<p><strong>ಕೂಚ್ ಬಿಹಾರ್ (ಪಶ್ಚಿಮ ಬಂಗಾಳ):</strong> ಚುನಾವಣಾ ಅಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದರು.</p>.<p>ಕೂಚ್ ಬಿಹಾರ್ನಲ್ಲಿ ಮಂಗಳವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಸ್ತೆ, ವಸತಿ ಅಥವಾ ನೀರಾವರಿಗೆ ಸಂಬಂಧಿಸಿದ ಅನುದಾನ ಮಾತ್ರವಲ್ಲ, ಮತದಾನದ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದೆ’ ಎಂದು ದೂರಿದರು.</p>.<p>ಚುನಾವಣಾ ಆಯೋಗವು ‘ಸತ್ತಿದ್ದಾರೆ’ ಎಂಬ ಕಾರಣ ನೀಡಿ ಕರಡು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹತ್ತು ಮಂದಿಯನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅಭಿಷೇಕ್ ಅವರು ರ್ಯಾಲಿಗೆ ಕರೆತಂದರು.</p>.<p>10 ಮಂದಿಯನ್ನು ವೇದಿಕೆಯ ಮೇಲೆ ಕರೆಸಿದ ಅವರು, ‘ಇವರೆಲ್ಲರೂ ಕೂಚ್ ಬಿಹಾರ್ನಲ್ಲಿ ಹುಟ್ಟಿ ಬೆಳೆದವರು. ಆದರೆ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ಚುನಾವಣಾ ಆಯೋಗವು ಎಲ್ಲರನ್ನೂ ‘ಸತ್ತಿದ್ದಾರೆ’ ಎಂದು ಘೋಷಿಸಿದೆ. ಈ ಹತ್ತು ಮಂದಿಯ ಹೆಸರನ್ನು ಮತದಾರರ ಕರಡು ಪಟ್ಟಿಯಿಂದ ಕೈಬಿಡಲಾಗಿದೆ’ ಎಂದು ಹೇಳಿದರು.</p>.<p>ಈ ತಿಂಗಳ ಆರಂಭದಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲೂ ಅವರು ಆಯೋಗವು ‘ಸತ್ತಿದ್ದಾರೆ’ ಎಂದು ಘೋಷಿಸಿರುವ ತಲಾ ಇಬ್ಬರು ಪುರುಷರು ಮತ್ತು ಮಹಿಳೆಯನ್ನು ವೇದಿಕೆಗೆ ಕರೆಸಿದ್ದರು.</p>.<p>‘ಎಸ್ಐಆರ್ ಸಂಬಂಧಿತ ವಿಚಾರಣೆಗೆ ಹಾಜರಾಗುವಂತೆ ಕೂಚ್ ಬಿಹಾರ್ ಜಿಲ್ಲೆಯ ಸುಮಾರು 3.5 ಲಕ್ಷ ಜನರಿಗೆ ಚುನಾವಣಾ ಆಯೋಗವು ನೋಟಿಸ್ ನೀಡಿದೆ. ಈ ಎಲ್ಲ ಜನರ ಹೆಸರುಗಳು ಮತದಾರರ ಅಂತಿಮ ಪಟ್ಟಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಟಿಎಂಸಿ ಕಾರ್ಯಕರ್ತರಿಗೆ ಸೂಚಿಸಿದರು. </p>.<p>ಎಸ್ಐಆರ್ ಪ್ರಕ್ರಿಯೆ ವೇಳೆ ಆತಂಕಕ್ಕೆ ಒಳಗಾಗಿ ಬಂಗಾಳದಲ್ಲಿ ಸುಮಾರು 78 ಜನರು ಮೃತಪಟ್ಟಿದ್ದಾರೆ ಎಂದು ಅವರು ಆರೋಪಿಸಿದರು. </p>.<p>ಕೂಚ್ ಬಿಹಾರ್ ಜಿಲ್ಲೆಯ ಎಲ್ಲ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು. </p>.<p><strong>‘ಕಾರಣವಿಲ್ಲದೆ 54 ಲಕ್ಷ ಮತದಾರರ ಹೆಸರು ರದ್ದು’</strong> </p><p>ಕೋಲ್ಕತ್ತ: ‘ರಾಜ್ಯದಲ್ಲಿ ಎಸ್ಐಆರ್ ನಡೆದ ವೇಳೆ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ಒ) ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಏಕಪಕ್ಷೀಯವಾಗಿ 54 ಲಕ್ಷ ಮಂದಿ ನೈಜ ಮತದಾರರ ಹೆಸರನ್ನು ಕರಡು ಮತದಾರರ ಪಟ್ಟಿಯಿಂದ ತೆಗದುಹಾಕಿದ್ದಾರೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. </p><p>ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕಣೆ (ಎಸ್ಐಆರ್) ವೇಳೆ ಈ ರೀತಿ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಮತದಾರರಿಗೆ ತಮ್ಮನ್ನು ತಾವು ನಿರೂಪಿಸಿಕೊಳ್ಳಲು ಅವಕಾಶವನ್ನೂ ನೀಡಿಲ್ಲ. ಜತೆಗೆ ಅವರ ಹೆಸರನ್ನು ಏಕೆ ತೆಗೆದುಹಾಕಲಾಗಿದೆ ಎಂಬ ಕಾರಣವನ್ನೂ ತಿಳಿಸಿಲ್ಲ ಎಂದೂ ಮಮತಾ ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಚ್ ಬಿಹಾರ್ (ಪಶ್ಚಿಮ ಬಂಗಾಳ):</strong> ಚುನಾವಣಾ ಅಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದರು.</p>.<p>ಕೂಚ್ ಬಿಹಾರ್ನಲ್ಲಿ ಮಂಗಳವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಸ್ತೆ, ವಸತಿ ಅಥವಾ ನೀರಾವರಿಗೆ ಸಂಬಂಧಿಸಿದ ಅನುದಾನ ಮಾತ್ರವಲ್ಲ, ಮತದಾನದ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದೆ’ ಎಂದು ದೂರಿದರು.</p>.<p>ಚುನಾವಣಾ ಆಯೋಗವು ‘ಸತ್ತಿದ್ದಾರೆ’ ಎಂಬ ಕಾರಣ ನೀಡಿ ಕರಡು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹತ್ತು ಮಂದಿಯನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅಭಿಷೇಕ್ ಅವರು ರ್ಯಾಲಿಗೆ ಕರೆತಂದರು.</p>.<p>10 ಮಂದಿಯನ್ನು ವೇದಿಕೆಯ ಮೇಲೆ ಕರೆಸಿದ ಅವರು, ‘ಇವರೆಲ್ಲರೂ ಕೂಚ್ ಬಿಹಾರ್ನಲ್ಲಿ ಹುಟ್ಟಿ ಬೆಳೆದವರು. ಆದರೆ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ಚುನಾವಣಾ ಆಯೋಗವು ಎಲ್ಲರನ್ನೂ ‘ಸತ್ತಿದ್ದಾರೆ’ ಎಂದು ಘೋಷಿಸಿದೆ. ಈ ಹತ್ತು ಮಂದಿಯ ಹೆಸರನ್ನು ಮತದಾರರ ಕರಡು ಪಟ್ಟಿಯಿಂದ ಕೈಬಿಡಲಾಗಿದೆ’ ಎಂದು ಹೇಳಿದರು.</p>.<p>ಈ ತಿಂಗಳ ಆರಂಭದಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲೂ ಅವರು ಆಯೋಗವು ‘ಸತ್ತಿದ್ದಾರೆ’ ಎಂದು ಘೋಷಿಸಿರುವ ತಲಾ ಇಬ್ಬರು ಪುರುಷರು ಮತ್ತು ಮಹಿಳೆಯನ್ನು ವೇದಿಕೆಗೆ ಕರೆಸಿದ್ದರು.</p>.<p>‘ಎಸ್ಐಆರ್ ಸಂಬಂಧಿತ ವಿಚಾರಣೆಗೆ ಹಾಜರಾಗುವಂತೆ ಕೂಚ್ ಬಿಹಾರ್ ಜಿಲ್ಲೆಯ ಸುಮಾರು 3.5 ಲಕ್ಷ ಜನರಿಗೆ ಚುನಾವಣಾ ಆಯೋಗವು ನೋಟಿಸ್ ನೀಡಿದೆ. ಈ ಎಲ್ಲ ಜನರ ಹೆಸರುಗಳು ಮತದಾರರ ಅಂತಿಮ ಪಟ್ಟಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಟಿಎಂಸಿ ಕಾರ್ಯಕರ್ತರಿಗೆ ಸೂಚಿಸಿದರು. </p>.<p>ಎಸ್ಐಆರ್ ಪ್ರಕ್ರಿಯೆ ವೇಳೆ ಆತಂಕಕ್ಕೆ ಒಳಗಾಗಿ ಬಂಗಾಳದಲ್ಲಿ ಸುಮಾರು 78 ಜನರು ಮೃತಪಟ್ಟಿದ್ದಾರೆ ಎಂದು ಅವರು ಆರೋಪಿಸಿದರು. </p>.<p>ಕೂಚ್ ಬಿಹಾರ್ ಜಿಲ್ಲೆಯ ಎಲ್ಲ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು. </p>.<p><strong>‘ಕಾರಣವಿಲ್ಲದೆ 54 ಲಕ್ಷ ಮತದಾರರ ಹೆಸರು ರದ್ದು’</strong> </p><p>ಕೋಲ್ಕತ್ತ: ‘ರಾಜ್ಯದಲ್ಲಿ ಎಸ್ಐಆರ್ ನಡೆದ ವೇಳೆ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ಒ) ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಏಕಪಕ್ಷೀಯವಾಗಿ 54 ಲಕ್ಷ ಮಂದಿ ನೈಜ ಮತದಾರರ ಹೆಸರನ್ನು ಕರಡು ಮತದಾರರ ಪಟ್ಟಿಯಿಂದ ತೆಗದುಹಾಕಿದ್ದಾರೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. </p><p>ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕಣೆ (ಎಸ್ಐಆರ್) ವೇಳೆ ಈ ರೀತಿ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಮತದಾರರಿಗೆ ತಮ್ಮನ್ನು ತಾವು ನಿರೂಪಿಸಿಕೊಳ್ಳಲು ಅವಕಾಶವನ್ನೂ ನೀಡಿಲ್ಲ. ಜತೆಗೆ ಅವರ ಹೆಸರನ್ನು ಏಕೆ ತೆಗೆದುಹಾಕಲಾಗಿದೆ ಎಂಬ ಕಾರಣವನ್ನೂ ತಿಳಿಸಿಲ್ಲ ಎಂದೂ ಮಮತಾ ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>