<p><strong>ಕೋಲ್ಕತ್ತ:</strong> ಬಿಜೆಪಿ ಕಾರ್ಯಕರ್ತರು ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ಗೆಲುವಿನ ಸಂಭ್ರಮ ಆಚರಿಸಿದ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಕಚೇರಿಗಳಿಗೆ ಬೆಂಕಿ ಹಚ್ಚಿದ ಮತ್ತು ಧ್ವಂಸಗೊಳಿಸಿದ ಘಟನೆಗಳು ವರದಿಯಾಗಿವೆ.</p>.<p>ಕೋಲ್ಕತ್ತದ ಟಾಲಿಗಂಜ್ ಮತ್ತು ಕಸ್ಬಾ, ನಗರದ ಹೊರವಲಯದ ಬರುಯ್ಪುರ, ಕಮರ್ಹಾಟಿ, ಬಾರಾನಗರ್ ಮತ್ತು ಹೌರಾ ಹಾಗೂ ಬರಾಮ್ಪುರದಲ್ಲಿ ಟಿಎಂಸಿ ಕಚೇರಿಗಳ ಮೇಲೆ ಸೋಮವಾರ ಮಧ್ಯಾಹ್ನದ ಬಳಿಕ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಕಚೇರಿಗಳನ್ನು ಧ್ವಂಸಗೊಳಿಸಿದ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಘಟನೆ ಸಂಬಂಧ ಸ್ಥಳೀಯ ಪೊಲೀಸರಿಂದ ವರದಿ ಕೇಳಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ತಮ್ಮ ಪಕ್ಷದ ಕಾರ್ಯಕರ್ತರು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಅವರು ಅಲ್ಲಗಳೆದಿದ್ದಾರೆ. ಚುನಾವಣಾ ಫಲಿತಾಂಶದಿಂದ ಹತಾಶರಾಗಿರುವ ಟಿಎಂಸಿ ಕಾರ್ಯಕರ್ತರು ತಮ್ಮ ನಾಯಕರ ಮೇಲಿನ ಆಕ್ರೋಶ ಹೊರಹಾಕಲು ಈ ದಾಳಿ ನಡೆಸಿರಬಹುದು ಎಂದು ಅವರು ಹೇಳಿದ್ದಾರೆ.</p>.<p>ಟಾಲಿಗಂಜ್ನ ನೇತಾಜಿನಗರದಲ್ಲಿ ಟಿಎಂಸಿ ಅಭ್ಯರ್ಥಿ ಮತ್ತು ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿಯನ್ನು ಗುಂಪೊಂದು ಧ್ವಂಸಗೊಳಿಸಿದೆ. ರೂಬಿ ಕ್ರಾಸಿಂಗ್ನಲ್ಲಿ ಬಿಜೆಪಿಯ ಬಾವುಟ ಹಿಡಿದಿದ್ದ ಕೆಲವರು ಟಿಎಂಸಿ ಪಾಲಿಕೆ ಸದಸ್ಯ ಸುಶಾಂತ್ ಘೋಷ್ ಅವರ ಕಚೇರಿಯ ಸ್ವತ್ತುಗಳನ್ನು ಹಾನಿಗೊಳಿಸಿದ್ದಾರೆ.</p>.<p>ಕಚೇರಿ ಮೇಲಿನ ದಾಳಿಯ ಘಟನೆಗಳನ್ನು ಖಂಡಿಸಿರುವ ಟಿಎಂಸಿ, ‘ಬಿಜೆಪಿಯು ಅಧಿಕಾರಕ್ಕೆ ಬಂದ ಕೂಡಲೇ ತನ್ನ ನಿಜ ಬಣ್ಣ ತೋರಿಸಿದೆ’ ಎಂದು ಟೀಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿ ಕಾರ್ಯಕರ್ತರು ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ಗೆಲುವಿನ ಸಂಭ್ರಮ ಆಚರಿಸಿದ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಕಚೇರಿಗಳಿಗೆ ಬೆಂಕಿ ಹಚ್ಚಿದ ಮತ್ತು ಧ್ವಂಸಗೊಳಿಸಿದ ಘಟನೆಗಳು ವರದಿಯಾಗಿವೆ.</p>.<p>ಕೋಲ್ಕತ್ತದ ಟಾಲಿಗಂಜ್ ಮತ್ತು ಕಸ್ಬಾ, ನಗರದ ಹೊರವಲಯದ ಬರುಯ್ಪುರ, ಕಮರ್ಹಾಟಿ, ಬಾರಾನಗರ್ ಮತ್ತು ಹೌರಾ ಹಾಗೂ ಬರಾಮ್ಪುರದಲ್ಲಿ ಟಿಎಂಸಿ ಕಚೇರಿಗಳ ಮೇಲೆ ಸೋಮವಾರ ಮಧ್ಯಾಹ್ನದ ಬಳಿಕ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಕಚೇರಿಗಳನ್ನು ಧ್ವಂಸಗೊಳಿಸಿದ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಘಟನೆ ಸಂಬಂಧ ಸ್ಥಳೀಯ ಪೊಲೀಸರಿಂದ ವರದಿ ಕೇಳಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ತಮ್ಮ ಪಕ್ಷದ ಕಾರ್ಯಕರ್ತರು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಅವರು ಅಲ್ಲಗಳೆದಿದ್ದಾರೆ. ಚುನಾವಣಾ ಫಲಿತಾಂಶದಿಂದ ಹತಾಶರಾಗಿರುವ ಟಿಎಂಸಿ ಕಾರ್ಯಕರ್ತರು ತಮ್ಮ ನಾಯಕರ ಮೇಲಿನ ಆಕ್ರೋಶ ಹೊರಹಾಕಲು ಈ ದಾಳಿ ನಡೆಸಿರಬಹುದು ಎಂದು ಅವರು ಹೇಳಿದ್ದಾರೆ.</p>.<p>ಟಾಲಿಗಂಜ್ನ ನೇತಾಜಿನಗರದಲ್ಲಿ ಟಿಎಂಸಿ ಅಭ್ಯರ್ಥಿ ಮತ್ತು ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿಯನ್ನು ಗುಂಪೊಂದು ಧ್ವಂಸಗೊಳಿಸಿದೆ. ರೂಬಿ ಕ್ರಾಸಿಂಗ್ನಲ್ಲಿ ಬಿಜೆಪಿಯ ಬಾವುಟ ಹಿಡಿದಿದ್ದ ಕೆಲವರು ಟಿಎಂಸಿ ಪಾಲಿಕೆ ಸದಸ್ಯ ಸುಶಾಂತ್ ಘೋಷ್ ಅವರ ಕಚೇರಿಯ ಸ್ವತ್ತುಗಳನ್ನು ಹಾನಿಗೊಳಿಸಿದ್ದಾರೆ.</p>.<p>ಕಚೇರಿ ಮೇಲಿನ ದಾಳಿಯ ಘಟನೆಗಳನ್ನು ಖಂಡಿಸಿರುವ ಟಿಎಂಸಿ, ‘ಬಿಜೆಪಿಯು ಅಧಿಕಾರಕ್ಕೆ ಬಂದ ಕೂಡಲೇ ತನ್ನ ನಿಜ ಬಣ್ಣ ತೋರಿಸಿದೆ’ ಎಂದು ಟೀಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>