<p><strong>ನವದೆಹಲಿ</strong>: ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್ಐಆರ್) ಕುರಿತು ತಕ್ಷಣವೇ ಚರ್ಚೆ ಕೈಗೆತ್ತಿಕೊಳ್ಳಬೇಕು ಎಂಬ ತನ್ನ ಬೇಡಿಕೆಯನ್ನು ಟಿಎಂಸಿ ಶುಕ್ರವಾರ ಮತ್ತೊಮ್ಮೆ ಸರ್ಕಾರದ ಮುಂದಿಟ್ಟಿದೆ.</p>.<p>ಆಪರೇಷನ್ ಸಿಂಧೂರ ಕುರಿತು ಚರ್ಚೆ ಆರಂಭಿಸಲು ಲೋಕಸಭೆ ಸಜ್ಜಾಗಿರುವ ಹೊತ್ತಿನಲ್ಲಿಯೇ, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಚರ್ಚೆ ನಡೆಯಬೇಕು ಎಂಬ ತನ್ನ ಪಟ್ಟನ್ನು ಟಿಎಂಸಿ, ಮತ್ತಷ್ಟು ಬಿಗಿಗೊಳಿಸಿದೆ. ಈ ಮೂಲಕ, ಮುಂದಿನ ವಾರ ಈ ಬೇಡಿಕೆ ಮುಂದಿಟ್ಟುಕೊಂಡು ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸುವ ಸೂಚನೆಯನ್ನು ಕೂಡ ಟಿಎಂಸಿ ನೀಡಿದೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪಶ್ಚಿಮ ಬಂಗಾಳದಲ್ಲಿಯೂ ಕೈಗೆತ್ತಿಕೊಳ್ಳಲಾಗುತ್ತದೆ. ಬಿಹಾರದಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆ ಈ ನಿಟ್ಟಿನಲ್ಲಿ ಕೈಗೊಂಡಿರುವ ತಾಲೀಮು ಅಷ್ಟೆ ಎಂದು ಟಿಎಂಸಿ ಆರೋಪಿಸಿದೆ.</p>.<p>ಮುಂದಿನ ವರ್ಷ ಏಪ್ರಿಲ್–ಮೇನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷಕ್ಕೆ ತೊಂದರೆ ನೀಡುವ ಉದ್ದೇಶದಿಂದ ಬಿಜೆಪಿಯು ಯಾವ ಮಟ್ಟಕ್ಕೂ ಹೋಗಲಿದೆ ಎಂದೂ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್ಐಆರ್) ಕುರಿತು ತಕ್ಷಣವೇ ಚರ್ಚೆ ಕೈಗೆತ್ತಿಕೊಳ್ಳಬೇಕು ಎಂಬ ತನ್ನ ಬೇಡಿಕೆಯನ್ನು ಟಿಎಂಸಿ ಶುಕ್ರವಾರ ಮತ್ತೊಮ್ಮೆ ಸರ್ಕಾರದ ಮುಂದಿಟ್ಟಿದೆ.</p>.<p>ಆಪರೇಷನ್ ಸಿಂಧೂರ ಕುರಿತು ಚರ್ಚೆ ಆರಂಭಿಸಲು ಲೋಕಸಭೆ ಸಜ್ಜಾಗಿರುವ ಹೊತ್ತಿನಲ್ಲಿಯೇ, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಚರ್ಚೆ ನಡೆಯಬೇಕು ಎಂಬ ತನ್ನ ಪಟ್ಟನ್ನು ಟಿಎಂಸಿ, ಮತ್ತಷ್ಟು ಬಿಗಿಗೊಳಿಸಿದೆ. ಈ ಮೂಲಕ, ಮುಂದಿನ ವಾರ ಈ ಬೇಡಿಕೆ ಮುಂದಿಟ್ಟುಕೊಂಡು ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸುವ ಸೂಚನೆಯನ್ನು ಕೂಡ ಟಿಎಂಸಿ ನೀಡಿದೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪಶ್ಚಿಮ ಬಂಗಾಳದಲ್ಲಿಯೂ ಕೈಗೆತ್ತಿಕೊಳ್ಳಲಾಗುತ್ತದೆ. ಬಿಹಾರದಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆ ಈ ನಿಟ್ಟಿನಲ್ಲಿ ಕೈಗೊಂಡಿರುವ ತಾಲೀಮು ಅಷ್ಟೆ ಎಂದು ಟಿಎಂಸಿ ಆರೋಪಿಸಿದೆ.</p>.<p>ಮುಂದಿನ ವರ್ಷ ಏಪ್ರಿಲ್–ಮೇನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷಕ್ಕೆ ತೊಂದರೆ ನೀಡುವ ಉದ್ದೇಶದಿಂದ ಬಿಜೆಪಿಯು ಯಾವ ಮಟ್ಟಕ್ಕೂ ಹೋಗಲಿದೆ ಎಂದೂ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>