<p><strong>ಮುಂಬೈ</strong>: ಹಣಕಾಸು ಕೊರತೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಬೋಧಕ, ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುಕ್ಕೆ ಸಂಬಂಧಿಸಿದ ಸುತ್ತೋಲೆಯನ್ನು ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್ಎಸ್) ಸಂಸ್ಥೆಯು ಭಾನುವಾರ ತಡರಾತ್ರಿ ಹಿಂಪಡೆದಿದೆ.</p>.<p>ಒಟ್ಟು 115 ಸಿಬ್ಬಂದಿಯ ನೇಮಕಾತಿ ಗುತ್ತಿಗೆ ಒಪ್ಪಂದವನ್ನು ನವೀಕರಿಸಲಾಗದು ಎಂದು ಸಂಸ್ಥೆಯು ಜೂನ್ 28ರಂದು ನೋಟಿಸ್ ನೀಡಿತ್ತು. ಸಂಸ್ಥೆಯ ಈ ಕ್ರಮವನ್ನು ಬೋಧಕ ಮತ್ತು ವಿದ್ಯಾರ್ಥಿ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಇದು ರಾಜಕೀಯ ವಿವಾದವಾಗಿಯೂ ಮಾರ್ಪಟ್ಟಿತ್ತು.</p>.<p>ವರದಿಯ ಪ್ರಕಾರ, ಸಂಸ್ಥೆಯ ಮುಂಬೈ, ತುಳಜಾಪುರ, ಗುವಾಹಟಿ ಮತ್ತು ಹೈದರಾಬಾದ್ ಕ್ಯಾಂಪಸ್<br>ಗಳಲ್ಲಿನ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿ ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದರು.</p>.<p>‘ಟಾಟಾ ಎಜುಕೇಷನ್ ಟ್ರಸ್ಟ್ (ಟಿಇಟಿ) ಆರ್ಥಿಕ ನೆರವಿನ ಕಾರ್ಯಕ್ರಮದಡಿ ವಿವಿಧ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಗುತ್ತಿಗೆ ಆಧಾರದಲ್ಲಿ ಈ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು. ಇವರ ನೇಮಕಾತಿ ಅವಧಿಯು ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ’ ಎಂದು ನೋಟಿಸ್ನಲ್ಲಿ ತಿಳಿಸಲಾಗಿತ್ತು. </p>.<p>‘ನಂತರದ ಬೆಳವಣಿಗೆಯಲ್ಲಿ ಟಾಟಾ ಎಜುಕೇಷನ್ ಟ್ರಸ್ಟ್ ಜೊತೆಗೆ ನಡೆದ ಚರ್ಚೆ ಫಲಪ್ರದವಾಗಿದೆ. ಸಮಸ್ಯೆಯನ್ನು ಬಗೆಹರಿಸುವ ಕ್ರಮವಾಗಿ ಆರ್ಥಿಕ ನೆರವು ನೀಡುವ ಭರವಸೆಯನ್ನು ಟ್ರಸ್ಟ್ ನೀಡಿದೆ. ಟಿಇಟಿ ಈ ಸಿಬ್ಬಂದಿಯ ವೇತನಕ್ಕಾಗಿ ಹಣ ಬಿಡುಗಡೆಗೆ ಬದ್ಧವಾಗಿದೆ’ ಎಂದು ತಿಳಿಸಿತು.</p>.<p>‘ಟಿಇಟಿ ಸಿಬ್ಬಂದಿಯನ್ನು ಉದ್ದೇಶಿಸಿ ಜೂನ್ 28ರಂದು ಬರೆದಿದ್ದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಈ ಎಲ್ಲ ಸಿಬ್ಬಂದಿಗೆ ಸೇವೆಯಲ್ಲಿ ಮುಂದುವರಿಯಲು ಕೋರಲಾಗಿದೆ. ಅವರ ವೇತನವನ್ನು ಸಂಸ್ಥೆಯಿಂದ ಅನುದಾನ ಬಿಡುಗಡೆಯಾದ ಕೂಡಲೇ ಬಿಡುಗಡೆ ಮಾಡಲಾಗುತ್ತದೆ’ ಟಿಐಎಸ್ಎಸ್ ಸಂಸ್ಥೆ ರಾತ್ರಿ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. </p>.<p>ಗುತ್ತಿಗೆಯ ಅವಧಿಯನ್ನು ನವೀಕರಿಸದ ಸಂಸ್ಥೆಯ ಮೊದಲಿನ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಬ್ಬಂದಿಯೊಬ್ಬರು, ವಿವಿಧ ಕೋರ್ಸ್ಗಳಿಗೆ ಕಳೆದ 10–15 ವರ್ಷಗಳಿಂದ ಅನುದಾನ ಬಿಡುಗಡೆ ಆಗುತ್ತಿತ್ತು. ಅದನ್ನು ನವೀಕರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು. </p>.<p>‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ಟಿಐಎಸ್ಎಸ್ನ ನೂರಾರು ಬೋಧಕ, ಬೋಧಕೇತರ ಸಿಬ್ಬಂದಿಯ ವಜಾ ಕಾರ್ಯವನ್ನು ಖಂಡಿಸುತ್ತೇವೆ’ ಎಂದು ಪ್ರಗತಿಪರ ವಿದ್ಯಾರ್ಥಿ ಸಂಘಟನೆ ಹೇಳಿದೆ. ಶಿಕ್ಷಕರು, ಸಿಬ್ಬಂದಿ ಜತೆಗೆ ಸಂಘಟನೆ ನಿಲ್ಲಲಿದೆ ಎಂದು ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.</p>.<p>ಟಿಐಎಸ್ಎಸ್ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಗೆ ಕೇವಲ 48 ಗಂಟೆಗೂ ಮುನ್ನ ತಲುಪಿದ್ದ ನೋಟಿಸ್ ಆಘಾತ ಉಂಟು ಮಾಡಿತ್ತು. ಇದು ಕೇಂದ್ರ ಸರ್ಕಾರ ಮತ್ತು ಟಿಐಎಸ್ಎಸ್ ಆಡಳಿತದ ನಾಯಕತ್ವದ ವೈಫಲ್ಯವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ದೂರಿದೆ.</p>.<p>ಸಿಬ್ಬಂದಿಯನ್ನು ವಜಾಗೊಳಿಸುವ ನಡೆಯನ್ನು ಸಿಪಿಐ, ಆರ್ಜೆಡಿ ಪಕ್ಷಗಳು ಖಂಡಿಸಿದ್ದವು. ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಕಿತ್ತುಹಾಕುವ ‘ಅಮೃತ ಕಾಲ’ ಇದಾಗಿದೆ ಎಂದು ಸಿಪಿಐ ಖಂಡಿಸಿದ್ದರೆ, ‘ಇದರಿಂದ ಆಘತವಾಗಿದೆ ಆದರೆ ಆಶ್ಚರ್ಯವಾಗಿಲ್ಲ’ ಎಂದು ಆರ್ಜೆಡಿ ಪ್ರತಿಕ್ರಿಯಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಣಕಾಸು ಕೊರತೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಬೋಧಕ, ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುಕ್ಕೆ ಸಂಬಂಧಿಸಿದ ಸುತ್ತೋಲೆಯನ್ನು ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್ಎಸ್) ಸಂಸ್ಥೆಯು ಭಾನುವಾರ ತಡರಾತ್ರಿ ಹಿಂಪಡೆದಿದೆ.</p>.<p>ಒಟ್ಟು 115 ಸಿಬ್ಬಂದಿಯ ನೇಮಕಾತಿ ಗುತ್ತಿಗೆ ಒಪ್ಪಂದವನ್ನು ನವೀಕರಿಸಲಾಗದು ಎಂದು ಸಂಸ್ಥೆಯು ಜೂನ್ 28ರಂದು ನೋಟಿಸ್ ನೀಡಿತ್ತು. ಸಂಸ್ಥೆಯ ಈ ಕ್ರಮವನ್ನು ಬೋಧಕ ಮತ್ತು ವಿದ್ಯಾರ್ಥಿ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಇದು ರಾಜಕೀಯ ವಿವಾದವಾಗಿಯೂ ಮಾರ್ಪಟ್ಟಿತ್ತು.</p>.<p>ವರದಿಯ ಪ್ರಕಾರ, ಸಂಸ್ಥೆಯ ಮುಂಬೈ, ತುಳಜಾಪುರ, ಗುವಾಹಟಿ ಮತ್ತು ಹೈದರಾಬಾದ್ ಕ್ಯಾಂಪಸ್<br>ಗಳಲ್ಲಿನ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿ ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದರು.</p>.<p>‘ಟಾಟಾ ಎಜುಕೇಷನ್ ಟ್ರಸ್ಟ್ (ಟಿಇಟಿ) ಆರ್ಥಿಕ ನೆರವಿನ ಕಾರ್ಯಕ್ರಮದಡಿ ವಿವಿಧ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಗುತ್ತಿಗೆ ಆಧಾರದಲ್ಲಿ ಈ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು. ಇವರ ನೇಮಕಾತಿ ಅವಧಿಯು ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ’ ಎಂದು ನೋಟಿಸ್ನಲ್ಲಿ ತಿಳಿಸಲಾಗಿತ್ತು. </p>.<p>‘ನಂತರದ ಬೆಳವಣಿಗೆಯಲ್ಲಿ ಟಾಟಾ ಎಜುಕೇಷನ್ ಟ್ರಸ್ಟ್ ಜೊತೆಗೆ ನಡೆದ ಚರ್ಚೆ ಫಲಪ್ರದವಾಗಿದೆ. ಸಮಸ್ಯೆಯನ್ನು ಬಗೆಹರಿಸುವ ಕ್ರಮವಾಗಿ ಆರ್ಥಿಕ ನೆರವು ನೀಡುವ ಭರವಸೆಯನ್ನು ಟ್ರಸ್ಟ್ ನೀಡಿದೆ. ಟಿಇಟಿ ಈ ಸಿಬ್ಬಂದಿಯ ವೇತನಕ್ಕಾಗಿ ಹಣ ಬಿಡುಗಡೆಗೆ ಬದ್ಧವಾಗಿದೆ’ ಎಂದು ತಿಳಿಸಿತು.</p>.<p>‘ಟಿಇಟಿ ಸಿಬ್ಬಂದಿಯನ್ನು ಉದ್ದೇಶಿಸಿ ಜೂನ್ 28ರಂದು ಬರೆದಿದ್ದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಈ ಎಲ್ಲ ಸಿಬ್ಬಂದಿಗೆ ಸೇವೆಯಲ್ಲಿ ಮುಂದುವರಿಯಲು ಕೋರಲಾಗಿದೆ. ಅವರ ವೇತನವನ್ನು ಸಂಸ್ಥೆಯಿಂದ ಅನುದಾನ ಬಿಡುಗಡೆಯಾದ ಕೂಡಲೇ ಬಿಡುಗಡೆ ಮಾಡಲಾಗುತ್ತದೆ’ ಟಿಐಎಸ್ಎಸ್ ಸಂಸ್ಥೆ ರಾತ್ರಿ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. </p>.<p>ಗುತ್ತಿಗೆಯ ಅವಧಿಯನ್ನು ನವೀಕರಿಸದ ಸಂಸ್ಥೆಯ ಮೊದಲಿನ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಬ್ಬಂದಿಯೊಬ್ಬರು, ವಿವಿಧ ಕೋರ್ಸ್ಗಳಿಗೆ ಕಳೆದ 10–15 ವರ್ಷಗಳಿಂದ ಅನುದಾನ ಬಿಡುಗಡೆ ಆಗುತ್ತಿತ್ತು. ಅದನ್ನು ನವೀಕರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು. </p>.<p>‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ಟಿಐಎಸ್ಎಸ್ನ ನೂರಾರು ಬೋಧಕ, ಬೋಧಕೇತರ ಸಿಬ್ಬಂದಿಯ ವಜಾ ಕಾರ್ಯವನ್ನು ಖಂಡಿಸುತ್ತೇವೆ’ ಎಂದು ಪ್ರಗತಿಪರ ವಿದ್ಯಾರ್ಥಿ ಸಂಘಟನೆ ಹೇಳಿದೆ. ಶಿಕ್ಷಕರು, ಸಿಬ್ಬಂದಿ ಜತೆಗೆ ಸಂಘಟನೆ ನಿಲ್ಲಲಿದೆ ಎಂದು ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.</p>.<p>ಟಿಐಎಸ್ಎಸ್ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಗೆ ಕೇವಲ 48 ಗಂಟೆಗೂ ಮುನ್ನ ತಲುಪಿದ್ದ ನೋಟಿಸ್ ಆಘಾತ ಉಂಟು ಮಾಡಿತ್ತು. ಇದು ಕೇಂದ್ರ ಸರ್ಕಾರ ಮತ್ತು ಟಿಐಎಸ್ಎಸ್ ಆಡಳಿತದ ನಾಯಕತ್ವದ ವೈಫಲ್ಯವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ದೂರಿದೆ.</p>.<p>ಸಿಬ್ಬಂದಿಯನ್ನು ವಜಾಗೊಳಿಸುವ ನಡೆಯನ್ನು ಸಿಪಿಐ, ಆರ್ಜೆಡಿ ಪಕ್ಷಗಳು ಖಂಡಿಸಿದ್ದವು. ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಕಿತ್ತುಹಾಕುವ ‘ಅಮೃತ ಕಾಲ’ ಇದಾಗಿದೆ ಎಂದು ಸಿಪಿಐ ಖಂಡಿಸಿದ್ದರೆ, ‘ಇದರಿಂದ ಆಘತವಾಗಿದೆ ಆದರೆ ಆಶ್ಚರ್ಯವಾಗಿಲ್ಲ’ ಎಂದು ಆರ್ಜೆಡಿ ಪ್ರತಿಕ್ರಿಯಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>