<p><strong>ಅಮರಾವತಿ</strong>: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ತನಿಖೆಯನ್ನು ಪೂರ್ಣಗೊಳಿಸಿದೆ.</p>.<p>ಪ್ರಕರಣದಲ್ಲಿ ತುಪ್ಪ ಪೂರೈಕೆದಾರರು, ಟಿಟಿಡಿಯ ನೌಕರರು ಹಾಗೂ ಇತರರನ್ನು ಆರೋಪಿಗಳು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. </p>.<p class="bodytext">‘ನೆಲ್ಲೂರಿನ ಎಸಿಬಿ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್ಶೀಟ್ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿದೆ.</p>.<p class="bodytext">ಆರೋಪಿಗಳು ಹಸುವಿನ ಶುದ್ಧ ತುಪ್ಪದ ಬದಲಿಗೆ ಕೋಲ್ಕತ್ತದ ಬ್ಯೂಜ್ ಬಡ್ಜ್ ಕಂಪನಿಯಿಂದ ಪಡೆದ ಪಾಮ್ ಆಯಿಲ್, ಪಾಮ್ ಕರ್ನಲ್ ಎಣ್ಣೆ ಮತ್ತು ಪಾಮೊಲಿನ್ನಂತಹ ಕಲಬೆರಕೆ ವಸ್ತುಗಳನ್ನು ಬಳಸಿದ್ದಾರೆ. ಈ ವಸ್ತುಗಳನ್ನು ಅಲ್ಪ ಪ್ರಮಾಣದ ಶುದ್ಧ ತುಪ್ಪ, ಬೀಟಾ–ಕೆರೋಟಿನ್, ಅಸಿಟಿಕ್ ಆ್ಯಸಿಡ್ ಎಸ್ಟರ್ ಮತ್ತು ಸಿಂಥೆಟಿಕ್ ತುಪ್ಪದ ಸುವಾಸನೆಯಂತಹ ರಾಸಾಯನಿಕಗಳೊಂದಿಗೆ ಮಿಶ್ರಣ ಮಾಡಲಾಗುತ್ತಿತ್ತು ಎಂದು ತನಿಖೆಯಲ್ಲಿ ಗೊತ್ತಾಗಿದೆ. </p>.<p class="bodytext">ಉತ್ತರಾಖಂಡದ ಭೋಲೆ ಬಾಬಾ ಸಾವಯವ ಡೇರಿ ನಿರ್ದೇಶಕರಾದ ಪೋಮಿಲ್ ಜೈನ್ ಮತ್ತು ವಿಪಿನ್ ಜೈನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳನ್ನಾಗಿಸಲಾಗಿದೆ. ದೋಷಾರೋಪ ಪಟ್ಟಿಯಲ್ಲಿ 36 ಆರೋಪಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಅಷ್ಟೂ ಜನರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಜಾಮೀನು ಲಭ್ಯವಾಗದೆ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ತನಿಖೆಯನ್ನು ಪೂರ್ಣಗೊಳಿಸಿದೆ.</p>.<p>ಪ್ರಕರಣದಲ್ಲಿ ತುಪ್ಪ ಪೂರೈಕೆದಾರರು, ಟಿಟಿಡಿಯ ನೌಕರರು ಹಾಗೂ ಇತರರನ್ನು ಆರೋಪಿಗಳು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. </p>.<p class="bodytext">‘ನೆಲ್ಲೂರಿನ ಎಸಿಬಿ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್ಶೀಟ್ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿದೆ.</p>.<p class="bodytext">ಆರೋಪಿಗಳು ಹಸುವಿನ ಶುದ್ಧ ತುಪ್ಪದ ಬದಲಿಗೆ ಕೋಲ್ಕತ್ತದ ಬ್ಯೂಜ್ ಬಡ್ಜ್ ಕಂಪನಿಯಿಂದ ಪಡೆದ ಪಾಮ್ ಆಯಿಲ್, ಪಾಮ್ ಕರ್ನಲ್ ಎಣ್ಣೆ ಮತ್ತು ಪಾಮೊಲಿನ್ನಂತಹ ಕಲಬೆರಕೆ ವಸ್ತುಗಳನ್ನು ಬಳಸಿದ್ದಾರೆ. ಈ ವಸ್ತುಗಳನ್ನು ಅಲ್ಪ ಪ್ರಮಾಣದ ಶುದ್ಧ ತುಪ್ಪ, ಬೀಟಾ–ಕೆರೋಟಿನ್, ಅಸಿಟಿಕ್ ಆ್ಯಸಿಡ್ ಎಸ್ಟರ್ ಮತ್ತು ಸಿಂಥೆಟಿಕ್ ತುಪ್ಪದ ಸುವಾಸನೆಯಂತಹ ರಾಸಾಯನಿಕಗಳೊಂದಿಗೆ ಮಿಶ್ರಣ ಮಾಡಲಾಗುತ್ತಿತ್ತು ಎಂದು ತನಿಖೆಯಲ್ಲಿ ಗೊತ್ತಾಗಿದೆ. </p>.<p class="bodytext">ಉತ್ತರಾಖಂಡದ ಭೋಲೆ ಬಾಬಾ ಸಾವಯವ ಡೇರಿ ನಿರ್ದೇಶಕರಾದ ಪೋಮಿಲ್ ಜೈನ್ ಮತ್ತು ವಿಪಿನ್ ಜೈನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳನ್ನಾಗಿಸಲಾಗಿದೆ. ದೋಷಾರೋಪ ಪಟ್ಟಿಯಲ್ಲಿ 36 ಆರೋಪಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಅಷ್ಟೂ ಜನರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಜಾಮೀನು ಲಭ್ಯವಾಗದೆ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>