ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಕತ್ತ ನ್ಯಾಯಾಲಯದ ತೀರ್ಪುನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ಅವರಿಗೆ ಗೌರವವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಟಿಎಂಸಿ ಪಕ್ಷವು ನ್ಯಾಯಾಲಯವನ್ನು ಹೇಗೆ ಪ್ರಶ್ನಿಸುತ್ತಿದೆ. ಇದನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಈ ಪಕ್ಷವು ಸುಳ್ಳುಗಳನ್ನು ಮರೆಮಾಚಿಕೊಂಡು ಜನರ ನಂಬಿಕೆಯನ್ನು ಘಾಸಿಗೊಳಿಸಿದೆ. ಇದೀಗ ಟಿಎಂಸಿ ಸರ್ಕಾರ ಮಾಡಿರುವ ಅನ್ಯಾಯದ ಕ್ರಮಗಳು ಬಹಿರಂಗವಾಗಿವೆ ಎಂದು ಮೋದಿ ತಿಳಿಸಿದ್ದಾರೆ.