರದಿ ನೀಡಿದೆ. ಈ ಅಂಶಗಳನ್ನು ಆಧರಿಸಿ ತನಿಖಾ ಆಯೋಗ ರಚಿಸಲು ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಹಣಕಾಸು ಸಚಿವ ಪೈಯಾವುಲ ಕೇಶವ್ ಸಂಪುಟ ಸಭೆಯ ಬಳಿಕ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p><p>‘ಟಿಟಿಡಿಯ ಪಾವಿತ್ರ್ಯ ಸಂರಕ್ಷಿಸುವುದು ನಮ್ಮ ಆದ್ಯತೆ. ಲಡ್ಡು ಪ್ರಸಾದದ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಕೇಶವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ತುಪ್ಪ ಪ್ರಕರಣದ ಸಂಚುಕೋರರನ್ನು ಪತ್ತೆ ಹಚ್ಚಲು ತನಿಖಾ ಆಯೋಗ ರಚಿಸಲು ಆಂಧ್ರಪ್ರದೇಶ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. </p><p>ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p><p>ಸುಪ್ರೀಂ ಕೋರ್ಟ್ ನೇಮಿಸಿರುವ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಈ ಪ್ರಕರಣದ ತನಿಖೆ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು, ಪಾಮ್ ಆಯಿಲ್ ಕಲಬೆರಕೆ ಮಾಡಿರುವುದನ್ನು ದೃಢಪಡಿಸಲಾಗಿದೆ. </p><p>ಎಸ್ಐಟಿ ತುಪ್ಪದಲ್ಲಿ ಆಗಿರುವ ಕಲಬೆರಕೆ, ಪೂರೈಕೆ ಅಕ್ರಮ, ಟೆಂಡರ್ ನಿಯಮಗಳನ್ನು ಸಡಿಲಗೊಳಿಸಿರುವುದು, ಲಡ್ಡು ಪ್ರಸಾದದ ಗುಣಮಟ್ಟ ಪರೀಕ್ಷೆಯಲ್ಲಿ ಆಗಿರುವ ಲೋಪಗಳು, ನಕಲಿ ದಾಖಲೆ ಸೃಷ್ಟಿಯ ಬಗ್ಗೆಯೂ ಎಸ್ಐಟಿ ವರದಿ ನೀಡಿದೆ. ಈ ಅಂಶಗಳನ್ನು ಆಧರಿಸಿ ತನಿಖಾ ಆಯೋಗ ರಚಿಸಲು ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಹಣಕಾಸು ಸಚಿವ ಪೈಯಾವುಲ ಕೇಶವ್ ಸಂಪುಟ ಸಭೆಯ ಬಳಿಕ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p><p>‘ಟಿಟಿಡಿಯ ಪಾವಿತ್ರ್ಯ ಸಂರಕ್ಷಿಸುವುದು ನಮ್ಮ ಆದ್ಯತೆ. ಲಡ್ಡು ಪ್ರಸಾದದ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಕೇಶವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>