<p><strong>ನವದೆಹಲಿ</strong>: ಸಂಸತ್ ಬಜೆಟ್ ಅಧಿವೇಶನ ಮಾರ್ಚ್ 9ರಿಂದ ಪುನರಾರಂಭವಾಗಲಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ಸೂಚಿಸಿದೆ.</p>.<p>‘ಪಕ್ಷಪಾತ ಧೋರಣೆಯಿಂದ ವರ್ತಿಸಿದ್ದಾರೆ’ ಎಂಬ ಆರೋಪದ ಮೇರೆಗೆ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನದಿಂದ ಪದಚ್ಯುತಿಗೊಳಿಸುವ ನಿರ್ಣಯವನ್ನು ಮಂಡಿಸಲು ವಿರೋಧ ಪಕ್ಷದ ಕನಿಷ್ಠ 118 ಸಂಸದರು ನೋಟಿಸ್ ನೀಡಿದ್ದರು. ಆ ಸಂದರ್ಭದಲ್ಲಿ ಟಿಎಂಸಿ ಸಂಸದರು ನೋಟಿಸ್ಗೆ ಸಹಿ ಹಾಕಿರಲಿಲ್ಲ.</p>.<p>‘ನಮ್ಮ ಪಕ್ಷ ಯಾವಾಗಲೂ ಅವಿಶ್ವಾಸ ನಿರ್ಣಯದ ಪರ ನಿಲುವು ಹೊಂದಿತ್ತು. ನಿರ್ಣಯವನ್ನು ಆತುರವಾಗಿ ಮಂಡಿಸುವುದು ಇಷ್ಟವಿರಲಿಲ್ಲ. ಆದ್ದರಿಂದ, ಬಜೆಟ್ ಅಧಿವೇಶನದ ಕೊನೆಯ ಭಾಗದಲ್ಲಿ, ಮೂರು ದಿನಗಳ ನಂತರ ಅದನ್ನು ಸಲ್ಲಿಸಿ ಎಂದು ನಾವು ಹೇಳಿದ್ದೆವು’ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.</p>.<p>‘ಸೋಮವಾರ ನೋಟಿಸ್ ಅನ್ನು ಪರಿಗಣಿಸುವ ವೇಳೆ, ಅನಾರೋಗ್ಯ ಪೀಡಿತರನ್ನು ಹೊರತುಪಡಿಸಿ, ಟಿಎಂಸಿಯ ಬಹುತೇಕ ಸಂಸದರು ಲೋಕಸಭೆಯಲ್ಲಿ ಹಾಜರಿರುತ್ತಾರೆ. ಈ ಸಂಬಂಧ ಇಂಡಿಯಾ ಬಣದ ಇತರ ನಾಯಕರೊಂದಿಗೆ ಟಿಎಂಸಿ ನಾಯಕರು ಸಂಪರ್ಕದಲ್ಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ನಿರ್ಣಯವು ಮಾರ್ಚ್ 9ರಂದು ಲೋಕಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿದೆ. </p>.<p>ಈ ವೇಳೆ ಸ್ಪೀಕರ್ ಪೀಠದಲ್ಲಿ ಕುಳಿತವರು ಕರೆದಾಗ, ಕನಿಷ್ಠ 50 ಸದಸ್ಯರು ಎದ್ದು ನಿಂತು ನಿರ್ಣಯಕ್ಕೆ ಬೆಂಬಲ ಸೂಚಿಸಬೇಕು. ಆ ನಂತರ, ಈ ನಿರ್ಣಯದ ಮೇಲೆ ಸುದೀರ್ಘ ಚರ್ಚೆ ನಡೆದು, ಅಂತಿಮವಾಗಿ ಮತದಾನದ ಮೂಲಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ, 50 ಸದಸ್ಯರು ನೋಟಿಸ್ಗೆ ಬೆಂಬಲ ನೀಡದಿದ್ದರೆ, ನಿರ್ಣಯವನ್ನು ಮಂಡಿಸಲಾಗುವುದಿಲ್ಲ.</p>.<p><strong>ವಿಪ್ ಜಾರಿ</strong></p>.<p>ಸದನದಲ್ಲಿ ಎಲ್ಲ ಸಂಸದರು ಹಾಜರಿರುವಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ವಿಪ್ ಜಾರಿ ಮಾಡಿವೆ. ಸರ್ಕಾರ ಬಹುಮತ ಹೊಂದಿರುವುದರಿಂದ ನಿರ್ಣಯಕ್ಕೆ ಸೋಲಾಗಲಿದೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ ಬಜೆಟ್ ಅಧಿವೇಶನ ಮಾರ್ಚ್ 9ರಿಂದ ಪುನರಾರಂಭವಾಗಲಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ಸೂಚಿಸಿದೆ.</p>.<p>‘ಪಕ್ಷಪಾತ ಧೋರಣೆಯಿಂದ ವರ್ತಿಸಿದ್ದಾರೆ’ ಎಂಬ ಆರೋಪದ ಮೇರೆಗೆ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನದಿಂದ ಪದಚ್ಯುತಿಗೊಳಿಸುವ ನಿರ್ಣಯವನ್ನು ಮಂಡಿಸಲು ವಿರೋಧ ಪಕ್ಷದ ಕನಿಷ್ಠ 118 ಸಂಸದರು ನೋಟಿಸ್ ನೀಡಿದ್ದರು. ಆ ಸಂದರ್ಭದಲ್ಲಿ ಟಿಎಂಸಿ ಸಂಸದರು ನೋಟಿಸ್ಗೆ ಸಹಿ ಹಾಕಿರಲಿಲ್ಲ.</p>.<p>‘ನಮ್ಮ ಪಕ್ಷ ಯಾವಾಗಲೂ ಅವಿಶ್ವಾಸ ನಿರ್ಣಯದ ಪರ ನಿಲುವು ಹೊಂದಿತ್ತು. ನಿರ್ಣಯವನ್ನು ಆತುರವಾಗಿ ಮಂಡಿಸುವುದು ಇಷ್ಟವಿರಲಿಲ್ಲ. ಆದ್ದರಿಂದ, ಬಜೆಟ್ ಅಧಿವೇಶನದ ಕೊನೆಯ ಭಾಗದಲ್ಲಿ, ಮೂರು ದಿನಗಳ ನಂತರ ಅದನ್ನು ಸಲ್ಲಿಸಿ ಎಂದು ನಾವು ಹೇಳಿದ್ದೆವು’ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.</p>.<p>‘ಸೋಮವಾರ ನೋಟಿಸ್ ಅನ್ನು ಪರಿಗಣಿಸುವ ವೇಳೆ, ಅನಾರೋಗ್ಯ ಪೀಡಿತರನ್ನು ಹೊರತುಪಡಿಸಿ, ಟಿಎಂಸಿಯ ಬಹುತೇಕ ಸಂಸದರು ಲೋಕಸಭೆಯಲ್ಲಿ ಹಾಜರಿರುತ್ತಾರೆ. ಈ ಸಂಬಂಧ ಇಂಡಿಯಾ ಬಣದ ಇತರ ನಾಯಕರೊಂದಿಗೆ ಟಿಎಂಸಿ ನಾಯಕರು ಸಂಪರ್ಕದಲ್ಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ನಿರ್ಣಯವು ಮಾರ್ಚ್ 9ರಂದು ಲೋಕಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿದೆ. </p>.<p>ಈ ವೇಳೆ ಸ್ಪೀಕರ್ ಪೀಠದಲ್ಲಿ ಕುಳಿತವರು ಕರೆದಾಗ, ಕನಿಷ್ಠ 50 ಸದಸ್ಯರು ಎದ್ದು ನಿಂತು ನಿರ್ಣಯಕ್ಕೆ ಬೆಂಬಲ ಸೂಚಿಸಬೇಕು. ಆ ನಂತರ, ಈ ನಿರ್ಣಯದ ಮೇಲೆ ಸುದೀರ್ಘ ಚರ್ಚೆ ನಡೆದು, ಅಂತಿಮವಾಗಿ ಮತದಾನದ ಮೂಲಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ, 50 ಸದಸ್ಯರು ನೋಟಿಸ್ಗೆ ಬೆಂಬಲ ನೀಡದಿದ್ದರೆ, ನಿರ್ಣಯವನ್ನು ಮಂಡಿಸಲಾಗುವುದಿಲ್ಲ.</p>.<p><strong>ವಿಪ್ ಜಾರಿ</strong></p>.<p>ಸದನದಲ್ಲಿ ಎಲ್ಲ ಸಂಸದರು ಹಾಜರಿರುವಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ವಿಪ್ ಜಾರಿ ಮಾಡಿವೆ. ಸರ್ಕಾರ ಬಹುಮತ ಹೊಂದಿರುವುದರಿಂದ ನಿರ್ಣಯಕ್ಕೆ ಸೋಲಾಗಲಿದೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>