<p><strong>ದುರ್ಗಾಪುರ: ‘</strong>ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶ ಮಾಡಲು ಟಿಎಂಸಿ ಯತ್ನಿಸುತ್ತಿದೆ. ಒಳನುಸುಳುಕೋರರನ್ನು ಪೋಷಿಸಲಾಗುತ್ತಿದೆ. ಇದು ದೇಶದ ಭದ್ರತೆ ಗಂಭೀರ ಬೆದರಿಕೆಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿತಿನ್ ಅವರು ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದರು. ದುರ್ಗಾಪುರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಬೇಕು’ ಎಂದು ಅವರು ಮತದಾರರಿಗೆ ಕರೆ ನೀಡಿದರು.</p>.<p>‘ನಕಲಿ ಮತದಾರರನ್ನು, ಒಳನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಅಳಿಸಲು ಚುನಾವಣಾ ಆಯೋಗ ಶ್ರಮಿಸುತ್ತಿದೆ. ಆದರೆ, ಸುಳ್ಳು ಸುದ್ದಿ ಹಬ್ಬಿಸುವುದರ ಮೂಲಕ ಟಿಎಂಸಿ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಹಳಿತಪ್ಪಿಸಲು ಯತ್ನಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುರ್ಗಾಪುರ: ‘</strong>ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶ ಮಾಡಲು ಟಿಎಂಸಿ ಯತ್ನಿಸುತ್ತಿದೆ. ಒಳನುಸುಳುಕೋರರನ್ನು ಪೋಷಿಸಲಾಗುತ್ತಿದೆ. ಇದು ದೇಶದ ಭದ್ರತೆ ಗಂಭೀರ ಬೆದರಿಕೆಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿತಿನ್ ಅವರು ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದರು. ದುರ್ಗಾಪುರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಬೇಕು’ ಎಂದು ಅವರು ಮತದಾರರಿಗೆ ಕರೆ ನೀಡಿದರು.</p>.<p>‘ನಕಲಿ ಮತದಾರರನ್ನು, ಒಳನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಅಳಿಸಲು ಚುನಾವಣಾ ಆಯೋಗ ಶ್ರಮಿಸುತ್ತಿದೆ. ಆದರೆ, ಸುಳ್ಳು ಸುದ್ದಿ ಹಬ್ಬಿಸುವುದರ ಮೂಲಕ ಟಿಎಂಸಿ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಹಳಿತಪ್ಪಿಸಲು ಯತ್ನಿಸುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>