<p><strong>ತಿರುಪ್ಪೂರ್:</strong> ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯಂತೆ ದೇಶದಲ್ಲಿ ಭಯೋತ್ಪಾದಕ ದಾಳಿಯ ಸಂಚು ರೂಪಿಸಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಬಾಂಗ್ಲಾದೇಶದ ಆರು ಪ್ರಜೆಗಳನ್ನು ತಮಿಳುನಾಡಿನ ತಿರುಪ್ಪೂರ್ನಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. </p>.<p>‘ದೆಹಲಿ ಪೊಲೀಸರ ತಂಡ ಫೆಬ್ರುವರಿ 21ರಂದು ಆರು ಮಂದಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಶಂಕಿತರು ಒಂದು ರಾತ್ರಿ ನಮ್ಮ ಕಸ್ಟಡಿಯಲ್ಲಿದ್ದರು. ಭಾನುವಾರ ಬೆಳಿಗ್ಗೆ ದೆಹಲಿ ಪೊಲೀಸರು ಎಲ್ಲ ಆರು ಮಂದಿಯನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ’ ಎಂದು ತಿರುಪ್ಪೂರ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಆರು ಮಂದಿ ಬಾಂಗ್ಲಾದೇಶದವರು ಎಂಬುದು ತಿಳಿದುಬಂದಿದೆ. ದೆಹಲಿ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಇಲ್ಲಿಗೆ ಬಂದು ಅವರನ್ನು ಬಂಧಿಸಿರಬಹುದು’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.</p>.<p>‘ವಲಸೆ ಕಾರ್ಮಿಕರ ಮೇಲೆ ನಾವು ನಿಗಾ ಇಡಬೇಕು. ತಿರುಪ್ಪೂರ್ನ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಬರುವ ವಲಸೆ ಕಾರ್ಮಿಕರು ಸರ್ಕಾರದ ಕಾರ್ಮಿಕ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ತಿರುಪ್ಪೂರು ಅತಿ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿದ್ದು, 2.2 ಲಕ್ಷ ಜನರು ಈ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪ್ಪೂರ್:</strong> ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯಂತೆ ದೇಶದಲ್ಲಿ ಭಯೋತ್ಪಾದಕ ದಾಳಿಯ ಸಂಚು ರೂಪಿಸಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಬಾಂಗ್ಲಾದೇಶದ ಆರು ಪ್ರಜೆಗಳನ್ನು ತಮಿಳುನಾಡಿನ ತಿರುಪ್ಪೂರ್ನಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. </p>.<p>‘ದೆಹಲಿ ಪೊಲೀಸರ ತಂಡ ಫೆಬ್ರುವರಿ 21ರಂದು ಆರು ಮಂದಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಶಂಕಿತರು ಒಂದು ರಾತ್ರಿ ನಮ್ಮ ಕಸ್ಟಡಿಯಲ್ಲಿದ್ದರು. ಭಾನುವಾರ ಬೆಳಿಗ್ಗೆ ದೆಹಲಿ ಪೊಲೀಸರು ಎಲ್ಲ ಆರು ಮಂದಿಯನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ’ ಎಂದು ತಿರುಪ್ಪೂರ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಆರು ಮಂದಿ ಬಾಂಗ್ಲಾದೇಶದವರು ಎಂಬುದು ತಿಳಿದುಬಂದಿದೆ. ದೆಹಲಿ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಇಲ್ಲಿಗೆ ಬಂದು ಅವರನ್ನು ಬಂಧಿಸಿರಬಹುದು’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.</p>.<p>‘ವಲಸೆ ಕಾರ್ಮಿಕರ ಮೇಲೆ ನಾವು ನಿಗಾ ಇಡಬೇಕು. ತಿರುಪ್ಪೂರ್ನ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಬರುವ ವಲಸೆ ಕಾರ್ಮಿಕರು ಸರ್ಕಾರದ ಕಾರ್ಮಿಕ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ತಿರುಪ್ಪೂರು ಅತಿ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿದ್ದು, 2.2 ಲಕ್ಷ ಜನರು ಈ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>