<p><strong>ಚೆನ್ನೈ</strong>: ಏಕತೆ ಮತ್ತು ಕೋಮು ಸೌಹಾರ್ದತೆಯನ್ನು ರಕ್ಷಿಸಲು ಹಾಗೂ ಸಂವಿಧಾನದಲ್ಲಿ ನೀಡಲಾಗಿರುವ ಜಾತ್ಯತೀತ ತತ್ವಗಳನ್ನು ಎತ್ತಿಹಿಡಿಯಲು ಪೌರತ್ವ (ತಿದ್ದುಪಡಿ) ಕಾಯ್ದೆ–2019 ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯು ಬುಧವಾರ ಅಂಗೀಕರಿಸಿದೆ.</p>.<p>‘ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸಿಎಎ ವಿರುದ್ಧ ನಿರ್ಣಯವನ್ನು ಮಂಡಿಸಿದರು.</p>.<p>‘ಪ್ರಜಾಪ್ರಭುತ್ವ ತತ್ವಗಳಿಗನುಸಾರ ಸಮಾಜದ ಎಲ್ಲಾ ವರ್ಗಗಳ ಆಕಾಂಕ್ಷೆಗಳು ಮತ್ತು ಕಾಳಜಿಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಆಡಳಿತ ನಡೆಸಬೇಕು. ಆದರೆ, ಈ ಕಾಯ್ದೆಯು ನಿರಾಶ್ರಿತರ ಸಂಕಷ್ಟವನ್ನು ಪರಿಗಣಿಸಿ ಬೆಂಬಲವನ್ನು ನೀಡುವ ಬದಲು ನಿರ್ದಿಷ್ಟ ಧರ್ಮ ಮತ್ತು ದೇಶದ ವ್ಯಕ್ತಿಗಳೊಂದಿಗೆ ತಾರತಮ್ಯ ಮಾಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.</p>.<p>ಈ ನಿರ್ಣಯದ ಅಂಗೀಕಾರದ ವೇಳೆ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಸದಸ್ಯರು ಸದನದಲ್ಲಿ ಇರಲಿಲ್ಲ. ಅಧಿವೇಶನದ ಶೂನ್ಯ ಅವಧಿಯಲ್ಲಿ ಕೆಲವು ಸಮಸ್ಯೆಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಎಐಎಡಿಎಂಕೆ ಸದಸ್ಯರು ಸಭೆಯಿಂದ ಹೊರ ಹೋಗಿದ್ದರು.</p>.<p>ಸಿಎಎ ಕಾಯ್ದೆಯ ವಿರುದ್ಧದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಕೂಡ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಏಕತೆ ಮತ್ತು ಕೋಮು ಸೌಹಾರ್ದತೆಯನ್ನು ರಕ್ಷಿಸಲು ಹಾಗೂ ಸಂವಿಧಾನದಲ್ಲಿ ನೀಡಲಾಗಿರುವ ಜಾತ್ಯತೀತ ತತ್ವಗಳನ್ನು ಎತ್ತಿಹಿಡಿಯಲು ಪೌರತ್ವ (ತಿದ್ದುಪಡಿ) ಕಾಯ್ದೆ–2019 ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯು ಬುಧವಾರ ಅಂಗೀಕರಿಸಿದೆ.</p>.<p>‘ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸಿಎಎ ವಿರುದ್ಧ ನಿರ್ಣಯವನ್ನು ಮಂಡಿಸಿದರು.</p>.<p>‘ಪ್ರಜಾಪ್ರಭುತ್ವ ತತ್ವಗಳಿಗನುಸಾರ ಸಮಾಜದ ಎಲ್ಲಾ ವರ್ಗಗಳ ಆಕಾಂಕ್ಷೆಗಳು ಮತ್ತು ಕಾಳಜಿಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಆಡಳಿತ ನಡೆಸಬೇಕು. ಆದರೆ, ಈ ಕಾಯ್ದೆಯು ನಿರಾಶ್ರಿತರ ಸಂಕಷ್ಟವನ್ನು ಪರಿಗಣಿಸಿ ಬೆಂಬಲವನ್ನು ನೀಡುವ ಬದಲು ನಿರ್ದಿಷ್ಟ ಧರ್ಮ ಮತ್ತು ದೇಶದ ವ್ಯಕ್ತಿಗಳೊಂದಿಗೆ ತಾರತಮ್ಯ ಮಾಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.</p>.<p>ಈ ನಿರ್ಣಯದ ಅಂಗೀಕಾರದ ವೇಳೆ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಸದಸ್ಯರು ಸದನದಲ್ಲಿ ಇರಲಿಲ್ಲ. ಅಧಿವೇಶನದ ಶೂನ್ಯ ಅವಧಿಯಲ್ಲಿ ಕೆಲವು ಸಮಸ್ಯೆಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಎಐಎಡಿಎಂಕೆ ಸದಸ್ಯರು ಸಭೆಯಿಂದ ಹೊರ ಹೋಗಿದ್ದರು.</p>.<p>ಸಿಎಎ ಕಾಯ್ದೆಯ ವಿರುದ್ಧದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಕೂಡ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>