<p><strong>ಕೋಲ್ಕತ್ತ:</strong> 'ವಿಧಾನಸಭಾ ಚುನಾವಣೆಯ ನಂತರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವ ಸಂಬಂಧ ಮನವಿ ಪತ್ರ ನೀಡಲು ಹೂಗ್ಲಿ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ತೆರಳಿದ್ದ ವೇಳೆ ಗುಂಪೊಂದು ಹಲ್ಲೆ ನಡೆಸಿದ್ದು, ನನ್ನ ತಲೆಗೆ ತೀವ್ರವಾದ ಗಾಯಗಳಾಗಿವೆ' ಎಂದು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಈ ಬೆಳವಣಿಗೆಯ ಬಳಿಕ ಶ್ರೀರಾಮ್ಪೋರ್ನಲ್ಲಿರುವ ಕಲ್ಯಾಣ್ ಅವರ ಮನೆಗೆ ತೆರಳಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದಾಳಿಯ ಕುರಿತು ಮಾಹಿತಿ ಪಡೆದುಕೊಂಡರು. </p><p>‘ಶನಿವಾರ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆಸಲಾಗಿತ್ತು. ಮರುದಿನವೇ ಲೋಕಸಭೆ ಪಕ್ಷದ ಮುಖ್ಯ ಸಚೇತಕ ಕಲ್ಯಾಣ್ ಬ್ಯಾನರ್ಜಿ ಮೇಲೆ ಕೂಡ ಬಿಜೆಪಿಯು ಯೋಜಿತವಾಗಿ ದಾಳಿ ನಡೆಸಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಬಿಜೆಪಿಯು ಹತ್ಯೆ ಮಾಡುತ್ತಿದೆ’ ಎಂದು ಆರೋಪಿಸಿದರು.</p>. <p>ಬಿಜೆಪಿ ಕಾರಣ: ‘ನನ್ನ ಮೇಲೆ ದಾಳಿಯಾಗಲು ಬಿಜೆಪಿಯವರೇ ಕಾರಣ’ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಚಂದಿತಾಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲು ಕಲ್ಯಾಣ್ ಅವರು ನಿಯೋಗದ ಜೊತೆಗೆ ಬಂದಿದ್ದರು. ಈ ವೇಳೆ ಸುತ್ತುವರಿದ ಗುಂಪು ಕಪ್ಪು ಬಟ್ಟೆ ತೋರಿಸಿ, ಕಳ್ಳ ಕಳ್ಳ ಎಂದು ಘೋಷಣೆ ಕೂಗಿದರು. </p><p>ಈ ವೇಳೆ ಜನರು ಅವರನ್ನು ತಳ್ಳಾಡಿ, ತಲೆಗೆ ಹೊಡೆದಿದ್ದು, ರಕ್ತ ಸೋರುತ್ತಿರುವ ದೃಶ್ಯ ಟಿವಿಗಳಲ್ಲಿ ಹರಿದಾಡಿದೆ.</p><p>‘ಈ ಎಲ್ಲಾ ಘಟನೆಗಳು ಪೊಲೀಸರ ಮುಂಭಾಗವೇ ನಡೆದಿದೆ. ನನ್ನ ತಲೆಗೆ ಹೊಡೆಯಲಾಗಿದ್ದು, ರಕ್ತ ಸೋರುತ್ತಿದೆ’ ಎಂದು ಕಲ್ಯಾಣ್ ಆರೋಪಿಸಿದ್ದಾರೆ. </p><p>ಇದಾದ ಬಳಿಕ ಠಾಣೆಯ ಮುಂಭಾಗದಲ್ಲಿ ಧರಣಿ ನಡೆಸಿದರು. ಪರಿಸ್ಥಿತಿ ವಿಕೋಪಕ್ಕೆ ಕೈ ಮೀರದಂತೆ ತಡೆಯಲು ಹೆಚ್ಚಿನ ಪೊಲೀಸ್ ಬಂದೋಬಸ್ತ್, ಕೇಂದ್ರಿಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.</p><p>ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ‘ಟಿಎಂಸಿ ನಾಯಕರ ವಿರುದ್ಧ ಸ್ಥಳೀಯ ಜನರೇ ಆಕ್ರೋಶ ಹೊರಹಾಕುತ್ತಿದ್ದಾರೆ, ಇದರಲ್ಲಿ ಪಕ್ಷದ ಯಾವುದೇ ಪಾತ್ರವಿಲ್ಲ’ ಎಂದು ತಿಳಿಸಿದೆ.</p>.ಬಿಜೆಪಿ ಒತ್ತಡಕ್ಕೆ ಅಭಿಷೇಕ್ ಬ್ಯಾನರ್ಜಿಯನ್ನು ಆಸ್ಪತ್ರೆಯಿಂದ ಬಿಡುಗಡೆ: ಮಮತಾ.ನಾನು ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದನೆಯ ಬಲಿಪಶು: ಅಭಿಷೇಕ್ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> 'ವಿಧಾನಸಭಾ ಚುನಾವಣೆಯ ನಂತರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವ ಸಂಬಂಧ ಮನವಿ ಪತ್ರ ನೀಡಲು ಹೂಗ್ಲಿ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ತೆರಳಿದ್ದ ವೇಳೆ ಗುಂಪೊಂದು ಹಲ್ಲೆ ನಡೆಸಿದ್ದು, ನನ್ನ ತಲೆಗೆ ತೀವ್ರವಾದ ಗಾಯಗಳಾಗಿವೆ' ಎಂದು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಈ ಬೆಳವಣಿಗೆಯ ಬಳಿಕ ಶ್ರೀರಾಮ್ಪೋರ್ನಲ್ಲಿರುವ ಕಲ್ಯಾಣ್ ಅವರ ಮನೆಗೆ ತೆರಳಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದಾಳಿಯ ಕುರಿತು ಮಾಹಿತಿ ಪಡೆದುಕೊಂಡರು. </p><p>‘ಶನಿವಾರ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆಸಲಾಗಿತ್ತು. ಮರುದಿನವೇ ಲೋಕಸಭೆ ಪಕ್ಷದ ಮುಖ್ಯ ಸಚೇತಕ ಕಲ್ಯಾಣ್ ಬ್ಯಾನರ್ಜಿ ಮೇಲೆ ಕೂಡ ಬಿಜೆಪಿಯು ಯೋಜಿತವಾಗಿ ದಾಳಿ ನಡೆಸಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಬಿಜೆಪಿಯು ಹತ್ಯೆ ಮಾಡುತ್ತಿದೆ’ ಎಂದು ಆರೋಪಿಸಿದರು.</p>. <p>ಬಿಜೆಪಿ ಕಾರಣ: ‘ನನ್ನ ಮೇಲೆ ದಾಳಿಯಾಗಲು ಬಿಜೆಪಿಯವರೇ ಕಾರಣ’ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಚಂದಿತಾಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲು ಕಲ್ಯಾಣ್ ಅವರು ನಿಯೋಗದ ಜೊತೆಗೆ ಬಂದಿದ್ದರು. ಈ ವೇಳೆ ಸುತ್ತುವರಿದ ಗುಂಪು ಕಪ್ಪು ಬಟ್ಟೆ ತೋರಿಸಿ, ಕಳ್ಳ ಕಳ್ಳ ಎಂದು ಘೋಷಣೆ ಕೂಗಿದರು. </p><p>ಈ ವೇಳೆ ಜನರು ಅವರನ್ನು ತಳ್ಳಾಡಿ, ತಲೆಗೆ ಹೊಡೆದಿದ್ದು, ರಕ್ತ ಸೋರುತ್ತಿರುವ ದೃಶ್ಯ ಟಿವಿಗಳಲ್ಲಿ ಹರಿದಾಡಿದೆ.</p><p>‘ಈ ಎಲ್ಲಾ ಘಟನೆಗಳು ಪೊಲೀಸರ ಮುಂಭಾಗವೇ ನಡೆದಿದೆ. ನನ್ನ ತಲೆಗೆ ಹೊಡೆಯಲಾಗಿದ್ದು, ರಕ್ತ ಸೋರುತ್ತಿದೆ’ ಎಂದು ಕಲ್ಯಾಣ್ ಆರೋಪಿಸಿದ್ದಾರೆ. </p><p>ಇದಾದ ಬಳಿಕ ಠಾಣೆಯ ಮುಂಭಾಗದಲ್ಲಿ ಧರಣಿ ನಡೆಸಿದರು. ಪರಿಸ್ಥಿತಿ ವಿಕೋಪಕ್ಕೆ ಕೈ ಮೀರದಂತೆ ತಡೆಯಲು ಹೆಚ್ಚಿನ ಪೊಲೀಸ್ ಬಂದೋಬಸ್ತ್, ಕೇಂದ್ರಿಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.</p><p>ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ‘ಟಿಎಂಸಿ ನಾಯಕರ ವಿರುದ್ಧ ಸ್ಥಳೀಯ ಜನರೇ ಆಕ್ರೋಶ ಹೊರಹಾಕುತ್ತಿದ್ದಾರೆ, ಇದರಲ್ಲಿ ಪಕ್ಷದ ಯಾವುದೇ ಪಾತ್ರವಿಲ್ಲ’ ಎಂದು ತಿಳಿಸಿದೆ.</p>.ಬಿಜೆಪಿ ಒತ್ತಡಕ್ಕೆ ಅಭಿಷೇಕ್ ಬ್ಯಾನರ್ಜಿಯನ್ನು ಆಸ್ಪತ್ರೆಯಿಂದ ಬಿಡುಗಡೆ: ಮಮತಾ.ನಾನು ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದನೆಯ ಬಲಿಪಶು: ಅಭಿಷೇಕ್ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>