<p><strong>ಚೆನ್ನೈ : </strong> ತಮಿಳುನಾಡಿನಲ್ಲಿ ಐಎಎಡಿಎಂಕೆ ಮೈತ್ರಿ ಹೊರನಡೆದ ಬಗ್ಗೆ ಬಿಜೆಪಿಯು ಶೀಘ್ರದಲ್ಲೇ ತನ್ನ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಿದೆ. ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p>ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಗುಳಿಯುವ ಎಐಡಿಎಂಕೆಯ ನಿರ್ಧಾರವನ್ನು ದುರದೃಷ್ಟಕರ ಎಂದು ಹೇಳಿರುವ ತಮಿಳುನಾಡು ಸಹ ಉಸ್ತುವಾರಿ ಪೊಂಗುಲೇಟಿ ಸುಧಾಕರ ರೆಡ್ಡಿ, ಶೀಘ್ರದಲ್ಲೇ ಪಕ್ಷದ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಹೇಳಿದರು. </p>.<p>‘ಮೈತ್ರಿಯ ಬಗ್ಗೆ ನಾನು ಅಧಿಕೃತವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಕೇಂದ್ರ ನಾಯಕತ್ವವು ತಮಿಳುನಾಡಿನ ಬೆಳವಣಿಗೆಯನ್ನು ಗಮನಿಸುತ್ತಿದೆ. ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ‘ ಎಂದು ಅವರು ತಿಳಿಸಿದರು.</p>.<p>ಎಐಎಡಿಎಂಕೆ ಮೈತ್ರಿ ಮುರಿದುಕೊಂಡ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಹೈಕಮಾಂಡ್ ವರದಿ ಕೇಳಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದರು.</p>.<p>ಎಐಎಡಿಎಂಕೆ ಜತೆ ಸಂಪರ್ಕದಲ್ಲಿದ್ದ ಹಿರಿಯ ನಾಯಕರಿಂದ ಮಾತ್ರ ವಸ್ತು ಸ್ಥಿತಿಯ ಕುರಿತು ವರದಿ ಕೇಳಿರಬಹುದು. ಮೈತ್ರಿ ಬಗ್ಗೆ ಹೈಕಮಾಂಡ್ ಮಾತ್ರ ನಿರ್ಧಾರ ಮಾಡಲಿದೆ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರೊಬ್ಬರು ತಿಳಿಸಿದರು. </p>.<p>ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಅಂತ್ಯಗೊಳಿಸಿರುವ ಎಐಎಡಿಎಂಕೆ, 2024ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ಮೈತ್ರಿ ಕೂಟ ರಚಿಸಿಕೊಳ್ಳುವುದಾಗಿ ಸೋಮವಾರ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ : </strong> ತಮಿಳುನಾಡಿನಲ್ಲಿ ಐಎಎಡಿಎಂಕೆ ಮೈತ್ರಿ ಹೊರನಡೆದ ಬಗ್ಗೆ ಬಿಜೆಪಿಯು ಶೀಘ್ರದಲ್ಲೇ ತನ್ನ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಿದೆ. ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p>ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಗುಳಿಯುವ ಎಐಡಿಎಂಕೆಯ ನಿರ್ಧಾರವನ್ನು ದುರದೃಷ್ಟಕರ ಎಂದು ಹೇಳಿರುವ ತಮಿಳುನಾಡು ಸಹ ಉಸ್ತುವಾರಿ ಪೊಂಗುಲೇಟಿ ಸುಧಾಕರ ರೆಡ್ಡಿ, ಶೀಘ್ರದಲ್ಲೇ ಪಕ್ಷದ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಹೇಳಿದರು. </p>.<p>‘ಮೈತ್ರಿಯ ಬಗ್ಗೆ ನಾನು ಅಧಿಕೃತವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಕೇಂದ್ರ ನಾಯಕತ್ವವು ತಮಿಳುನಾಡಿನ ಬೆಳವಣಿಗೆಯನ್ನು ಗಮನಿಸುತ್ತಿದೆ. ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ‘ ಎಂದು ಅವರು ತಿಳಿಸಿದರು.</p>.<p>ಎಐಎಡಿಎಂಕೆ ಮೈತ್ರಿ ಮುರಿದುಕೊಂಡ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಹೈಕಮಾಂಡ್ ವರದಿ ಕೇಳಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದರು.</p>.<p>ಎಐಎಡಿಎಂಕೆ ಜತೆ ಸಂಪರ್ಕದಲ್ಲಿದ್ದ ಹಿರಿಯ ನಾಯಕರಿಂದ ಮಾತ್ರ ವಸ್ತು ಸ್ಥಿತಿಯ ಕುರಿತು ವರದಿ ಕೇಳಿರಬಹುದು. ಮೈತ್ರಿ ಬಗ್ಗೆ ಹೈಕಮಾಂಡ್ ಮಾತ್ರ ನಿರ್ಧಾರ ಮಾಡಲಿದೆ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರೊಬ್ಬರು ತಿಳಿಸಿದರು. </p>.<p>ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಅಂತ್ಯಗೊಳಿಸಿರುವ ಎಐಎಡಿಎಂಕೆ, 2024ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ಮೈತ್ರಿ ಕೂಟ ರಚಿಸಿಕೊಳ್ಳುವುದಾಗಿ ಸೋಮವಾರ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>