<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಮಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಕಂಡುಬಂದರೆ ಕಾನೂನು ಹೋರಾಟದ ಮತ್ತು ಸಾಮೂಹಿಕ ಚಳವಳಿ ನಡೆಸುವ ಎಚ್ಚರಿಕೆಯನ್ನು ಟಿಎಂಸಿ ಶುಕ್ರವಾರ ನೀಡಿದೆ.</p>.<p>ಪಕ್ಷದ ಸುಮಾರು 15,000 ಪದಾಧಿಕಾರಿಗಳು ಭಾಗವಹಿಸಿದ್ದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ‘ಮುಂಬರುವ ಚುನಾವಣೆಯಲ್ಲಿ ಯಾರಿಗೂ ತಿಳಿಯದಂತೆ ‘ಮೋಸ’ ಎಸಗಲು ಬಿಜೆಪಿಯು ಎಸ್ಐಆರ್ ಪ್ರಕ್ರಿಯೆಯನ್ನು ಬಳಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಚುನಾವಣಾ ಆಯೋಗವು ಬಿಜೆಪಿಯ ಸೂಚನೆಯಂತೆ ಎಸ್ಐಆರ್ ನಡೆಸುತ್ತಿದ್ದು, ಬಂಗಾಳದಲ್ಲೂ ಈ ಪ್ರಕ್ರಿಯೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದೆ. ಬಿಹಾರದಲ್ಲಿ ಎಸ್ಐಆರ್ ಘೋಷಣೆಯಾದಾಗ ನಾವು ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಪ್ರತಿಭಟಿಸಿದ್ದೇವೆ. ಅದನ್ನು ಮುಂದುವರಿಸುತ್ತೇವೆ’ ಎಂದು ಬ್ಯಾನರ್ಜಿ ಹೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.</p>.<p>ಎಸ್ಐಆರ್ ಪ್ರಕ್ರಿಯೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿರುವುದರಿಂದ ರಾಜ್ಯದಾದ್ಯಂತ ‘ಭಯದ ವಾತಾವರಣ’ ಸೃಷ್ಟಿಯಾಗಿದೆ ಎಂದು ಬ್ಯಾನರ್ಜಿ ಆರೋಪಿಸಿದರು.</p>.<p>‘ನೈಜ ಮತದಾರರ ಹೆಸರು ಅಳಿಸಿ ಹಾಕಿದರೆ ನಾವು ಸುಮ್ಮನಿರುವುದಿಲ್ಲ. ನ್ಯಾಯಾಲಯದ ಮೊರೆ ಹೋಗುವುದು ಮಾತ್ರವಲ್ಲದೆ, ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಭೆಯಲ್ಲಿದ್ದ ಮುಖಂಡರಿಗೆ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಮಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಕಂಡುಬಂದರೆ ಕಾನೂನು ಹೋರಾಟದ ಮತ್ತು ಸಾಮೂಹಿಕ ಚಳವಳಿ ನಡೆಸುವ ಎಚ್ಚರಿಕೆಯನ್ನು ಟಿಎಂಸಿ ಶುಕ್ರವಾರ ನೀಡಿದೆ.</p>.<p>ಪಕ್ಷದ ಸುಮಾರು 15,000 ಪದಾಧಿಕಾರಿಗಳು ಭಾಗವಹಿಸಿದ್ದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ‘ಮುಂಬರುವ ಚುನಾವಣೆಯಲ್ಲಿ ಯಾರಿಗೂ ತಿಳಿಯದಂತೆ ‘ಮೋಸ’ ಎಸಗಲು ಬಿಜೆಪಿಯು ಎಸ್ಐಆರ್ ಪ್ರಕ್ರಿಯೆಯನ್ನು ಬಳಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಚುನಾವಣಾ ಆಯೋಗವು ಬಿಜೆಪಿಯ ಸೂಚನೆಯಂತೆ ಎಸ್ಐಆರ್ ನಡೆಸುತ್ತಿದ್ದು, ಬಂಗಾಳದಲ್ಲೂ ಈ ಪ್ರಕ್ರಿಯೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದೆ. ಬಿಹಾರದಲ್ಲಿ ಎಸ್ಐಆರ್ ಘೋಷಣೆಯಾದಾಗ ನಾವು ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಪ್ರತಿಭಟಿಸಿದ್ದೇವೆ. ಅದನ್ನು ಮುಂದುವರಿಸುತ್ತೇವೆ’ ಎಂದು ಬ್ಯಾನರ್ಜಿ ಹೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.</p>.<p>ಎಸ್ಐಆರ್ ಪ್ರಕ್ರಿಯೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿರುವುದರಿಂದ ರಾಜ್ಯದಾದ್ಯಂತ ‘ಭಯದ ವಾತಾವರಣ’ ಸೃಷ್ಟಿಯಾಗಿದೆ ಎಂದು ಬ್ಯಾನರ್ಜಿ ಆರೋಪಿಸಿದರು.</p>.<p>‘ನೈಜ ಮತದಾರರ ಹೆಸರು ಅಳಿಸಿ ಹಾಕಿದರೆ ನಾವು ಸುಮ್ಮನಿರುವುದಿಲ್ಲ. ನ್ಯಾಯಾಲಯದ ಮೊರೆ ಹೋಗುವುದು ಮಾತ್ರವಲ್ಲದೆ, ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಭೆಯಲ್ಲಿದ್ದ ಮುಖಂಡರಿಗೆ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>