<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಟಿಎಂಸಿ ಮುಖಂಡರೊಬ್ಬರು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ರೆಜಿನಗರ ಪ್ರದೇಶದ ಟಿಎಂಸಿಯ ಪ್ರಭಾವಿ ಮುಖಂಡ ಪಾಟೀತ್ ಪಾಲ್ ಮೃತ ವ್ಯಕ್ತಿ.</p>.<p>ಪಾಲ್ ಜುಲೈ 21ರ ರಾತ್ರಿ ತಮ್ಮ ಮನೆಯಲ್ಲಿ ಇದ್ದಾಗಲೇ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮುರ್ಷಿದಾಬಾದ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಗುಂಡಿನ ದಾಳಿ ಹಿಂದೆ ಬಿಜೆಪಿಯ ಸ್ಥಳೀಯ ಕಾರ್ಯಕರ್ತರಿದ್ದಾರೆ’ ಎಂದು ಮೃತ ಪಾಲ್ ಅವರ ಸಹೋದರ ಪರಿತೋಷ್ ಆರೋಪಿಸಿದ್ದಾರೆ.</p>.<p>ಪಾಟೀತ್ ನಿಧನದ ಬಳಿಕ ಎಫ್ಐಆರ್ ದಾಖಲಾಗಿದೆ. ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿದಿದ್ದಕ್ಕಾಗಿ ಪಾಲ್ಗೆ ಈ ಹಿಂದೆ ಬೆದರಿಕೆ ಹಾಕಿದ್ದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಶೋಧ ನಡೆದಿದೆ.</p>.<p>‘ಆರೋಪಿಗಳ ಆಪ್ತರು ಈಗಲೂ ನಮಗೆ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಪರಿತೋಷ್ ಹೇಳಿದ್ದಾರೆ.</p>.<p>‘ಟಿಎಂಸಿಯ ಒಳಜಗಳದಿಂದ ಈ ಕೊಲೆ ನಡೆದಿದೆ’ ಎಂದು ಕಾಂಗ್ರೆಸ್ನ ಮಾಜಿ ಸಂಸದ ಅಧೀರ್ ಚೌಧರಿ ಹೇಳಿದರೆ, ‘ಟಿಎಂಸಿಯ ಸ್ಥಳೀಯ ನಾಯಕರು ಹಾಗೂ ಬೆಂಬಲಿಗರು ಸಹ ರಾಜ್ಯದಲ್ಲಿ ಸುರಕ್ಷಿತವಾಗಿಲ್ಲ’ ಎಂದು ಸಿಪಿಎಂನ ಸುಜನ್ ಚಕ್ರವರ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಟಿಎಂಸಿ ಮುಖಂಡರೊಬ್ಬರು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ರೆಜಿನಗರ ಪ್ರದೇಶದ ಟಿಎಂಸಿಯ ಪ್ರಭಾವಿ ಮುಖಂಡ ಪಾಟೀತ್ ಪಾಲ್ ಮೃತ ವ್ಯಕ್ತಿ.</p>.<p>ಪಾಲ್ ಜುಲೈ 21ರ ರಾತ್ರಿ ತಮ್ಮ ಮನೆಯಲ್ಲಿ ಇದ್ದಾಗಲೇ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮುರ್ಷಿದಾಬಾದ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಗುಂಡಿನ ದಾಳಿ ಹಿಂದೆ ಬಿಜೆಪಿಯ ಸ್ಥಳೀಯ ಕಾರ್ಯಕರ್ತರಿದ್ದಾರೆ’ ಎಂದು ಮೃತ ಪಾಲ್ ಅವರ ಸಹೋದರ ಪರಿತೋಷ್ ಆರೋಪಿಸಿದ್ದಾರೆ.</p>.<p>ಪಾಟೀತ್ ನಿಧನದ ಬಳಿಕ ಎಫ್ಐಆರ್ ದಾಖಲಾಗಿದೆ. ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿದಿದ್ದಕ್ಕಾಗಿ ಪಾಲ್ಗೆ ಈ ಹಿಂದೆ ಬೆದರಿಕೆ ಹಾಕಿದ್ದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಶೋಧ ನಡೆದಿದೆ.</p>.<p>‘ಆರೋಪಿಗಳ ಆಪ್ತರು ಈಗಲೂ ನಮಗೆ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಪರಿತೋಷ್ ಹೇಳಿದ್ದಾರೆ.</p>.<p>‘ಟಿಎಂಸಿಯ ಒಳಜಗಳದಿಂದ ಈ ಕೊಲೆ ನಡೆದಿದೆ’ ಎಂದು ಕಾಂಗ್ರೆಸ್ನ ಮಾಜಿ ಸಂಸದ ಅಧೀರ್ ಚೌಧರಿ ಹೇಳಿದರೆ, ‘ಟಿಎಂಸಿಯ ಸ್ಥಳೀಯ ನಾಯಕರು ಹಾಗೂ ಬೆಂಬಲಿಗರು ಸಹ ರಾಜ್ಯದಲ್ಲಿ ಸುರಕ್ಷಿತವಾಗಿಲ್ಲ’ ಎಂದು ಸಿಪಿಎಂನ ಸುಜನ್ ಚಕ್ರವರ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>