<p><strong>ಚೆನ್ನೈ</strong>: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ(ನೀಟ್) ರಾಜ್ಯಕ್ಕೆ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.</p><p> ಪ್ಲಸ್–2 ಪರೀಕ್ಷೆ ಅಂಕಗಳ ಆಧಾರದ ಮೇಲೆಯೇ ವಿದ್ಯಾರ್ಥಿಗಳಿಗೆ ಮೆಡಿಕಲ್ ಕೋರ್ಸ್ಗಳಿಗೆ ಪ್ರವೇಶ ನೀಡಬೇಕೆಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p><p>ಬಿಜೆಪಿ ಸದಸ್ಯರ ವಿರೋಧ ಮತ್ತು ಸಭಾತ್ಯಾಗದ ನಡುವೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ಕೇಳಿಬಂದಿರುವ ನೀಟ್ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಲಾಗಿದೆ.</p><p>ಸಿಎಂ ಎಂ.ಕೆ. ಸ್ಟಾಲಿನ್ ಮಂಡಿಸಿದ ನಿರ್ಣಯವನ್ನು ಬಿಜೆಪಿಯ ಮಿತ್ರ ಪಕ್ಷ ಪಿಎಂಕೆ ಬೆಂಬಲಿಸಿದೆ. </p><p>ಈ ಪರೀಕ್ಷೆಯು ತಾರತಮ್ಯದಿಂದ ಕೂಡಿದ್ದು, ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳನ್ನು ವೈದ್ಯಕೀಯ ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡುತ್ತದೆ. ಅಲ್ಲದೆ, ಪ್ಲಸ್–2 ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ಗೆ ಪ್ರವೇಶ ಕೊಡುವ ರಾಜ್ಯಗಳ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸ್ಟಾಲಿನ್ ವಾದಿಸಿದ್ದಾರೆ.</p><p>ನೀಟ್ ಪರೀಕ್ಷೆಯಿಂದ ಹಲವು ಅನುಕೂಲವಿದ್ದು, ಅದು ರಾಜ್ಯಕ್ಕೆ ಅತ್ಯವಶ್ಯಕ ಎಂದು ಬಿಜೆಪಿ ನಾಯಕ ನೈನರ್ ನಾಗೇಂದ್ರನ್ ತಿಳಿಸಿದ್ದಾರೆ.</p><p>‘ನೀಟ್ ಅತ್ಯಂತ ಅವಶ್ಯಕ. ನೀಟ್ ವಿರುದ್ಧದ ವಿಧಾನಸಭೆಯ ನಿರ್ಣಯವು ಸ್ವೀಕಾರಾರ್ಹವಲ್ಲ. ನಾವು ಸಭಾತ್ಯಾಗ ಮಾಡುತ್ತೇವೆ’ ಎಂದು ಹೇಳಿದ ನಾಗೇಂದ್ರನ್ ಸದನದಿಂದ ಹೊರನಡೆದಿದ್ದಾರೆ.</p><p>ವಿರೋಧ ಪಕ್ಷ ಎಐಎಡಿಎಂಕೆಯ ಯಾವೊಬ್ಬ ಸದಸ್ಯರೂ ಸದನದಲ್ಲಿ ಹಾಜರಿರಲಿಲ್ಲ. ವಿಷಯುಕ್ತ ಮದ್ಯ ಸೇವನೆ ಪ್ರಕರಣಕ್ಕೆ ಸಂಬಮಧಿಸಿದಂತೆ ಸದನದಲ್ಲಿ ಗದ್ದಲ ಎಬ್ಬಿಸಿದ್ದರಿಂದ ಎಐಎಡಿಎಂಕೆಯ ಎಲ್ಲ ಸದಸ್ಯರನ್ನು ಅಮಾನತು ಮಾಡಲಾಗಿದೆ.</p><p>ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನಿರಾಕರಿಸಿರುವ ಮೂಲಕ ನೀಟ್, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.</p><p>‘2017ರಲ್ಲಿ ನೀಟ್ ಪರೀಕ್ಷೆ ಕಡ್ಡಾಯ ಮಾಡಿದಾಗಿನಿಂದ ಡಿಎಂಕೆ ಇದನ್ನು ವಿರೋಧಿಸುತ್ತಿದೆ. ನೀಟ್ ರದ್ಧತಿಗೆ ಕೋರಿ ಬೃಹತ್ ಸಹಿ ಸಂಗ್ರಹ ಅಭಿಯಾನವನ್ನೂ ಹಮ್ಮಿಕೊಂಡಿದ್ದೆವು’ಎಂದೂ ಅವರು ಹೇಳಿದ್ದಾರೆ.</p><p>ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಹಲವು ರಾಜ್ಯಗಳಲ್ಲಿ ಹಗರಣದ ಬಗ್ಗೆ ಕೇಳಿಬಂದಿದ್ದು, ಕೆಲವೆಡೆ ಕೃಪಾಂಕ ನೀಡಿ ಬಳಿಕ ಹಿಂಪಡೆಯಲಾಗಿದೆ. ಈ ಸಂಬಂಧ ಸಿಬಿಐ ತನಿಖೆಗೆ ಸಹ ಆದೇಶಿಸಲಾಗಿದೆ. ಹೀಗಾಗಿ, ಹಲವು ರಾಜ್ಯಗಳು ನೀಟ್ ಪರೀಕ್ಷೆಯನ್ನು ವಿರೋಧಿಸುತ್ತಿವೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ(ನೀಟ್) ರಾಜ್ಯಕ್ಕೆ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.</p><p> ಪ್ಲಸ್–2 ಪರೀಕ್ಷೆ ಅಂಕಗಳ ಆಧಾರದ ಮೇಲೆಯೇ ವಿದ್ಯಾರ್ಥಿಗಳಿಗೆ ಮೆಡಿಕಲ್ ಕೋರ್ಸ್ಗಳಿಗೆ ಪ್ರವೇಶ ನೀಡಬೇಕೆಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p><p>ಬಿಜೆಪಿ ಸದಸ್ಯರ ವಿರೋಧ ಮತ್ತು ಸಭಾತ್ಯಾಗದ ನಡುವೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ಕೇಳಿಬಂದಿರುವ ನೀಟ್ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಲಾಗಿದೆ.</p><p>ಸಿಎಂ ಎಂ.ಕೆ. ಸ್ಟಾಲಿನ್ ಮಂಡಿಸಿದ ನಿರ್ಣಯವನ್ನು ಬಿಜೆಪಿಯ ಮಿತ್ರ ಪಕ್ಷ ಪಿಎಂಕೆ ಬೆಂಬಲಿಸಿದೆ. </p><p>ಈ ಪರೀಕ್ಷೆಯು ತಾರತಮ್ಯದಿಂದ ಕೂಡಿದ್ದು, ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳನ್ನು ವೈದ್ಯಕೀಯ ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡುತ್ತದೆ. ಅಲ್ಲದೆ, ಪ್ಲಸ್–2 ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ಗೆ ಪ್ರವೇಶ ಕೊಡುವ ರಾಜ್ಯಗಳ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸ್ಟಾಲಿನ್ ವಾದಿಸಿದ್ದಾರೆ.</p><p>ನೀಟ್ ಪರೀಕ್ಷೆಯಿಂದ ಹಲವು ಅನುಕೂಲವಿದ್ದು, ಅದು ರಾಜ್ಯಕ್ಕೆ ಅತ್ಯವಶ್ಯಕ ಎಂದು ಬಿಜೆಪಿ ನಾಯಕ ನೈನರ್ ನಾಗೇಂದ್ರನ್ ತಿಳಿಸಿದ್ದಾರೆ.</p><p>‘ನೀಟ್ ಅತ್ಯಂತ ಅವಶ್ಯಕ. ನೀಟ್ ವಿರುದ್ಧದ ವಿಧಾನಸಭೆಯ ನಿರ್ಣಯವು ಸ್ವೀಕಾರಾರ್ಹವಲ್ಲ. ನಾವು ಸಭಾತ್ಯಾಗ ಮಾಡುತ್ತೇವೆ’ ಎಂದು ಹೇಳಿದ ನಾಗೇಂದ್ರನ್ ಸದನದಿಂದ ಹೊರನಡೆದಿದ್ದಾರೆ.</p><p>ವಿರೋಧ ಪಕ್ಷ ಎಐಎಡಿಎಂಕೆಯ ಯಾವೊಬ್ಬ ಸದಸ್ಯರೂ ಸದನದಲ್ಲಿ ಹಾಜರಿರಲಿಲ್ಲ. ವಿಷಯುಕ್ತ ಮದ್ಯ ಸೇವನೆ ಪ್ರಕರಣಕ್ಕೆ ಸಂಬಮಧಿಸಿದಂತೆ ಸದನದಲ್ಲಿ ಗದ್ದಲ ಎಬ್ಬಿಸಿದ್ದರಿಂದ ಎಐಎಡಿಎಂಕೆಯ ಎಲ್ಲ ಸದಸ್ಯರನ್ನು ಅಮಾನತು ಮಾಡಲಾಗಿದೆ.</p><p>ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನಿರಾಕರಿಸಿರುವ ಮೂಲಕ ನೀಟ್, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.</p><p>‘2017ರಲ್ಲಿ ನೀಟ್ ಪರೀಕ್ಷೆ ಕಡ್ಡಾಯ ಮಾಡಿದಾಗಿನಿಂದ ಡಿಎಂಕೆ ಇದನ್ನು ವಿರೋಧಿಸುತ್ತಿದೆ. ನೀಟ್ ರದ್ಧತಿಗೆ ಕೋರಿ ಬೃಹತ್ ಸಹಿ ಸಂಗ್ರಹ ಅಭಿಯಾನವನ್ನೂ ಹಮ್ಮಿಕೊಂಡಿದ್ದೆವು’ಎಂದೂ ಅವರು ಹೇಳಿದ್ದಾರೆ.</p><p>ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಹಲವು ರಾಜ್ಯಗಳಲ್ಲಿ ಹಗರಣದ ಬಗ್ಗೆ ಕೇಳಿಬಂದಿದ್ದು, ಕೆಲವೆಡೆ ಕೃಪಾಂಕ ನೀಡಿ ಬಳಿಕ ಹಿಂಪಡೆಯಲಾಗಿದೆ. ಈ ಸಂಬಂಧ ಸಿಬಿಐ ತನಿಖೆಗೆ ಸಹ ಆದೇಶಿಸಲಾಗಿದೆ. ಹೀಗಾಗಿ, ಹಲವು ರಾಜ್ಯಗಳು ನೀಟ್ ಪರೀಕ್ಷೆಯನ್ನು ವಿರೋಧಿಸುತ್ತಿವೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>