ಅಭಿಷೇಕ್ ಬ್ಯಾನರ್ಜಿಯವರು ಉದಯಪುರದ ತ್ರಿಪುರೇಶ್ವರಿ ದೇವಸ್ಥಾನವನ್ನು ತಲುಪುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರ ಗುಂಪು ‘ಅಭಿಷೇಕ್ ವಾಪಸ್ ಹೋಗಿ’ ಎಂದು ಘೋಷಣೆ ಕೂಗಿ, ಅವರನ್ನು ತಡೆಯಲು ಪ್ರಯತ್ನಿಸಿದರು. ಸ್ಥಳದಲ್ಲಿದ್ದ ಟಿಎಂಸಿ ಬೆಂಬಲಿಗರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಆಗ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಯಿತು. ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಬಾವುಟದ ಕೋಲುಗಳಿಂದ ಬ್ಯಾನರ್ಜಿ ಅವರ ಕಾರಿಗೆ ಹೊಡೆದಿದ್ದಾರೆ. ಆದರೆ ಕಾರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಮೂಲಗಳು ಹೇಳಿವೆ.