ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ಸಚಿವ, ಟಿಎಂಸಿ ನಾಯಕ ಶಶಿ ಪಂಜ ‘ಬಿಜೆಪಿಯು ಸಂದೇಶ್ಖಾಲಿಯಿಂದ ಗುಂಪೊಂದನ್ನು ಕರೆದುಕೊಂಡು ಹೋಗಿ ಸ್ವತಃ ರಾಷ್ಟ್ರಪತಿಗಳ ಎದುರೇ ಸಂದೇಶ್ಖಾಲಿ ಕುರಿತು ಸುಳ್ಳು ಚಿತ್ರಣ ನೀಡಿದ್ದಾರೆ. ನಮ್ಮ ಪರವಾಗಿ ಸಂದೇಶ್ಖಾಲಿಯಿಂದ ಗುಂಪೊಂದನ್ನು ಕರೆದುಕೊಂಡು ಹೋಗುವ ಅವಶ್ಯಕತೆ ಇದೆ ಎಂದು ನಾನು ಭಾವಿಸುತ್ತೇನೆ. ಸಂದೇಶ್ಖಾಲಿಯಲ್ಲಿ ನಿಜಕ್ಕೂ ಏನಾಯಿತು ಎಂಬುದರ ಕುರಿತು ರಾಷ್ಟ್ರಪತಿಗಳಿಗೆ ತಿಳಿಸುವ ಅವಶ್ಯಕತೆಯಿದೆ‘ ಎಂದು ತಿಳಿಸಿದರು.