<p class="title">ಚೆನ್ನೈ: ಜನಗಣತಿಯ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ತಮಿಳುನಾಡು ಸರ್ಕಾರವು, ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.</p>.<p class="title">ಜಾತಿ ಕುರಿತ ದತ್ತಾಂಶ ಸಂಗ್ರಹಿಸುವುದು ಮತ್ತು ಅದರ ಆಧಾರದಲ್ಲಿ ಕಾನೂನು ರೂಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರಗಳಿಗೆ ಇರುವ ಮಿತಿ ಹಾಗೂ ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p>.<p>ಚರ್ಚೆಯ ನಂತರ ನಿರ್ಣಯ ಅಂಗೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, ‘ಶಿಕ್ಷಣ, ಉದ್ಯೋಗ ಮತ್ತು ಆರ್ಥಿಕತೆಯಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಸಮಾನ ಅವಕಾಶಗಳನ್ನು ಖಾತರಿಪಡಿಸುವ ದಿಸೆಯಲ್ಲಿ ನೀತಿ ರೂಪಿಸಲು ಜಾತಿ ಆಧಾರಿತ ಸಮೀಕ್ಷೆ ಅಗತ್ಯ ಎಂಬುದಾಗಿ ಸದನ ಭಾವಿಸುತ್ತದೆ’ ಎಂದರು.</p>.<p>ಲೋಕಸಭಾ ಚುನಾವಣೆಯ ವೇಳೆ ‘ಇಂಡಿಯಾ’ ಕೂಟದ ಮಿತ್ರಪಕ್ಷಗಳು ಪ್ರಸ್ತಾಪಿಸಿದ ಮುಖ್ಯ ವಿಚಾರಗಳ ಪೈಕಿ ಜಾತಿ ಗಣತಿಯೂ ಒಂದು. ಜನಗಣತಿಯ ಜೊತೆಗೆ ಜಾತಿಯನ್ನೂ ದಾಖಲಿಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧಿ ಕೂಟದ ಬಹುತೇಕ ಎಲ್ಲ ಪಕ್ಷಗಳೂ ಪ್ರತಿಪಾದಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಚೆನ್ನೈ: ಜನಗಣತಿಯ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ತಮಿಳುನಾಡು ಸರ್ಕಾರವು, ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.</p>.<p class="title">ಜಾತಿ ಕುರಿತ ದತ್ತಾಂಶ ಸಂಗ್ರಹಿಸುವುದು ಮತ್ತು ಅದರ ಆಧಾರದಲ್ಲಿ ಕಾನೂನು ರೂಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರಗಳಿಗೆ ಇರುವ ಮಿತಿ ಹಾಗೂ ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p>.<p>ಚರ್ಚೆಯ ನಂತರ ನಿರ್ಣಯ ಅಂಗೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, ‘ಶಿಕ್ಷಣ, ಉದ್ಯೋಗ ಮತ್ತು ಆರ್ಥಿಕತೆಯಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಸಮಾನ ಅವಕಾಶಗಳನ್ನು ಖಾತರಿಪಡಿಸುವ ದಿಸೆಯಲ್ಲಿ ನೀತಿ ರೂಪಿಸಲು ಜಾತಿ ಆಧಾರಿತ ಸಮೀಕ್ಷೆ ಅಗತ್ಯ ಎಂಬುದಾಗಿ ಸದನ ಭಾವಿಸುತ್ತದೆ’ ಎಂದರು.</p>.<p>ಲೋಕಸಭಾ ಚುನಾವಣೆಯ ವೇಳೆ ‘ಇಂಡಿಯಾ’ ಕೂಟದ ಮಿತ್ರಪಕ್ಷಗಳು ಪ್ರಸ್ತಾಪಿಸಿದ ಮುಖ್ಯ ವಿಚಾರಗಳ ಪೈಕಿ ಜಾತಿ ಗಣತಿಯೂ ಒಂದು. ಜನಗಣತಿಯ ಜೊತೆಗೆ ಜಾತಿಯನ್ನೂ ದಾಖಲಿಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧಿ ಕೂಟದ ಬಹುತೇಕ ಎಲ್ಲ ಪಕ್ಷಗಳೂ ಪ್ರತಿಪಾದಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>