<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಶಲ್ಯದ ಹೆಸರಿನಲ್ಲಿ ಪಾಲಿಸ್ಟರ್ ಶಲ್ಯಗಳನ್ನು ಪೂರೈಕೆ ಮಾಡಿರುವ ₹54 ಕೋಟಿಯ ಹಗರಣ ಬೆಳಕಿಗೆ ಬಂದಿದೆ.</p><p>2015ರಿಂದ 2025ರವರೆಗೆ ಈ ಹಗರಣ ನಡೆದಿದ್ದು, ದೇವಸ್ಥಾನದ ಆಡಳಿತವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಟ್ರಸ್ಟ್ ಈ ಹಗರಣದಿಂದ ತಲ್ಲಣಗೊಂಡಿದೆ.</p><p>ಗುತ್ತಿಗೆದಾರರೊಬ್ಬರು ಟೆಂಡರ್ ದಾಖಲೆಗಳಲ್ಲಿ ಶುದ್ಧ ಮಲ್ಬೆರಿ ರೇಷ್ಮೆ ಉತ್ಪನ್ನಗಳೆಂದು ಉಲ್ಲೇಖಿಸಿ ಬಿಲ್ ಪಡೆದಿದ್ದು, ಪಾಲಿಸ್ಟರ್ ಶಲ್ಯಗಳನ್ನು ನಿರಂತರವಾಗಿ ಪೂರೈಸಿದ್ದಾರೆ ಎಂದು ಆಂತರಿಕ ಜಾಗೃತ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.</p><p>ಶಲ್ಯಗಳ ಕುರಿತಂತೆ ಟಿಟಿಡಿ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅನುಮಾನ ವ್ಯಕ್ತಪಡಿಸಿದ ನಂತರ ನಡೆದ ತನಿಖೆಯಲ್ಲಿ ಸತ್ಯ ಹೊರಬಿದ್ದಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಪ್ರಮುಖ ದಾನಿಗಳಿಗೆ ನೀಡಲಾಗುವ ಮತ್ತು ವೇದಾಶಿರ್ವಾಚನದಂತಹ ದೇವಾಲಯದ ಆಚರಣೆಗಳಲ್ಲಿ ಬಳಸಲಾಗುವ ಶಲ್ಯಗಳು ಕಡ್ಡಾಯವಾಗಿ ಶುದ್ಧ ಮಲ್ಬೆರಿ ರೇಷ್ಮೆಯಿಂದ ತಯಾರಿಸಿರಬೇಕೆಂಬ ನಿಯಮವಿದ್ದರೂ ಗುತ್ತಿಗೆದಾರ ಅಗ್ಗದ ಪಾಲಿಸ್ಟರ್ ಉತ್ಪನ್ನಗಳನ್ನು ಪೂರೈಸಿದ್ದಾರೆ.</p><p>ಹತ್ತು ವರ್ಷಗಳ ಕಾಲ ಅಕ್ರಮ ನಡೆದಿವೆ ಎಂದು ಅಂದಾಜಿಸಲಾಗಿದೆ. ಇದರ ಪರಿಣಾಮವಾಗಿ ದೇವಾಲಯದ ಟ್ರಸ್ಟ್ಗೆ ₹54 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p>'ಸುಮಾರು ₹350 ಬೆಲೆಯ ಶಲ್ಯಕ್ಕೆ ₹1,300ರಂತೆ ಬಿಲ್ ಮಾಡಲಾಗುತ್ತಿತ್ತು. ಒಟ್ಟು ₹50 ಕೋಟಿಗೂ ಹೆಚ್ಚು ಮೌಲ್ಯದ ಹಗರಣ ನಡೆದಿದ್ದು, ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ತನಿಖೆಗೆ ಕೇಳಿದ್ದೇವೆ’ಎಂದು ಬಿ.ಆರ್. ನಾಯ್ಡು ಹೇಳಿದ್ದಾರೆ.</p><p>ಶಲ್ಯಗಳ ಮಾದರಿಗಳನ್ನು ಕೇಂದ್ರ ರೇಷ್ಮೆ ಮಂಡಳಿ(ಸಿಎಸ್ಬಿ) ಅಡಿಯಲ್ಲಿ ಬರುವ ಪ್ರಯೋಗಾಲಯ ಸೇರಿದಂತೆ ಎರಡು ಪ್ರಯೋಗಾಲಯಗಳಿಗೆ ವೈಜ್ಞಾನಿಕ ವಿಶ್ಲೇಷಣೆಗಾಗಿ ಕಳುಹಿಸಲಾಗಿತ್ತು. ಇದು ಪಾಲಿಸ್ಟರ್ ಶಲ್ಯ ಎಂದು ಎರಡೂ ಪರೀಕ್ಷೆಗಳು ದೃಢಪಡಿಸಿವೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಶಲ್ಯದ ಹೆಸರಿನಲ್ಲಿ ಪಾಲಿಸ್ಟರ್ ಶಲ್ಯಗಳನ್ನು ಪೂರೈಕೆ ಮಾಡಿರುವ ₹54 ಕೋಟಿಯ ಹಗರಣ ಬೆಳಕಿಗೆ ಬಂದಿದೆ.</p><p>2015ರಿಂದ 2025ರವರೆಗೆ ಈ ಹಗರಣ ನಡೆದಿದ್ದು, ದೇವಸ್ಥಾನದ ಆಡಳಿತವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಟ್ರಸ್ಟ್ ಈ ಹಗರಣದಿಂದ ತಲ್ಲಣಗೊಂಡಿದೆ.</p><p>ಗುತ್ತಿಗೆದಾರರೊಬ್ಬರು ಟೆಂಡರ್ ದಾಖಲೆಗಳಲ್ಲಿ ಶುದ್ಧ ಮಲ್ಬೆರಿ ರೇಷ್ಮೆ ಉತ್ಪನ್ನಗಳೆಂದು ಉಲ್ಲೇಖಿಸಿ ಬಿಲ್ ಪಡೆದಿದ್ದು, ಪಾಲಿಸ್ಟರ್ ಶಲ್ಯಗಳನ್ನು ನಿರಂತರವಾಗಿ ಪೂರೈಸಿದ್ದಾರೆ ಎಂದು ಆಂತರಿಕ ಜಾಗೃತ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.</p><p>ಶಲ್ಯಗಳ ಕುರಿತಂತೆ ಟಿಟಿಡಿ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅನುಮಾನ ವ್ಯಕ್ತಪಡಿಸಿದ ನಂತರ ನಡೆದ ತನಿಖೆಯಲ್ಲಿ ಸತ್ಯ ಹೊರಬಿದ್ದಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಪ್ರಮುಖ ದಾನಿಗಳಿಗೆ ನೀಡಲಾಗುವ ಮತ್ತು ವೇದಾಶಿರ್ವಾಚನದಂತಹ ದೇವಾಲಯದ ಆಚರಣೆಗಳಲ್ಲಿ ಬಳಸಲಾಗುವ ಶಲ್ಯಗಳು ಕಡ್ಡಾಯವಾಗಿ ಶುದ್ಧ ಮಲ್ಬೆರಿ ರೇಷ್ಮೆಯಿಂದ ತಯಾರಿಸಿರಬೇಕೆಂಬ ನಿಯಮವಿದ್ದರೂ ಗುತ್ತಿಗೆದಾರ ಅಗ್ಗದ ಪಾಲಿಸ್ಟರ್ ಉತ್ಪನ್ನಗಳನ್ನು ಪೂರೈಸಿದ್ದಾರೆ.</p><p>ಹತ್ತು ವರ್ಷಗಳ ಕಾಲ ಅಕ್ರಮ ನಡೆದಿವೆ ಎಂದು ಅಂದಾಜಿಸಲಾಗಿದೆ. ಇದರ ಪರಿಣಾಮವಾಗಿ ದೇವಾಲಯದ ಟ್ರಸ್ಟ್ಗೆ ₹54 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p>'ಸುಮಾರು ₹350 ಬೆಲೆಯ ಶಲ್ಯಕ್ಕೆ ₹1,300ರಂತೆ ಬಿಲ್ ಮಾಡಲಾಗುತ್ತಿತ್ತು. ಒಟ್ಟು ₹50 ಕೋಟಿಗೂ ಹೆಚ್ಚು ಮೌಲ್ಯದ ಹಗರಣ ನಡೆದಿದ್ದು, ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ತನಿಖೆಗೆ ಕೇಳಿದ್ದೇವೆ’ಎಂದು ಬಿ.ಆರ್. ನಾಯ್ಡು ಹೇಳಿದ್ದಾರೆ.</p><p>ಶಲ್ಯಗಳ ಮಾದರಿಗಳನ್ನು ಕೇಂದ್ರ ರೇಷ್ಮೆ ಮಂಡಳಿ(ಸಿಎಸ್ಬಿ) ಅಡಿಯಲ್ಲಿ ಬರುವ ಪ್ರಯೋಗಾಲಯ ಸೇರಿದಂತೆ ಎರಡು ಪ್ರಯೋಗಾಲಯಗಳಿಗೆ ವೈಜ್ಞಾನಿಕ ವಿಶ್ಲೇಷಣೆಗಾಗಿ ಕಳುಹಿಸಲಾಗಿತ್ತು. ಇದು ಪಾಲಿಸ್ಟರ್ ಶಲ್ಯ ಎಂದು ಎರಡೂ ಪರೀಕ್ಷೆಗಳು ದೃಢಪಡಿಸಿವೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>