<p><strong>ಕೋಲ್ಕತ್ತ:</strong> ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು (ಗುರುವಾರ) ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.</p><p>ಬೆಳಿಗ್ಗೆ ಸುಮಾರು 11.10ರ ವೇಳೆಗೆ ಇಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಗೆ ಅವರು ಆಗಮಿಸಿದರು.</p>.ಅಭಿಷೇಕ್ ಬ್ಯಾನರ್ಜಿಗೆ ಮತ್ತೆ ಇ.ಡಿಯಿಂದ ಸಮನ್ಸ್: ಬಿಜೆಪಿ ವಿರುದ್ಧ ಟಿಎಂಸಿ ಟೀಕೆ.<p>ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿ ಇ.ಡಿ ಕಚೇರಿ ಇದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p><p>ಇದೇ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಬೇಕು ಎಂದು ಅಕ್ಟೋಬರ್ 3ರಂದು ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಶೀಘ್ರವೇ ಅನುದಾನ ಬಿಡುಗಡೆ ಮಾಡಬೇಕು ಎಂದು ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ವಿಚಾರಣೆಗೆ ಗೈರಾಗಿದ್ದರು.</p><p>ಇದೇ ಪ್ರಕರಣ ಸಂಬಂಧ ಸೆ. 13 ಅಭಿಷೇಕ್ ಬ್ಯಾನರ್ಜಿ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.</p>.ಶಾಲಾ ಉದ್ಯೋಗ ಹಗರಣ: ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇ.ಡಿ ನೋಟಿಸ್.<p>ಕಲ್ಲಿದ್ದಲು ಹಗರಣ ಸಂಬಂಧ 2021ರಲ್ಲಿ ದೆಹಲಿಯಲ್ಲೂ, 2022ರಲ್ಲಿ ಕೋಲ್ಕತ್ತದಲ್ಲಿಯೂ ಅಭಿಷೇಕ್ ಇ.ಡಿ ವಿಚಾರಣೆ ಎದುರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು (ಗುರುವಾರ) ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.</p><p>ಬೆಳಿಗ್ಗೆ ಸುಮಾರು 11.10ರ ವೇಳೆಗೆ ಇಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಗೆ ಅವರು ಆಗಮಿಸಿದರು.</p>.ಅಭಿಷೇಕ್ ಬ್ಯಾನರ್ಜಿಗೆ ಮತ್ತೆ ಇ.ಡಿಯಿಂದ ಸಮನ್ಸ್: ಬಿಜೆಪಿ ವಿರುದ್ಧ ಟಿಎಂಸಿ ಟೀಕೆ.<p>ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿ ಇ.ಡಿ ಕಚೇರಿ ಇದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p><p>ಇದೇ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಬೇಕು ಎಂದು ಅಕ್ಟೋಬರ್ 3ರಂದು ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಶೀಘ್ರವೇ ಅನುದಾನ ಬಿಡುಗಡೆ ಮಾಡಬೇಕು ಎಂದು ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ವಿಚಾರಣೆಗೆ ಗೈರಾಗಿದ್ದರು.</p><p>ಇದೇ ಪ್ರಕರಣ ಸಂಬಂಧ ಸೆ. 13 ಅಭಿಷೇಕ್ ಬ್ಯಾನರ್ಜಿ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.</p>.ಶಾಲಾ ಉದ್ಯೋಗ ಹಗರಣ: ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇ.ಡಿ ನೋಟಿಸ್.<p>ಕಲ್ಲಿದ್ದಲು ಹಗರಣ ಸಂಬಂಧ 2021ರಲ್ಲಿ ದೆಹಲಿಯಲ್ಲೂ, 2022ರಲ್ಲಿ ಕೋಲ್ಕತ್ತದಲ್ಲಿಯೂ ಅಭಿಷೇಕ್ ಇ.ಡಿ ವಿಚಾರಣೆ ಎದುರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>