<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಪಂಚಾಯತಿ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ, ಹಲವೆಡೆ ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪಟ್ಟಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೊಬ್ಬರನ್ನು ಶನಿವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಟಿಎಂಸಿ ಕಾರ್ಯಕರ್ತ ಜಿಯಾರುಲ್ ಮೊಲ್ಲ (52) ಅವರು ಮನೆಗೆ ಮರಳುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೊಲ್ಲ ಮಗಳು ಮನ್ವಾರಾ ಅವರು ಕಥಾಲ್ಬರಿಯಾ ಗ್ರಾಮದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.</p>.<p>ರಾಜಕೀಯ ತೊರೆಯುವಂತೆ ತಮ್ಮ ತಂದೆಗೆ ಪಕ್ಷದಲ್ಲಿದ್ದ ಮತ್ತೊಂದು ಬಣವು ಬೆದರಿಕೆ ಒಡ್ಡುತ್ತಿದ್ದದ್ದಾಗಿ ಮತ್ತು ಬೆದರಿಕೆ ಕುರಿತು ಹಲವಾರಿ ಬಾರಿ ದೂರು ನೀಡಿದ್ದ ಹೊರತಾಗಿಯೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂದು ಮನ್ವಾರಾ ಆರೋಪಿಸಿದ್ದಾರೆ.</p>.<p>‘ನಾನು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು. ನನ್ನ ಸ್ಪರ್ಧೆಯನ್ನು ಪಕ್ಷದ ಮತ್ತೊಂದು ಬಣವು ವಿರೋಧಿಸಿತ್ತು. ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ’ ಎಂದು ಮನ್ವಾರಾ ಹೇಳಿದ್ದಾರೆ. </p>.<p>10 ಜನರಿಗೆ ಗಾಯ: ಸಿಪಿಎಂ, ಇಂಡಿಯನ್ ಸೆಕ್ಸುಲರ್ ಫ್ರಂಟ್(ಐಎಸ್ಪಿ) ಬೆಂಬಲಿಗರು ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ 10 ಜನ ಗಾಯಗೊಂಡಿರುವ ಘಟನೆಯು ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಜಿಲ್ಲೆಯ ಕೃಷ್ಣಪುರ ಪ್ರದೇಶದಲ್ಲಿ ಟಿಎಂಸಿ ಸದಸ್ಯರು ಪಕ್ಷದ ಧ್ವಜಗಳನ್ನು ನಿಲ್ಲಿಸುತ್ತಿದ್ದ ವೇಳೆ ವಿರೋಧ ಪಕ್ಷಗಳ ಕಾರ್ಯಕರ್ತರು ಅದನ್ನು ತಡೆಯಲು ಮುಂದಾದಾಗ ಗಲಭೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ಮತ್ತೊಂದು ಘಟನೆಯಲ್ಲಿ, ದಕ್ಷಿಣ 24 ಪರಗಣ ಜಿಲ್ಲೆಯ ಚಲ್ತಾಬೇರಿಯಾ ಗ್ರಾಮ ಪಂಚಾಯತಿಯ ಟಿಎಂಸಿ ಅಭ್ಯರ್ಥಿ ಇಬ್ರಾಹಿಮ್ ಮೊಲ್ಲ ಎಂಬುವವರ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಐಎಸ್ಎಫ್ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. </p>.<p>ಜುಲೈ 8ರಂದು ಪಶ್ಚಿಮ ಬಂಗಾಳದ ಪಂಚಾಯತಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಂಬಂಧಿಸಿದ ವಿವಿಧ ಘರ್ಷಣೆಗಳಲ್ಲಿ ಈವರೆಗೂ 10 ಜನರ ಹತ್ಯೆಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಪಂಚಾಯತಿ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ, ಹಲವೆಡೆ ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪಟ್ಟಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೊಬ್ಬರನ್ನು ಶನಿವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಟಿಎಂಸಿ ಕಾರ್ಯಕರ್ತ ಜಿಯಾರುಲ್ ಮೊಲ್ಲ (52) ಅವರು ಮನೆಗೆ ಮರಳುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೊಲ್ಲ ಮಗಳು ಮನ್ವಾರಾ ಅವರು ಕಥಾಲ್ಬರಿಯಾ ಗ್ರಾಮದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.</p>.<p>ರಾಜಕೀಯ ತೊರೆಯುವಂತೆ ತಮ್ಮ ತಂದೆಗೆ ಪಕ್ಷದಲ್ಲಿದ್ದ ಮತ್ತೊಂದು ಬಣವು ಬೆದರಿಕೆ ಒಡ್ಡುತ್ತಿದ್ದದ್ದಾಗಿ ಮತ್ತು ಬೆದರಿಕೆ ಕುರಿತು ಹಲವಾರಿ ಬಾರಿ ದೂರು ನೀಡಿದ್ದ ಹೊರತಾಗಿಯೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂದು ಮನ್ವಾರಾ ಆರೋಪಿಸಿದ್ದಾರೆ.</p>.<p>‘ನಾನು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು. ನನ್ನ ಸ್ಪರ್ಧೆಯನ್ನು ಪಕ್ಷದ ಮತ್ತೊಂದು ಬಣವು ವಿರೋಧಿಸಿತ್ತು. ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ’ ಎಂದು ಮನ್ವಾರಾ ಹೇಳಿದ್ದಾರೆ. </p>.<p>10 ಜನರಿಗೆ ಗಾಯ: ಸಿಪಿಎಂ, ಇಂಡಿಯನ್ ಸೆಕ್ಸುಲರ್ ಫ್ರಂಟ್(ಐಎಸ್ಪಿ) ಬೆಂಬಲಿಗರು ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ 10 ಜನ ಗಾಯಗೊಂಡಿರುವ ಘಟನೆಯು ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಜಿಲ್ಲೆಯ ಕೃಷ್ಣಪುರ ಪ್ರದೇಶದಲ್ಲಿ ಟಿಎಂಸಿ ಸದಸ್ಯರು ಪಕ್ಷದ ಧ್ವಜಗಳನ್ನು ನಿಲ್ಲಿಸುತ್ತಿದ್ದ ವೇಳೆ ವಿರೋಧ ಪಕ್ಷಗಳ ಕಾರ್ಯಕರ್ತರು ಅದನ್ನು ತಡೆಯಲು ಮುಂದಾದಾಗ ಗಲಭೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ಮತ್ತೊಂದು ಘಟನೆಯಲ್ಲಿ, ದಕ್ಷಿಣ 24 ಪರಗಣ ಜಿಲ್ಲೆಯ ಚಲ್ತಾಬೇರಿಯಾ ಗ್ರಾಮ ಪಂಚಾಯತಿಯ ಟಿಎಂಸಿ ಅಭ್ಯರ್ಥಿ ಇಬ್ರಾಹಿಮ್ ಮೊಲ್ಲ ಎಂಬುವವರ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಐಎಸ್ಎಫ್ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. </p>.<p>ಜುಲೈ 8ರಂದು ಪಶ್ಚಿಮ ಬಂಗಾಳದ ಪಂಚಾಯತಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಂಬಂಧಿಸಿದ ವಿವಿಧ ಘರ್ಷಣೆಗಳಲ್ಲಿ ಈವರೆಗೂ 10 ಜನರ ಹತ್ಯೆಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>