<p><strong>ತಿರುಪತಿ:</strong> ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ.</p><p>ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ (ಡಿ.30, 31, ಹಾಗೂ ಜ1) ಆನ್ಲೈನ್ ಟಿಕೆಟ್ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಜ.8ರವರೆಗೆ ವೈಕುಂಠ ದ್ವಾರ ತೆರೆದಿರಲಿದೆ.</p><p>ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟಿಟಿಡಿ, ‘ಮೂರು ದಿನಗಳ ಕಾಲ ಮಾನ್ಯ ಆನ್ಲೈನ್ ಟಿಕೆಟ್ಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಆನ್ಲೈನ್ ಟಿಕೆಟ್ಗಳಿಲ್ಲದ ಭಕ್ತರಿಗೆ ಈ ದಿನಗಳಲ್ಲಿ ದರ್ಶನಕ್ಕೆ ಅವಕಾಶವಿರುವುದಿಲ್ಲ’ ಎಂದು ತಿಳಿಸಿದೆ.</p>.ವೈಕುಂಠ ಏಕಾದಶಿ: ಹೀಗಿರಲಿ ಪೂಜಾ ವಿಧಾನ.ಇಂದು ವೈಕುಂಠ ಏಕಾದಶಿ: ದಾರಿ ಯಾವುದಯ್ಯಾ ವೈಕುಂಠಕೆ....<p><strong>ಸಿಎಂ ರೇವಂತ ರೆಡ್ಡಿ ಭೇಟಿ</strong></p><p>ವೈಕುಂಠ ಏಕಾದಶಿ ಹಿನ್ನೆಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಮಂಗಳವಾರ ಮುಂಜಾನೆ ದೇಗುಲಕ್ಕೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದರು.</p><p>ದರ್ಶನದ ನಂತರ, ಪುರೋಹಿತರು ರಂಗನಾಯಕಕುಲ ಮಂಟಪದಲ್ಲಿ ಅವರಿಗೆ ರೇಷ್ಮೆ ವಸ್ತ್ರಗಳನ್ನು ನೀಡಿ ಸನ್ಮಾನಿಸಿ, ಪ್ರಸಾದ (ಪವಿತ್ರ ಆಹಾರ) ನೀಡಿದರು.</p><p>ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು, ಆಂಧ್ರಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವೆ ಎಸ್. ಸವಿತಾ, ಗಣಿ ಸಚಿವ ಕೆ. ರವೀಂದ್ರ ಮತ್ತು ನಟ ಚಿರಂಜೀವಿ ಸೇರಿದಂತೆ ಹಲವರು ದರ್ಶನ ಪಡೆದಿದ್ದಾರೆ.</p><p>ವೈಕುಂಠ ದ್ವಾರ (ಬಾಗಿಲು) ಇಂದು ತೆರೆಯಲಾಗಿದ್ದು, 10 ದಿನಗಳ ನಂತರ (ಜನವರಿ 8) ಮುಚ್ಚಲಾಗುವುದು. ಈ ಶುಭ ಅವಧಿಯಲ್ಲಿ ಹೊರತುಪಡಿಸಿ, ವರ್ಷಪೂರ್ತಿ ವೈಕುಂಠ ದ್ವಾರವನ್ನು ತೆರೆಯಲಾಗುವುದಿಲ್ಲ.</p>. ವೈಕುಂಠ ಏಕಾದಶಿ: ಶರವಣ ಟ್ರಸ್ಟ್ನಿಂದ ಒಂದು ಲಕ್ಷ ಲಡ್ಡು ವಿತರಣೆ.ವೈಕುಂಠ ಏಕಾದಶಿ: ಈ 3 ರಾಶಿಯವರಿಗೆ ಭಾರಿ ಅದೃಷ್ಟ.ವೈಕುಂಠ ಏಕಾದಶಿ: ಈ ವಿಷಯಗಳನ್ನು ಪಾಲಿಸಿದರೆ ಸಕಲ ಐಶ್ವರ್ಯ ನಿಮ್ಮದಾಗುತ್ತೆ.ವೈಕುಂಠ ಏಕಾದಶಿ: ಈ ದಿನ ಉಪವಾಸ ಮಾಡಲು ಕಾರಣ, ಲಾಭಗಳೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ:</strong> ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ.</p><p>ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ (ಡಿ.30, 31, ಹಾಗೂ ಜ1) ಆನ್ಲೈನ್ ಟಿಕೆಟ್ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಜ.8ರವರೆಗೆ ವೈಕುಂಠ ದ್ವಾರ ತೆರೆದಿರಲಿದೆ.</p><p>ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟಿಟಿಡಿ, ‘ಮೂರು ದಿನಗಳ ಕಾಲ ಮಾನ್ಯ ಆನ್ಲೈನ್ ಟಿಕೆಟ್ಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಆನ್ಲೈನ್ ಟಿಕೆಟ್ಗಳಿಲ್ಲದ ಭಕ್ತರಿಗೆ ಈ ದಿನಗಳಲ್ಲಿ ದರ್ಶನಕ್ಕೆ ಅವಕಾಶವಿರುವುದಿಲ್ಲ’ ಎಂದು ತಿಳಿಸಿದೆ.</p>.ವೈಕುಂಠ ಏಕಾದಶಿ: ಹೀಗಿರಲಿ ಪೂಜಾ ವಿಧಾನ.ಇಂದು ವೈಕುಂಠ ಏಕಾದಶಿ: ದಾರಿ ಯಾವುದಯ್ಯಾ ವೈಕುಂಠಕೆ....<p><strong>ಸಿಎಂ ರೇವಂತ ರೆಡ್ಡಿ ಭೇಟಿ</strong></p><p>ವೈಕುಂಠ ಏಕಾದಶಿ ಹಿನ್ನೆಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಮಂಗಳವಾರ ಮುಂಜಾನೆ ದೇಗುಲಕ್ಕೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದರು.</p><p>ದರ್ಶನದ ನಂತರ, ಪುರೋಹಿತರು ರಂಗನಾಯಕಕುಲ ಮಂಟಪದಲ್ಲಿ ಅವರಿಗೆ ರೇಷ್ಮೆ ವಸ್ತ್ರಗಳನ್ನು ನೀಡಿ ಸನ್ಮಾನಿಸಿ, ಪ್ರಸಾದ (ಪವಿತ್ರ ಆಹಾರ) ನೀಡಿದರು.</p><p>ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು, ಆಂಧ್ರಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವೆ ಎಸ್. ಸವಿತಾ, ಗಣಿ ಸಚಿವ ಕೆ. ರವೀಂದ್ರ ಮತ್ತು ನಟ ಚಿರಂಜೀವಿ ಸೇರಿದಂತೆ ಹಲವರು ದರ್ಶನ ಪಡೆದಿದ್ದಾರೆ.</p><p>ವೈಕುಂಠ ದ್ವಾರ (ಬಾಗಿಲು) ಇಂದು ತೆರೆಯಲಾಗಿದ್ದು, 10 ದಿನಗಳ ನಂತರ (ಜನವರಿ 8) ಮುಚ್ಚಲಾಗುವುದು. ಈ ಶುಭ ಅವಧಿಯಲ್ಲಿ ಹೊರತುಪಡಿಸಿ, ವರ್ಷಪೂರ್ತಿ ವೈಕುಂಠ ದ್ವಾರವನ್ನು ತೆರೆಯಲಾಗುವುದಿಲ್ಲ.</p>. ವೈಕುಂಠ ಏಕಾದಶಿ: ಶರವಣ ಟ್ರಸ್ಟ್ನಿಂದ ಒಂದು ಲಕ್ಷ ಲಡ್ಡು ವಿತರಣೆ.ವೈಕುಂಠ ಏಕಾದಶಿ: ಈ 3 ರಾಶಿಯವರಿಗೆ ಭಾರಿ ಅದೃಷ್ಟ.ವೈಕುಂಠ ಏಕಾದಶಿ: ಈ ವಿಷಯಗಳನ್ನು ಪಾಲಿಸಿದರೆ ಸಕಲ ಐಶ್ವರ್ಯ ನಿಮ್ಮದಾಗುತ್ತೆ.ವೈಕುಂಠ ಏಕಾದಶಿ: ಈ ದಿನ ಉಪವಾಸ ಮಾಡಲು ಕಾರಣ, ಲಾಭಗಳೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>